AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?

ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?
ಸಮಂತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 12, 2024 | 11:39 AM

Share

ನಟಿ ಸಮಂತಾ ಅವರು ಹಿರಿತೆರೆಯಿಂದ ದೂರ ಆಗಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಅವರು ತಮ್ಮದೇ ಲೋಕದಲ್ಲಿ ಇದ್ದಾರೆ. ದೇಶ-ವಿದೇಶ ಸುತ್ತಿತ್ತಿದ್ದಾರೆ. ಸಿನಿಮಾ ಕೆಲಸ ಎಂದರೆ ದೂರ ಹೋಗುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ, ಚಿತ್ರರಂಗದ ಬಗ್ಗೆ ಸಂಪೂರ್ಣ ಆಸಕ್ತಿ ಕಳೆದುಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಈಗ ಅವರ ಮುಂದಿನ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ಇದು ಅನೇಕ ಪ್ರಶ್ನೆಗಳ್ನು ಹುಟ್ಟುಹಾಕಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇದು ಸಾಕಷ್ಟು ಅಚ್ಚರಿ ಸೃಷ್ಟಿ ಮಾಡಿತ್ತು. ಅವರ ಮುಂದಿನ ಸಿನಿಮಾ ಯಾವುದು ಎಂದು ಫ್ಯಾನ್ಸ್ ಕೇಳುತ್ತಲೇ ಬರುತ್ತಿದ್ದರು. ಆದರೆ, ಸಮಂತಾ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈಗ ಸಮಂತಾ ಅವರು ಗೌತಮ್ ಮೆನನ್ ನಿರ್ದೇಶನದ ಸಿನಿಮಾದಲ್ಲಿ ನಟಿಸಬೇಕಿತ್ತು. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಹಾಗಾಗುತ್ತಿಲ್ಲ ಎನ್ನಲಾಗಿದೆ.

ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ವೆಬ್ ಸೀರಿಸ್​ಗಳ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪಿಸಿ, ವೆಬ್ ಸೀರಿಸ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಮಂತಾ ಮುಂದಿನ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ನಿರಂತರವಾಗಿ ಕಾಡುತ್ತಿದೆ. ಅವರ ಹೊಸ ಸಿನಿಮಾ ಘೋಷಿಸಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಸಮಂತಾಗೆ ಚಿಕಿತ್ಸೆ ನೀಡುತ್ತಿರುವ ವ್ಯಕ್ತಿ ವೈದ್ಯನೇ ಅಲ್ಲ; ಹೊರಬಿತ್ತು ಶಾಕಿಂಗ್ ವಿಚಾರ

ಸಮಂತಾ ಅವರು ಆರೋಗ್ಯ ಸಮಸ್ಯೆ ಕಾರಣಕ್ಕೂ ಆಗಾಗ ಸುದ್ದಿ ಆಗುತ್ತಾರೆ. ಅವರು ಇತ್ತೀಚೆಗೆ ಹೈಡ್ರೋಜನ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಸೇವಿಸಿ ವೈರಲ್ ಇನ್​ಫೆಕ್ಷನ್​ನಿಂದ ಬಚಾವ್ ಆಗಬಹುದು ಎಂದು ಹೇಳಿದ್ದರು. ಇದು ವಿಷಕಾರಿ ಎಂದು ಅನೇಕ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ