AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ

ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಹಾಗಾಗಿ ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ
ಶಾರುಖ್ ಖಾನ್, ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Oct 17, 2021 | 9:36 AM

Share

ಕಳೆದ ಕೆಲವು ತಿಂಗಳಿನಿಂದ ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡಿದವು. ಅವರು ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ನಂತರವೂ ಅದರ ಕುರಿತಾದ ಗಾಸಿಪ್​ಗಳಿಗೆ ಬ್ರೇಕ್​ ಬಿದ್ದಿಲ್ಲ. ಅಷ್ಟೊಂದು ಅನ್ಯೋನ್ಯವಾಗಿದ್ದ ಜೋಡಿ ಏಕಾಏಕಿ ವಿಚ್ಛೇದನದ ತೀರ್ಮಾನ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬುದನ್ನು ಗಾಸಿಪ್​ ಮಂದಿ ಕೆದಕುತ್ತಲೇ ಇದ್ದಾರೆ. ಈ ನಡುವೆ ಸಮಂತಾಗೆ ಆದ ಎರಡು ದೊಡ್ಡ ನಷ್ಟದ ಬಗ್ಗೆ ಈಗ ಗುಸುಗುಸು ಹಬ್ಬಿದೆ. ಮಗು ಪಡೆಯಬೇಕು ಎಂದುಕೊಂಡಿದ್ದ ಸಮಂತಾ ಆಸೆ ಮಣ್ಣು ಪಾಲಾಯಿತು. ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈತಪ್ಪಿ ಹೋಯಿತು ಎಂಬ ಗಾಸಿಪ್​ ಕೇಳಿಬಂದಿದೆ.

ಬಾಲಿವುಡ್​ ನಟ ಶಾರುಖ್​ ಖಾನ್​ ಜೊತೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು. ಅದನ್ನು ವೈಯಕ್ತಿಕ ಕಾರಣದಿಂದ ಸಮಂತಾ ರಿಜೆಕ್ಟ್​ ಮಾಡಿದ್ದರಂತೆ. ಏನು ಆ ವೈಯಕ್ತಿಕ ಕಾರಣ? ತಾಯಿಯಾಗುವ ಹಂಬಲ!

ಹೌದು, ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಅದಕ್ಕಾಗಿಯೇ ಅವರು ‘ಶಾಕುಂತಲಂ’ ಚಿತ್ರದ ಶೂಟಿಂಗ್​ ಬೇಗ ಬೇಗ ಮುಗಿಯುವಂತೆ ಒತ್ತಾಯ ಹೇರಿದ್ದರು. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ವೈಮನಸ್ಸು ಮೂಡಿತು. ಅದು ವಿಚ್ಛೇದನದಲ್ಲಿ ಕೊನೆಯಾಯಿತು. ಮಗು ಪಡೆಯಬೇಕು ಎಂಬ ಸಮಂತಾ ಆಸೆ ಈಡೇರಲೇ ಇಲ್ಲ. ಅತ್ತ, ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈ ಹಿಡಿಯಲಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸದ್ಯ ಸಮಂತಾ ಮತ್ತೆ ಸಿನಿಮಾಗಳನ್ನು ಒಪ್ಪಿಕೊಳ್ಳುವತ್ತ ಗಮನ ಹರಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ಯಶಸ್ಸಿನ ಬಳಿಕ ಅವರಿಗೆ ಬೇಡಿಕೆ ಹೆಚ್ಚಿದೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದ್ದು, ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಇದು ವಿಚ್ಛೇದನದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ.

ಇದನ್ನೂ ಓದಿ:

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ