AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು

Samantha Ruth Prabhu: ರಾಹುಲ್​ ಮತ್ತು ಸಮಂತಾ ನಡುವೆ ಹಲವು ವರ್ಷಗಳಿಂದ ಒಡನಾಟ ಇದೆ. ಸಮಂತಾ ಅನಾರೋಗ್ಯಕ್ಕೆ ಒಳಗಾದಾಗ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ರಾಹುಲ್​ ಮಾಡಿದ್ದರು.

Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು
ಸಮಂತಾ, ರಾಹುಲ್​ ರವೀಂದ್ರನ್​
ಮದನ್​ ಕುಮಾರ್​
|

Updated on: Jun 23, 2023 | 7:40 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಖಾಸಗಿ ಜೀವನದಲ್ಲಿ ಮತ್ತು ವೃತ್ತಿಬದುಕಿನಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ನಟ ನಾಗ ಚೈತನ್ಯ ಜೊತೆ ಅವರು ಹಲವು ವರ್ಷಗಳ ಕಾಲ ಪ್ರೀತಿಯಲ್ಲಿ ಮುಳುಗಿದ್ದರು. ಅವರನ್ನೇ ಮದುವೆಯಾಗಿ ನಾಲ್ಕು ವರ್ಷ ಸಂಸಾರ ಮಾಡಿದರು. ಆದರೆ ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ವಿಚ್ಛೇದನ ಪಡೆದುಕೊಂಡರು. ಈಗ ಸಮಂತಾ (Samantha) ಅವರು ಒಂಟಿಯಾಗಿ ಜೀವನ ನಡೆಸುತ್ತಿದ್ದಾರೆ. ಮತ್ತೊಂದು ಮದುವೆಯ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿದಂತೆ ಕಾಣುತ್ತಿಲ್ಲ. ಈಗ ಅವರ ಜೀವನದಲ್ಲಿ ಸ್ನೇಹಿತರಿಗಾಗಿ ಹೆಚ್ಚು ಸಮಯ ನೀಡುತ್ತಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳ ಮೂಲಕ ಅವರು ಮಾಹಿತಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರು ತಮ್ಮ ಆಪ್ತ ಸ್ನೇಹಿತ ರಾಹುಲ್​​ ರವೀಂದ್ರನ್​ (Rahul Ravindran) ಜೊತೆ ಕಾಲ ಕಳೆದಿದ್ದಾರೆ. ಇಬ್ಬರೂ ಜೊತೆಯಾಗಿ ಊಟ ಸವಿದಿದ್ದಾರೆ.

‘ನಿಮಗೆ ಗೊತ್ತಿರುವ ತುಂಬಾ ಒಳ್ಳೆಯ ವ್ಯಕ್ತಿಯನ್ನು ನೂರರಿಂದ ಗುಣಿಸಿ. ಅಷ್ಟಕ್ಕೆ ಸಮನಾದವರು ನನ್ನ ಬೆಸ್ಟ್​ ಫ್ರೆಂಡ್​ ರಾಹುಲ್​ ರವೀಂದ್ರನ್​. ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ ರಾಹುಲ್’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ಸಮಂತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಾಹುಲ್​​ ರವೀಂದ್ರನ್​ ಅವರು ತೆಲುಗು ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆಗೆ ಸಮಂತಾಗೆ ಹಲವು ವರ್ಷಗಳಿಂದ ಸ್ನೇಹ ಇದೆ. ಸಮಂತಾ ಅವರ ಕಷ್ಟದ ದಿನಗಳಲ್ಲಿ ರಾಹುಲ್​ ಜೊತೆಗಿದ್ದರು. ಹಾಗಾಗಿ ಅವರನ್ನು ಕಂಡರೆ ಸಮಂತಾಗೆ ತುಂಬ ಇಷ್ಟ.

ರಾಹುಲ್​ ರವೀಂದ್ರನ್​ ಅವರು 2006ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದೆರಡು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಗಾಯಕಿ ಚಿನ್ಮಯಿ ಶ್ರೀಪಾದ್​ ಜೊತೆ ಅವರು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಮಂತಾ ಅನಾರೋಗ್ಯಕ್ಕೆ ಒಳಗಾದಾಗ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ರಾಹುಲ್​ ಮಾಡಿದ್ದರು. ಇಬ್ಬರ ಸ್ನೇಹ ಹೀಗೆ ಮುಂದುವರಿಯಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಇನ್ನು, ನಟ ವಿಜಯ್​ ದೇವರಕೊಂಡ ಜೊತೆಗೂ ಸಮಂತಾ ರುತ್​ ಪ್ರಭು ಅವರು ಸ್ನೇಹ ಹೊಂದಿದ್ದಾರೆ. ಅವರಿಬ್ಬರು ‘ಖುಷಿ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Citadel: ಸೆರ್ಬಿಯಾದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಮಂತಾ, ವರುಣ್​ ಧವನ್​; ಫೋಟೋ ವೈರಲ್​

ಸಮಂತಾ ಅವರು ಎಲ್ಲ ರೀತಿಯ ಪಾತ್ರಗಳನ್ನೂ ಪ್ರಯತ್ನಿಸುತ್ತಿದ್ದಾರೆ. ಈ ವರ್ಷ ಅವರಿಗೆ ‘ಶಾಕುಂತಲಂ’ ಸಿನಿಮಾದಿಂದ ಯಶಸ್ಸು ಸಿಗಲಿಲ್ಲ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಯಶೋಧ’ ಸಿನಿಮಾ ಕೂಡ ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಲಿಲ್ಲ. ಹಾಗಿದ್ದರೂ ಕೂಡ ಸಮಂತಾಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ‘ಸಿಟಾಡೆಲ್​’ ಇಂಗ್ಲಿಷ್​ ವೆಬ್​ ಸರಣಿಯ ಇಂಡಿಯನ್​ ವರ್ಷನ್​ನಲ್ಲಿ ಅವರು ನಟಿಸುತ್ತಿದ್ದಾರೆ. ಇದರಲ್ಲಿ ಅವರಿಗೆ ವರುಣ್​ ಧವನ್​ ಜೋಡಿಯಾಗಿದ್ದಾರೆ. ಇದರ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?