AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಸೂಯೆಗೆ ನನ್ನಲ್ಲಿ ಜಾಗವಿಲ್ಲ’; ಮಾಜಿ ಪತಿಯ ಮದುವೆ ಬಗ್ಗೆ ಸಮಂತಾ ಪ್ರತಿಕ್ರಿಯೆ

ಸಮಂತಾ ರೂತ್ ಪ್ರಭು ಅವರು ತಮ್ಮ ಮಾಜಿ ಪತಿ ನಾಗಚೈತನ್ಯ ಅವರ ಮರುಮದುವೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅವರು ಯಾವುದೇ ಅಸೂಯೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ತಮ್ಮ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದರೂ, ಧನಾತ್ಮಕವಾಗಿರಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಸೂಯೆ ಅನಾರೋಗ್ಯಕರ ಎಂದು ಅವರು ನಂಬುತ್ತಾರೆ.

‘ಅಸೂಯೆಗೆ ನನ್ನಲ್ಲಿ ಜಾಗವಿಲ್ಲ’; ಮಾಜಿ ಪತಿಯ ಮದುವೆ ಬಗ್ಗೆ ಸಮಂತಾ ಪ್ರತಿಕ್ರಿಯೆ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Feb 06, 2025 | 7:29 AM

Share

ನಟಿ ಸಮಂತಾ ಅವರು ಹೊಸ ಸಿನಿಮಾಗಳನ್ನು ಘೋಷಿಸುತ್ತಿಲ್ಲ. ಇದರ ಜೊತೆಗೆ ಅನಾರೋಗ್ಯ ಸಮಸ್ಯೆ. ಹೀಗೆ ವಿಚ್ಛೇದನದ ಬಳಿಕ ಸಮಂತಾ ಅವರು ಎದುರಿಸಿದ ಸಮಸ್ಯೆಗಳು ಒಂದೆರಡಲ್ಲ. ಈ ಮಧ್ಯೆ ನಾಗ ಚೈತನ್ಯ ಅವರ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿವೆ. ಅವರು ಎರಡನೇ ಮದುವೆ ಕೂಡ ಆಗಿದ್ದಾರೆ. ಈ ವಿಚಾರದಲ್ಲಿ ಸಮಂತಾಗೆ ಅಸೂಯೆ ಇದೆಯೇ? ಈ ಬಗ್ಗೆ ಅವರು ಮೌನ ಮುರಿದಿದ್ದಾರೆ. ಸಂದರ್ಶನ ಒಂದರಲ್ಲಿ ಈ ಬಗ್ಗೆ ಹೇಳಿಕೊಂಡಿದ್ದು, ‘ಅಸೂಯೆಗೆ ನನ್ನಲ್ಲಿ ಜಾಗವಿಲ್ಲ’ ಎಂದಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ಪ್ರೀತಿಸಿ ಮದುವೆ ಆದರು. ಆದರೆ, ನಾಲ್ಕು ವರ್ಷಕ್ಕೆ ಇವರ ಸಂಸಾರ ಕೊನೆ ಆಯಿತು. 2021ರಲ್ಲಿ ಇಬ್ಬರೂ ಬೇರೆ ಆದರು. ಈಗ ನಾಗ ಚೈತನ್ಯ ಅವರು ನಟಿ ಶೋಭಿತಾ ಧುಲಿಪಾಲ್ ಅವರನ್ನು ವಿವಾಹ ಆಗಿದ್ದಾರೆ. ‘ಜಿಕ್ಯೂ’ಗೆ ನೀಡಿದ ಸಂದರ್ಶನದಲ್ಲಿ ಸಮಂತಾಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ.

‘ನಿಮ್ಮ ಎಕ್ಸ್​ (ಮಾಜಿ ಪತಿ) ಜೀವನದಲ್ಲಿ ಎಲ್ಲವನ್ನೂ ಮರೆತು ಮುಂದೆ ಹೋಗಿದ್ದಾರೆ. ಮತ್ತೊಂದು ಸಂಬಂಧದಲ್ಲಿ ಇದ್ದಾರೆ. ಈ ಬಗ್ಗೆ ನಿಮಗೆ ಅಸೂಯೆ ಇದೆಯೇ’ ಎಂದು ಕೇಳಲಾಗಿದೆ. ಇದಕ್ಕೆ ಸಮಂತಾ ನೇರ ಮಾತುಗಳಲ್ಲಿ ಉತ್ತರ ನೀಡಿದ್ದಾರೆ. ‘ನನ್ನ ಹೃದಯದಲ್ಲಿ ಅಸೂಯೆಗೆ ಜಾಗವೇ ಇಲ್ಲ’ ಎಂದು ಸಮಂತಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕದ್ದುಮುಚ್ಚಿ ಡೇಟಿಂಗ್ ಮಾಡೋದು ನಿಲ್ಲಿಸಿದ ಸಮಂತಾ? ಓಪನ್ ಆಗಿ ಫೋಟೋ ಹಂಚಿಕೊಂಡ ನಟಿ

‘ನನ್ನ ಜೀವನದಲ್ಲಿ ನಾನು ಸಾಕಷ್ಟು ಕಷ್ಟಗಳನ್ನು ನೋಡಿದ್ದೇನೆ. ಆದಾಗ್ಯೂ ಒಳ್ಳೆಯದು ಮಾಡಬೇಕು ಎಂಬುದು ನನ್ನ ಉದ್ದೇಶ. ನಾನು ಅಸೂಯೆಯಿಂದ ಸಂಪೂರ್ಣವಾಗಿ ದೂರವೇ ಇದ್ದೇನೆ. ಅದು ನನ್ನ ಅಂತರಂಗದ ಭಾಗವಾಗಿರಲು ನನಗೆ ಇಷ್ಟ ಇಲ್ಲ. ಏನೇ ಕೆಡುಕಾದರೂ ಅದಕ್ಕೆ ಅಸೂಯೆ ಮೂಲ ಕಾರಣ ಎಂದು ನಾನು ಭಾವಿಸುತ್ತೇನೆ. ಉಳಿದಂತೆ ಎಲ್ಲವೂ ಚೆನ್ನಾಗಿದೆ. ಅಸೂಯೆಯಷ್ಟು ಅನಾರೋಗ್ಯಕರವಾದ ವಿಚಾರಕ್ಕೆ ನನ್ನಲ್ಲಿ ಜಾಗವಿಲ್ಲ’ ಎಂದು ಸಮಂತಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ