AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಮುಖದಲ್ಲಿ ಮತ್ತೆ ಅರಳಿತು ನಗು; 4 ವಿಶೇಷ ಕಾರಣಕ್ಕೆ ಸಂಭ್ರಮಿಸಿದ ‘ಖುಷಿ’ ಚಿತ್ರತಂಡ

Samantha Ruth Prabhu | Vijay Deverakonda: ಸಮಂತಾ ಅವರ ಅನಾರೋಗ್ಯದಿಂದ ಶೂಟಿಂಗ್​ ನಿಂತಿದ್ದಕ್ಕಾಗಿ ನಿರ್ಮಾಪಕರಿಗೆ ಸಾಕಷ್ಟು ನಷ್ಟ ಆಗಿತ್ತು. ಈಗ ಸಮಂತಾ ಮರಳಿ ಬಂದಿರುವುದರಿಂದ ಮತ್ತೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ.

Samantha: ಸಮಂತಾ ಮುಖದಲ್ಲಿ ಮತ್ತೆ ಅರಳಿತು ನಗು; 4 ವಿಶೇಷ ಕಾರಣಕ್ಕೆ ಸಂಭ್ರಮಿಸಿದ ‘ಖುಷಿ’ ಚಿತ್ರತಂಡ
‘ಖುಷಿ’ ಚಿತ್ರತಂಡದ ಜೊತೆ ಸಮಂತಾ
ಮದನ್​ ಕುಮಾರ್​
|

Updated on:Mar 09, 2023 | 2:59 PM

Share

ಜನಪ್ರಿಯ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರ ಜೀವನದಲ್ಲಿ ಹೊಸ ಬೆಳಕು ಮೂಡುತ್ತಿದೆ. Myositis ಕಾಯಿಲೆಯಿಂದ ಬಳಲುತ್ತಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ. ಮೊದಲಿನಂತೆ ಸ್ಟ್ರಾಂಗ್​ ಆಗಿ ಸಿನಿಮಾದ ಕೆಲಸಗಳಿಗೆ ಮರಳಿದ್ದಾರೆ. ಚಿಕಿತ್ಸೆ ಮತ್ತು ವಿಶ್ರಾಂತಿ ಸಲುವಾಗಿ ಬ್ರೇಕ್​ ತೆಗೆದುಕೊಂಡಿದ್ದ ಅವರು ಈಗ ‘ಖುಷಿ’ ಚಿತ್ರದ (Kushi Movie) ಶೂಟಿಂಗ್​ಗೆ ಮರಳಿದ್ದಾರೆ. ಅವರು ಸೆಟ್​ಗೆ ಕಾಲಿಡುತ್ತಿದ್ದಂತೆಯೇ ಇಡೀ ಸಿನಿಮಾ ತಂಡದವರು ಕೇಕ್​ ಕಟ್​ ಮಾಡಿ ಸಂಭ್ರಮಿಸಿದ್ದಾರೆ. ಸಮಂತಾ (Samantha) ಅವರು ಶೂಟಿಂಗ್​ಗೆ ಮರಳಿರುವುದು ಮಾತ್ರವೇ ಈ ಖುಷಿಗೆ ಕಾರಣವಲ್ಲ. ಇನ್ನೂ ಮೂರು ಸ್ಪೆಷಲ್​ ಕಾರಣಗಳಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಮಂತಾ ಅವರು ‘ಸಿಟಾಡೆಲ್​’ ವೆಬ್​ ಸರಣಿಯಲ್ಲಿ ನಟಿಸುತ್ತಿದ್ದಾರೆ. ಅದರ ಶೂಟಿಂಗ್ ಭರದಿಂದ ಸಾಗುತ್ತಿದೆ.​ ಅನಾರೋಗ್ಯದ ಸಮಸ್ಯೆ ಏನೇ ಇದ್ದರೂ ಕೂಡ ಸಾಕಷ್ಟು ಕಷ್ಟಪಟ್ಟು ಅವರು ಮೊದಲ ಶೆಡ್ಯೂಲ್​ ಶೂಟಿಂಗ್​ ಮುಗಿಸಿದ್ದಾರೆ. ಸಮಂತಾ ಅಭಿಮಾನಿಗಳ ಖುಷಿಗೆ ಇದು ಸಹ ಒಂದು ಕಾರಣ. ಇನ್ನು, ಸಮಂತಾ ಅವರು ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ​ದ್ದಾರೆ. ಆ ಕಾರಣದಿಂದಲೂ ‘ಖುಷಿ’ ತಂಡದವರು ಕೇಕ್​ ಕಟ್​ ಮಾಡಿದ್ದಾರೆ. ‘ಮಹಿಳಾ ದಿನಾಚರಣೆ’ ಸಂದರ್ಭದಲ್ಲೇ ಅವರು ‘ಖುಷಿ’ ಸಿನಿಮಾದ ಶೂಟಿಂಗ್​ಗೆ ಬಂದಿದ್ದಾರೆ. ಈ ಎಲ್ಲ ಕಾರಣದಿಂದಾಗಿ ಚಿತ್ರತಂಡದವರು ಸಮಂತಾ ಜೊತೆ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Samantha: ನಾಗ ಚೈತನ್ಯಗೆ ಮತ್ತೆ ಕಾಡಿತು ಮಾಜಿ ಪತ್ನಿ ಸಮಂತಾ ನೆನಪು; ಹಳೇ ಫೋಟೋ ಹಂಚಿಕೊಂಡ ನಟ

ಸಮಂತಾ ರುತ್​ ಪ್ರಭು ಅವರು ಸಾಕಷ್ಟು ಅಡೆತಡೆಗಳನ್ನು ಎದುರಿಸಿದ್ದಾರೆ. ‘ಪುಷ್ಪ’ ಸಿನಿಮಾದ ‘ಹೂ ಅಂತಿಯಾ ಮಾವ..’ ಹಾಡಿನಲ್ಲಿ ಡ್ಯಾನ್ಸ್​ ಮಾಡಿದ್ದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ನಟಿಸಿದ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್​ ಹೆಚ್ಚಾಗಿತ್ತು. ಆದರೆ ಅದೇ ಸಮಯಕ್ಕೆ ಅವರಿಗೆ Myositis ಕಾಯಿಲೆ ಬಂದಿದ್ದರಿಂದ ಹೊಸ ಅವಕಾಶಗಳನ್ನು ಒಪ್ಪಿಕೊಳ್ಳುವುದು ಕಷ್ಟ ಆಯಿತು. ಈಗಾಗಲೇ ಒಪ್ಪಿಕೊಂಡಿದ್ದ ಪ್ರಾಜೆಕ್ಟ್​ಗಳನ್ನು ಮುಗಿಸುದು ಕೂಡ ಕಷ್ಟವಾಯಿತು. ಹಾಗಾಗಿ ಅವರು ‘ಖುಷಿ’ ಚಿತ್ರದ ಶೂಟಿಂಗ್​ಗೆ ಬ್ರೇಕ್​ ನೀಡಬೇಕಾಯಿತು.

‘ಖುಷಿ’ ಸಿನಿಮಾಗೆ ವಿಜಯ್​ ದೇವರಕೊಂಡ ಹೀರೋ. ಸಮಂತಾ ಅವರ ಡೇಟ್ಸ್​ ಇಲ್ಲದ ಕಾರಣ ವಿಜಯ್​ ಕೂಡ ಶೂಟಿಂಗ್​ ಮಾಡದೇ ಸುಮ್ಮನೆ ಕೂರುವುದು ಅನಿವಾರ್ಯ ಆಯಿತು. ಈ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಶೂಟಿಂಗ್​ ನಿಂತಿದ್ದರಿಂದ ಸಾಕಷ್ಟು ನಷ್ಟ ಕೂಡ ಆಗಿದೆ. ಆದರೆ ಈಗ ಸಮಂತಾ ಅವರು ಮರಳಿ ಬಂದಿರುವುದರಿಂದ ಆದಷ್ಟು ಬೇಗ ಚಿತ್ರೀಕರಣ ಮುಗಿಸಲು ಚಿತ್ರತಂಡ ಶ್ರಮಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:59 pm, Thu, 9 March 23

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ