ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ

ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಹಾಗಾಗಿ ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ
ಶಾರುಖ್ ಖಾನ್, ಸಮಂತಾ, ನಾಗ ಚೈತನ್ಯ
Follow us
| Updated By: ಮದನ್​ ಕುಮಾರ್​

Updated on: Oct 17, 2021 | 9:36 AM

ಕಳೆದ ಕೆಲವು ತಿಂಗಳಿನಿಂದ ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡಿದವು. ಅವರು ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ನಂತರವೂ ಅದರ ಕುರಿತಾದ ಗಾಸಿಪ್​ಗಳಿಗೆ ಬ್ರೇಕ್​ ಬಿದ್ದಿಲ್ಲ. ಅಷ್ಟೊಂದು ಅನ್ಯೋನ್ಯವಾಗಿದ್ದ ಜೋಡಿ ಏಕಾಏಕಿ ವಿಚ್ಛೇದನದ ತೀರ್ಮಾನ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬುದನ್ನು ಗಾಸಿಪ್​ ಮಂದಿ ಕೆದಕುತ್ತಲೇ ಇದ್ದಾರೆ. ಈ ನಡುವೆ ಸಮಂತಾಗೆ ಆದ ಎರಡು ದೊಡ್ಡ ನಷ್ಟದ ಬಗ್ಗೆ ಈಗ ಗುಸುಗುಸು ಹಬ್ಬಿದೆ. ಮಗು ಪಡೆಯಬೇಕು ಎಂದುಕೊಂಡಿದ್ದ ಸಮಂತಾ ಆಸೆ ಮಣ್ಣು ಪಾಲಾಯಿತು. ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈತಪ್ಪಿ ಹೋಯಿತು ಎಂಬ ಗಾಸಿಪ್​ ಕೇಳಿಬಂದಿದೆ.

ಬಾಲಿವುಡ್​ ನಟ ಶಾರುಖ್​ ಖಾನ್​ ಜೊತೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು. ಅದನ್ನು ವೈಯಕ್ತಿಕ ಕಾರಣದಿಂದ ಸಮಂತಾ ರಿಜೆಕ್ಟ್​ ಮಾಡಿದ್ದರಂತೆ. ಏನು ಆ ವೈಯಕ್ತಿಕ ಕಾರಣ? ತಾಯಿಯಾಗುವ ಹಂಬಲ!

ಹೌದು, ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಅದಕ್ಕಾಗಿಯೇ ಅವರು ‘ಶಾಕುಂತಲಂ’ ಚಿತ್ರದ ಶೂಟಿಂಗ್​ ಬೇಗ ಬೇಗ ಮುಗಿಯುವಂತೆ ಒತ್ತಾಯ ಹೇರಿದ್ದರು. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶವನ್ನೂ ತಳ್ಳಿ ಹಾಕಿದ್ದರು. ಆದರೆ ಕಡೆಗೆ ಆಗಿದ್ದೇ ಬೇರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ವೈಮನಸ್ಸು ಮೂಡಿತು. ಅದು ವಿಚ್ಛೇದನದಲ್ಲಿ ಕೊನೆಯಾಯಿತು. ಮಗು ಪಡೆಯಬೇಕು ಎಂಬ ಸಮಂತಾ ಆಸೆ ಈಡೇರಲೇ ಇಲ್ಲ. ಅತ್ತ, ಶಾರುಖ್​ ಜೊತೆ ನಟಿಸುವ ಅವಕಾಶವೂ ಕೈ ಹಿಡಿಯಲಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸದ್ಯ ಸಮಂತಾ ಮತ್ತೆ ಸಿನಿಮಾಗಳನ್ನು ಒಪ್ಪಿಕೊಳ್ಳುವತ್ತ ಗಮನ ಹರಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ಯಶಸ್ಸಿನ ಬಳಿಕ ಅವರಿಗೆ ಬೇಡಿಕೆ ಹೆಚ್ಚಿದೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದ್ದು, ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಇದು ವಿಚ್ಛೇದನದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ.

ಇದನ್ನೂ ಓದಿ:

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ