AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ

ಸೋಶಿಯಲ್​ ಮೀಡಿಯಾದಲ್ಲಿ ಒಂದು ಫೋಟೋ ವೈರಲ್​ ಆಗಿದೆ. ಅದು ಸಮಂತಾ ರುತ್​ ಪ್ರಭು ಅವರ ಫೋಟೋ ಎಂದು ಕೆಲವರು ಪೋಸ್ಟ್​ ಮಾಡಿದ್ದಾರೆ. ಆದರೆ ಅದು ಮಾರ್ಫ್​ ಮಾಡಿದ ಫೋಟೋ ಎಂಬುದು ತಿಳಿದುಬಂದಿದೆ. ಈ ವೈರಲ್​ ಫೋಟೋದ ವಿಚಾರದ ಬಗ್ಗೆ ಸಮಂತಾ ಅವರು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ
ಸಮಂತಾ
ಮದನ್​ ಕುಮಾರ್​
|

Updated on: May 06, 2024 | 6:55 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ವಿವಾದಗಳಿಂದ ಆದಷ್ಟು ದೂರ ಇರಲು ಪ್ರಯತ್ನಿಸುತ್ತಾರೆ. ಆದರೂ ಕೆಲವೊಮ್ಮೆ ಕಿರಿಕ್​ ಶುರುವಾಗುತ್ತದೆ. ಸಾರ್ವಜನಿಕ ವಲಯದಲ್ಲಿ ಇರುವ ವ್ಯಕ್ತಿ ಆದ್ದರಿಂದ ಅನಗತ್ಯ ಕಾಂಟ್ರವರ್ಸಿಗಳು ಕೂಡ ಆಗಾಗ ಸೃಷ್ಟಿ ಆಗುತ್ತವೆ. ಇತ್ತೀಚೆಗೆ ಅವರದ್ದು ಎನ್ನಲಾದ ಅರೆ ಬೆತ್ತಲೆ ಫೋಟೋವೊಂದು (Samantha Viral Photo) ವೈರಲ್​ ಆಗಿತ್ತು. ಆ ಘಟನೆಯ ಬಗ್ಗೆ ಸಮಂತಾ (Samantha) ಅವರು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳಿಗೆ ತಮ್ಮ ಪ್ರತಿಕ್ರಿಯೆ ಏನು ಎಂಬುದನ್ನು ಅವರು ಮಾರ್ಮಿಕವಾಗಿ ತಿಳಿಸಿದ್ದಾರೆ.

ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಆಗಾಗ ಮಾಹಿತಿ ಹಂಚಿಕೊಳ್ಳುತ್ತಾರೆ. ಅನಾರೋಗ್ಯಕ್ಕೆ ಅವರು ವಿವಿಧ ಬಗೆಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಕುರಿತು ಅವರು ಕೆಲವು ಫೋಟೋಗಳನ್ನು ಇತ್ತೀಚೆಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದರು. ಆದರೆ ಅವರು ಅರೆ ಬೆತ್ತಲೆ ಫೋಟೋ ಅಪ್​ಲೋಡ್​ ಮಾಡಿ, ನಂತರ ಡಿಲೀಟ್​ ಮಾಡಿದ್ದಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದರು.

ಮಾರ್ಫ್​ ಮಾಡಿದ ಅರೆ ಬೆತ್ತಲೆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟು, ಅದು ಸಮಂತಾ ಅವರ ಫೋಟೋ ಎಂದು ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದರು. ಅದರ ಬೆನ್ನಲ್ಲೇ ಸಮಂತಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಂದು ಕೋಟ್​ ಹಂಚಿಕೊಂಡಿದ್ದಾರೆ. ‘ನಿಮ್ಮನ್ನು ನೀವು ಸಾಬೀತುಪಡಿಸುವ ಅಗತ್ಯ ಇಲ್ಲದೇ ಅಥವಾ ಸ್ಪಷ್ಟನೆ ನೀಡುವ ಅಗತ್ಯ ಇಲ್ಲದೇ ಬದುಕುವುದೇ ನಿಜವಾದ ಸಾಧನೆ’ ಎಂಬರ್ಥ ಬರುವಂತಹ ಕೋಟ್​ ಇದಾಗಿದೆ. ಆ ಮೂಲಕ, ತಾವು ಇಂಥದ್ದಕ್ಕೆಲ್ಲ ಪ್ರತಿಕ್ರಿಯೆ, ಸ್ಪಷ್ಟನೆ ನೀಡುವುದಿಲ್ಲ ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಹಲವು ಪ್ರಾಜೆಕ್ಟ್​ಗಳಲ್ಲಿ ಸಮಂತಾ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ಜನ್ಮದಿನದ ಪ್ರಯುಕ್ತ ‘ಮಾ ಇಂಟಿ ಬಂಗಾರಂ’ ಸಿನಿಮಾ ಅನೌನ್ಸ್​ ಆಯಿತು. ಅಲ್ಲದೇ ಅದರ ಪೋಸ್ಟರ್​ ಕೂಡ ಅನಾವರಣ ಆಯಿತು. ಅನಾರೋಗ್ಯದ ನಡುವೆಯೂ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ವರುಣ್​ ಧವನ್​ ಜೊತೆ ಸಮಂತಾ ನಟಿಸಿರುವ ‘ಹನಿ ಬನಿ’ ವೆಬ್​ ಸಿರೀಸ್​ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು