AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ

ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಹಾಗಾಗಿ ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ
ಶಾರುಖ್ ಖಾನ್, ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Oct 17, 2021 | 9:36 AM

Share

ಕಳೆದ ಕೆಲವು ತಿಂಗಳಿನಿಂದ ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡಿದವು. ಅವರು ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ನಂತರವೂ ಅದರ ಕುರಿತಾದ ಗಾಸಿಪ್​ಗಳಿಗೆ ಬ್ರೇಕ್​ ಬಿದ್ದಿಲ್ಲ. ಅಷ್ಟೊಂದು ಅನ್ಯೋನ್ಯವಾಗಿದ್ದ ಜೋಡಿ ಏಕಾಏಕಿ ವಿಚ್ಛೇದನದ ತೀರ್ಮಾನ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬುದನ್ನು ಗಾಸಿಪ್​ ಮಂದಿ ಕೆದಕುತ್ತಲೇ ಇದ್ದಾರೆ. ಈ ನಡುವೆ ಸಮಂತಾಗೆ ಆದ ಎರಡು ದೊಡ್ಡ ನಷ್ಟದ ಬಗ್ಗೆ ಈಗ ಗುಸುಗುಸು ಹಬ್ಬಿದೆ. ಮಗು ಪಡೆಯಬೇಕು ಎಂದುಕೊಂಡಿದ್ದ ಸಮಂತಾ ಆಸೆ ಮಣ್ಣು ಪಾಲಾಯಿತು. ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈತಪ್ಪಿ ಹೋಯಿತು ಎಂಬ ಗಾಸಿಪ್​ ಕೇಳಿಬಂದಿದೆ.

ಬಾಲಿವುಡ್​ ನಟ ಶಾರುಖ್​ ಖಾನ್​ ಜೊತೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು. ಅದನ್ನು ವೈಯಕ್ತಿಕ ಕಾರಣದಿಂದ ಸಮಂತಾ ರಿಜೆಕ್ಟ್​ ಮಾಡಿದ್ದರಂತೆ. ಏನು ಆ ವೈಯಕ್ತಿಕ ಕಾರಣ? ತಾಯಿಯಾಗುವ ಹಂಬಲ!

ಹೌದು, ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಅದಕ್ಕಾಗಿಯೇ ಅವರು ‘ಶಾಕುಂತಲಂ’ ಚಿತ್ರದ ಶೂಟಿಂಗ್​ ಬೇಗ ಬೇಗ ಮುಗಿಯುವಂತೆ ಒತ್ತಾಯ ಹೇರಿದ್ದರು. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ವೈಮನಸ್ಸು ಮೂಡಿತು. ಅದು ವಿಚ್ಛೇದನದಲ್ಲಿ ಕೊನೆಯಾಯಿತು. ಮಗು ಪಡೆಯಬೇಕು ಎಂಬ ಸಮಂತಾ ಆಸೆ ಈಡೇರಲೇ ಇಲ್ಲ. ಅತ್ತ, ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈ ಹಿಡಿಯಲಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸದ್ಯ ಸಮಂತಾ ಮತ್ತೆ ಸಿನಿಮಾಗಳನ್ನು ಒಪ್ಪಿಕೊಳ್ಳುವತ್ತ ಗಮನ ಹರಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ಯಶಸ್ಸಿನ ಬಳಿಕ ಅವರಿಗೆ ಬೇಡಿಕೆ ಹೆಚ್ಚಿದೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದ್ದು, ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಇದು ವಿಚ್ಛೇದನದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ.

ಇದನ್ನೂ ಓದಿ:

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ