AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ

ಸೋಶಿಯಲ್​ ಮೀಡಿಯಾದಲ್ಲಿ ಒಂದು ಫೋಟೋ ವೈರಲ್​ ಆಗಿದೆ. ಅದು ಸಮಂತಾ ರುತ್​ ಪ್ರಭು ಅವರ ಫೋಟೋ ಎಂದು ಕೆಲವರು ಪೋಸ್ಟ್​ ಮಾಡಿದ್ದಾರೆ. ಆದರೆ ಅದು ಮಾರ್ಫ್​ ಮಾಡಿದ ಫೋಟೋ ಎಂಬುದು ತಿಳಿದುಬಂದಿದೆ. ಈ ವೈರಲ್​ ಫೋಟೋದ ವಿಚಾರದ ಬಗ್ಗೆ ಸಮಂತಾ ಅವರು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ
ಸಮಂತಾ
ಮದನ್​ ಕುಮಾರ್​
|

Updated on: May 06, 2024 | 6:55 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ವಿವಾದಗಳಿಂದ ಆದಷ್ಟು ದೂರ ಇರಲು ಪ್ರಯತ್ನಿಸುತ್ತಾರೆ. ಆದರೂ ಕೆಲವೊಮ್ಮೆ ಕಿರಿಕ್​ ಶುರುವಾಗುತ್ತದೆ. ಸಾರ್ವಜನಿಕ ವಲಯದಲ್ಲಿ ಇರುವ ವ್ಯಕ್ತಿ ಆದ್ದರಿಂದ ಅನಗತ್ಯ ಕಾಂಟ್ರವರ್ಸಿಗಳು ಕೂಡ ಆಗಾಗ ಸೃಷ್ಟಿ ಆಗುತ್ತವೆ. ಇತ್ತೀಚೆಗೆ ಅವರದ್ದು ಎನ್ನಲಾದ ಅರೆ ಬೆತ್ತಲೆ ಫೋಟೋವೊಂದು (Samantha Viral Photo) ವೈರಲ್​ ಆಗಿತ್ತು. ಆ ಘಟನೆಯ ಬಗ್ಗೆ ಸಮಂತಾ (Samantha) ಅವರು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳಿಗೆ ತಮ್ಮ ಪ್ರತಿಕ್ರಿಯೆ ಏನು ಎಂಬುದನ್ನು ಅವರು ಮಾರ್ಮಿಕವಾಗಿ ತಿಳಿಸಿದ್ದಾರೆ.

ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಆಗಾಗ ಮಾಹಿತಿ ಹಂಚಿಕೊಳ್ಳುತ್ತಾರೆ. ಅನಾರೋಗ್ಯಕ್ಕೆ ಅವರು ವಿವಿಧ ಬಗೆಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಕುರಿತು ಅವರು ಕೆಲವು ಫೋಟೋಗಳನ್ನು ಇತ್ತೀಚೆಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದರು. ಆದರೆ ಅವರು ಅರೆ ಬೆತ್ತಲೆ ಫೋಟೋ ಅಪ್​ಲೋಡ್​ ಮಾಡಿ, ನಂತರ ಡಿಲೀಟ್​ ಮಾಡಿದ್ದಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದರು.

ಮಾರ್ಫ್​ ಮಾಡಿದ ಅರೆ ಬೆತ್ತಲೆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟು, ಅದು ಸಮಂತಾ ಅವರ ಫೋಟೋ ಎಂದು ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದರು. ಅದರ ಬೆನ್ನಲ್ಲೇ ಸಮಂತಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಂದು ಕೋಟ್​ ಹಂಚಿಕೊಂಡಿದ್ದಾರೆ. ‘ನಿಮ್ಮನ್ನು ನೀವು ಸಾಬೀತುಪಡಿಸುವ ಅಗತ್ಯ ಇಲ್ಲದೇ ಅಥವಾ ಸ್ಪಷ್ಟನೆ ನೀಡುವ ಅಗತ್ಯ ಇಲ್ಲದೇ ಬದುಕುವುದೇ ನಿಜವಾದ ಸಾಧನೆ’ ಎಂಬರ್ಥ ಬರುವಂತಹ ಕೋಟ್​ ಇದಾಗಿದೆ. ಆ ಮೂಲಕ, ತಾವು ಇಂಥದ್ದಕ್ಕೆಲ್ಲ ಪ್ರತಿಕ್ರಿಯೆ, ಸ್ಪಷ್ಟನೆ ನೀಡುವುದಿಲ್ಲ ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಹಲವು ಪ್ರಾಜೆಕ್ಟ್​ಗಳಲ್ಲಿ ಸಮಂತಾ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ಜನ್ಮದಿನದ ಪ್ರಯುಕ್ತ ‘ಮಾ ಇಂಟಿ ಬಂಗಾರಂ’ ಸಿನಿಮಾ ಅನೌನ್ಸ್​ ಆಯಿತು. ಅಲ್ಲದೇ ಅದರ ಪೋಸ್ಟರ್​ ಕೂಡ ಅನಾವರಣ ಆಯಿತು. ಅನಾರೋಗ್ಯದ ನಡುವೆಯೂ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ವರುಣ್​ ಧವನ್​ ಜೊತೆ ಸಮಂತಾ ನಟಿಸಿರುವ ‘ಹನಿ ಬನಿ’ ವೆಬ್​ ಸಿರೀಸ್​ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?