Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದುಮುಚ್ಚಿ ಡೇಟಿಂಗ್ ಮಾಡೋದು ನಿಲ್ಲಿಸಿದ ಸಮಂತಾ? ಓಪನ್ ಆಗಿ ಫೋಟೋ ಹಂಚಿಕೊಂಡ ನಟಿ

ಸಮಂತಾ ರುತ್ ಪ್ರಭು ಅವರು ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇತ್ತೀಚೆಗೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 'ದಿ ಫ್ಯಾಮಿಲಿ ಮ್ಯಾನ್' ಮತ್ತು 'ಸಿಟಾಡೆಲ್' ಸರಣಿಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಸಮಂತಾ ಮತ್ತು ರಾಜ್, ಈಗ ಸಂಬಂಧದಲ್ಲಿ ಇದ್ದಾರೆ ಎಂದು ಅಭಿಮಾನಿಗಳು ನಂಬುತ್ತಿದ್ದಾರೆ.

ಕದ್ದುಮುಚ್ಚಿ ಡೇಟಿಂಗ್ ಮಾಡೋದು ನಿಲ್ಲಿಸಿದ ಸಮಂತಾ? ಓಪನ್ ಆಗಿ ಫೋಟೋ ಹಂಚಿಕೊಂಡ ನಟಿ
ರಾಜ್ ಹಾಗೂ ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 03, 2025 | 7:34 AM

ನಟ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಒಬ್ಬಂಟಿ ಆಗಿ ಇದ್ದರು. ಅತ್ತ ನಾಗ ಚೈತನ್ಯ ಮತ್ತೊಂದು ವಿವಾಹ ಆದರೆ, ಸಮಂತಾ ಮಾತ್ರ ಎಲ್ಲ ಕಡೆಗಳಲ್ಲಿ ಒಬ್ಬಂಟಿಯಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಈಗ ಅವರಿಗೂ ಜೀವನದಲ್ಲಿ ಸಂಗಾತಿ ಸಿಕ್ಕರೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸಮಂತಾ ಅವರು ನಿರ್ದೇಶಕ ರಾಜ್ ನಿದಿಮೋರು ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಸುದ್ದಿಗೆ ಈಗ ಮತ್ತಷ್ಟು ಬಲ ಸಿಕ್ಕಿದೆ.

ಸಮಂತಾ ಹಾಗೂ ರಾಜ್ ಇತ್ತೀಚೆಗೆ ಹೆಚ್ಚು ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲು ರಾಜ್ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ಹಾಗೂ ‘ಸಿಟಾಡೆಲ್: ಹನಿ ಬನಿ’ ಸೀರಿಸ್​ಗಳಲ್ಲಿ ಸಮಂತಾ ನಟಿಸಿದ್ದರು. ಆ ಸಂದರ್ಭದಲ್ಲಿ ಇವರ ಮಧ್ಯೆ ಆಪ್ತತೆ ಬೆಳೆದಿದೆ. ಇಷ್ಟು ದಿನ ಕದ್ದುಮುಚ್ಚಿ ಓಡಾಡುತ್ತಿದ್ದ ಇವರು ಈಗ ಓಪನ್ ಆಗಿ ಸುತ್ತಾಟ ಆರಂಭಿಸಿದ್ದು, ಇದರ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಸಮಂತಾ ಅವರು ‘ಪಿಕಲ್​ಬಾ್ ಟೂರ್ನ್​ಮೆಂಟ್’ ಒಂದರಲ್ಲಿ ಭಾಗಿ ಆಗಿದ್ದರು. ಇದರಲ್ಲಿ ರಾಜ್ ಕೂಡ ಸಮಂತಾ ಜೊತೆ ಇದ್ದರು. ಈ ಫೋಟೋಗಳನ್ನು ಸಮಂತಾ ಹಂಚಿಕೊಂಡಿದ್ದು, ಅವರು ನಗು ನಗುತ್ತಾ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ನಿರ್ದೇಶಕನ ಕೈ ಹಿಡಿದು ನಿಂತಿದ್ದಾರೆ. ಇದು ಅನುಮಾಗಳನ್ನು ಹೆಚ್ಚಿಸಿದೆ.

ರಾಜ್ ಅವರಿಗೆ ಈಗಾಗಲೇ ವಿವಾಹ ಆಗಿದೆ. ಅವರು ಶ್ಯಾಮಲಿ ಡೇ ಅವರನ್ನು ಮದುವೆ ಆಗಿದ್ದರು. ಈಗ ಸಮಂತಾ ಜೊತೆ ವಿವಾಹ ಆಗುತ್ತಾರೆ ಎಂದರೆ ಅವರು ಮೊದಲ ಪತ್ನಿಗೆ ವಿಚ್ಛೇದನ ನೀಡಬೇಕಿದೆ. ಈ ರೀತಿಯಲ್ಲಿ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ: ‘ಮುಂದಿನ ಆರು ತಿಂಗಳು ನಗುತ್ತಾ ಇರುತ್ತೇನೆ’; ಅಭಿಮಾನಿಗಳಿಗಾಗಿ ಸಮಂತಾ ಪೋಸ್ಟ್

ಸಮಂತಾ ಹಂಚಿಕೊಂಡ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಸಮಂತಾ ಈ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಬಹುದು. ಅವರು ಹೀಗೆ ನಗುತ್ತಾ ಇರಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಕಳೆದು ಹೋದ ನಗು ಮತ್ತೆ ಸಿಕ್ಕಿದೆ’ ಎಂದು ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ