AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ

ಬ್ಯಾಕ್​ ಟು ಬ್ಯಾಕ್​ ಹಿಟ್​ ಕೊಟ್ಟ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಬಾಲಿವುಡ್​ ನಟ ಶಾರುಖ್​ ಖಾನ್​ ಜತೆ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು.

ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ
ಸಮಂತಾ
TV9 Web
| Edited By: |

Updated on: Oct 28, 2021 | 7:32 AM

Share

ಸಮಂತಾ ಸದ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದ ಹೊರತಾಗಿಯೂ ಅವರು ಸಿನಿಮಾ ಕೆಲಸಗಳನ್ನು ಬಿಟ್ಟಿಲ್ಲ. ಚಿತ್ರರಂಗದ ಬಗ್ಗೆ ಅವರು ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಈ ಮಧ್ಯೆ, ಸಮಂತಾ ಅವರಿಗೆ ತಪ್ಪಿ ಹೋಗಿದ್ದ ಆಫರ್​ ಒಂದು ಮರಳಿ ಸಿಕ್ಕಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಬ್ಯಾಕ್​ ಟು ಬ್ಯಾಕ್​ ಹಿಟ್​ ಕೊಟ್ಟ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಬಾಲಿವುಡ್​ ನಟ ಶಾರುಖ್​ ಖಾನ್​ ಜತೆ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು. ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಈ ಕಾರಣಕ್ಕೆ ಅವರು ಶಾರುಖ್​ ಸಿನಿಮಾ ಆಫರ್​ ರಿಜೆಕ್ಟ್​ ಮಾಡಿದ್ದರು. ಆದರೆ, ಆ ಸಂದರ್ಭದಲ್ಲೇ ಅವರ ಕುಟುಂಬದಲ್ಲಿ ಬಿರುಗಾಳಿ ಬೀಸಿತ್ತು. ಸಮಂತಾ ಮತ್ತು ನಾಗ ಚೈತನ್ಯ ಬೇರಾದರು. ಸಮಂತಾಗೆ ಈ ಆಫರ್​ ತಪ್ಪೋಕೆ ನಾಗ ಚೈತನ್ಯ ಅವರೇ ನೇರ ಕಾರಣ ಎಂದು ಅನೇಕರು ದೂರಿದ್ದರು. ಅಚ್ಚರಿ ಎಂಬಂತೆ ಈಗ ಈ ಆಫರ್ ಮರಳಿ ಸಮಂತಾ ಬಳಿ ಬಂದಿದೆ.

ಎಲ್ಲರಿಗೂ ಗೊತ್ತಿರುವಂತೆ ನಯನತಾರಾಗೆ ಶೀಘ್ರವೇ ಮದುವೆ ಆಗುತ್ತಿದೆ. ಬಹುಕಾಲದ ಗೆಳೆಯ, ನಿರ್ದೇಶಕ ವಿಘ್ನೇಶ್​ ಶಿವನ್​ ಜತೆ ಅವರು ಹಸೆಮಣೆ ಏರುತ್ತಿದ್ದಾರೆ. ಇದಕ್ಕೆ ಅವರು ತಯಾರಿ ಆಂಭಿಸಿದ್ದಾರೆ. ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಶೂಟಿಂಗ್​ ಮುಗಿದ ನಂತರ ನಯನತಾರಾ ಹಸೆಮಣೆ ಏರಬೇಕಿತ್ತು. ಆದರೆ, ಶಾರುಖ್​ ಖಾನ್​ ಮಗ ಆರ್ಯನ್ ಖಾನ್​ ಅವರನ್ನು ಜೈಲಿನಿಂದ ಹೊರ ತರುವ ಪ್ರಯತ್ನದಲ್ಲಿದ್ದಾರೆ. ಈ ಕಾರಣದಿಂದ ಅವರು ಶೂಟಿಂಗ್​ ಸೆಟ್​ಗೆ ಬರುತ್ತಿಲ್ಲ. ಇದರಿಂದ ಶೂಟಿಂಗ್​ ವಿಳಂಬವಾಗಿದೆ. ಈ ಕಾರಣಕ್ಕೆ ನಯನತಾರಾ ಸಿನಿಮಾದಿಂದ ಹೊರ ನಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ, ನಿರ್ದೇಶಕರು ಮರಳಿ ಸಮಂತಾ ಬಳಿಯೇ ತೆರಳಿದ್ದಾರೆ. ಸಮಂತಾ ಮರುಮಾತಿಲ್ಲದೆ ಈ ಆಫರ್​ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್