ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?

ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?
ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 12, 2024 | 11:39 AM

ನಟಿ ಸಮಂತಾ ಅವರು ಹಿರಿತೆರೆಯಿಂದ ದೂರ ಆಗಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಅವರು ತಮ್ಮದೇ ಲೋಕದಲ್ಲಿ ಇದ್ದಾರೆ. ದೇಶ-ವಿದೇಶ ಸುತ್ತಿತ್ತಿದ್ದಾರೆ. ಸಿನಿಮಾ ಕೆಲಸ ಎಂದರೆ ದೂರ ಹೋಗುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ, ಚಿತ್ರರಂಗದ ಬಗ್ಗೆ ಸಂಪೂರ್ಣ ಆಸಕ್ತಿ ಕಳೆದುಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಈಗ ಅವರ ಮುಂದಿನ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ಇದು ಅನೇಕ ಪ್ರಶ್ನೆಗಳ್ನು ಹುಟ್ಟುಹಾಕಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇದು ಸಾಕಷ್ಟು ಅಚ್ಚರಿ ಸೃಷ್ಟಿ ಮಾಡಿತ್ತು. ಅವರ ಮುಂದಿನ ಸಿನಿಮಾ ಯಾವುದು ಎಂದು ಫ್ಯಾನ್ಸ್ ಕೇಳುತ್ತಲೇ ಬರುತ್ತಿದ್ದರು. ಆದರೆ, ಸಮಂತಾ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈಗ ಸಮಂತಾ ಅವರು ಗೌತಮ್ ಮೆನನ್ ನಿರ್ದೇಶನದ ಸಿನಿಮಾದಲ್ಲಿ ನಟಿಸಬೇಕಿತ್ತು. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಹಾಗಾಗುತ್ತಿಲ್ಲ ಎನ್ನಲಾಗಿದೆ.

ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ವೆಬ್ ಸೀರಿಸ್​ಗಳ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪಿಸಿ, ವೆಬ್ ಸೀರಿಸ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಮಂತಾ ಮುಂದಿನ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ನಿರಂತರವಾಗಿ ಕಾಡುತ್ತಿದೆ. ಅವರ ಹೊಸ ಸಿನಿಮಾ ಘೋಷಿಸಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಸಮಂತಾಗೆ ಚಿಕಿತ್ಸೆ ನೀಡುತ್ತಿರುವ ವ್ಯಕ್ತಿ ವೈದ್ಯನೇ ಅಲ್ಲ; ಹೊರಬಿತ್ತು ಶಾಕಿಂಗ್ ವಿಚಾರ

ಸಮಂತಾ ಅವರು ಆರೋಗ್ಯ ಸಮಸ್ಯೆ ಕಾರಣಕ್ಕೂ ಆಗಾಗ ಸುದ್ದಿ ಆಗುತ್ತಾರೆ. ಅವರು ಇತ್ತೀಚೆಗೆ ಹೈಡ್ರೋಜನ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಸೇವಿಸಿ ವೈರಲ್ ಇನ್​ಫೆಕ್ಷನ್​ನಿಂದ ಬಚಾವ್ ಆಗಬಹುದು ಎಂದು ಹೇಳಿದ್ದರು. ಇದು ವಿಷಕಾರಿ ಎಂದು ಅನೇಕ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ