AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈ ಕೈ ನೋವು ಇದ್ದರೂ ವರ್ಕೌಟ್​ ಮಾಡಿದ ಸಮಂತಾ ರುತ್​ ಪ್ರಭು; ಅಭಿಮಾನಿಗಳಿಗೆ ಚಿಂತೆ

ಕೆಲವೇ ದಿನಗಳ ಹಿಂದೆ ಸಮಂತಾ ರುತ್​ ಪ್ರಭು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಬೆಡ್​ ಮೇಲೆ ಮಲಗಿ ಡ್ರಿಪ್ಸ್​ ಹಾಕಿಸಿಕೊಳ್ಳುತ್ತಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದರು. ಆರೋಗ್ಯದ ಪರಿಸ್ಥಿತಿ ಹೀಗಿರುವಾಗ ಅವರು ಕಠಿಣ ವರ್ಕೌಟ್​ ಮಾಡುತ್ತಿರುವುದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ.

ಮೈ ಕೈ ನೋವು ಇದ್ದರೂ ವರ್ಕೌಟ್​ ಮಾಡಿದ ಸಮಂತಾ ರುತ್​ ಪ್ರಭು; ಅಭಿಮಾನಿಗಳಿಗೆ ಚಿಂತೆ
ಸಮಂತಾ ರುತ್​ ಪ್ರಭು
Follow us
ಮದನ್​ ಕುಮಾರ್​
|

Updated on: Oct 16, 2023 | 7:49 AM

ನಟಿ ಸಮಂತಾ ರುತ್​ ಪ್ರಭು ಅವರು ಪೂರ್ತಿಯಾಗಿ ಮಯೋಸೈಟಿಸ್ (Myositis)​ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಹಲವು ತಿಂಗಳಿಂದಲೂ ಅವರು ಅದಕ್ಕೆ ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ. ಆದರೆ ಸಮಸ್ಯೆ ಮಾತ್ರ ಪರಿಹಾರ ಆಗಿಲ್ಲ. ಇದರಿಂದಾಗಿ ಅವರ ಸಿನಿಮಾ ಕೆಲಸಗಳು ಕುಂಠಿತ ಆಗುತ್ತಿವೆ. ಸಮಂತಾ (Samantha Ruth Prabhu) ಹೊಸ ಸಿನಿಮಾ ಒಪ್ಪಿಕೊಳ್ಳುವುದು ಕೂಡ ತಡವಾಗುತ್ತಿದೆ. ಈಗ ಅವರು ಚಿಕಿತ್ಸೆ ಸುಲುವಾಗಿಯೇ ದೀರ್ಘ ಬ್ರೇಕ್​ ಪಡೆದಿರುವುದು ಗೊತ್ತೇ ಇದೆ. ಹಾಗಿದ್ದರೂ ಕೂಡ ಸಮಂತಾ ಅವರು ಜಿಮ್​ನಲ್ಲಿ ವರ್ಕೌಟ್​ (Samantha Workout) ಮಾಡುವುದು ತಪ್ಪಿಸಿಲ್ಲ. ಮೈ ಕೈ ನೋವು ಇದ್ದರೂ ಕೂಡ ಅವರು ವರ್ಕೌಟ್​ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಚಿಂತೆ ಆಗಿದೆ.

ಸಮಂತಾ ರುತ್​ ಪ್ರಭು ಅವರು ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ದೇಹದ ಶೇಪ್​ ಚೆನ್ನಾಗಿರಬೇಕು ಎಂದು ಕಾಳಜಿ ವಹಿಸುತ್ತಾರೆ. ಆದರೆ ಅನಾರೋಗ್ಯದ ಸಂದರ್ಭದಲ್ಲೂ ಅವರು ಈ ಪರಿ ಕಟ್ಟುನಿಟ್ಟಾಗಿ ಇರಬೇಕಾ ಎಂಬುದು ಕೆಲವು ಅಭಿಮಾನಿಗಳ ಪ್ರಶ್ನೆ. ಒಂದಷ್ಟು ವಿಶ್ರಾಂತಿ ಪಡೆದರೆ ಉತ್ತಮ ಎಂದು ಫ್ಯಾನ್ಸ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮಂತಾಗೆ ಜುನೈದ್​ ಶೇಖ್​ ಅವರು ಫಿಟ್ನೆಸ್​ ತರಬೇತಿ ನೀಡುತ್ತಾರೆ. ಅವರು ಸಿಕ್ಕಾಪಟ್ಟೆ ಸ್ಟ್ರಿಕ್ಟ್​.

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಸಮಂತಾ ರುತ್​ ಪ್ರಭು; ಫೋಟೋ ನೋಡಿ ಅಭಿಮಾನಿಗಳಲ್ಲಿ ಆತಂಕ

ತಮಗೆ ಮೈ ಕೈ ನೋವು ಇದೆ ಎಂದು ಜುನೈದ್​ ಶೇಖ್​ಗೆ ಸಮಂತಾ ಮೆಸೇಜ್​ ಮಾಡಿದ್ದಾರೆ. ಒಂದು ದಿನ ವರ್ಕೌಟ್​ ತಪ್ಪಿಸಿದರೆ ಉತ್ತಮ ಎಂಬುದು ಸಮಂತಾ ಅವರ ಆಲೋಚನೆ ಆಗಿತ್ತು. ಆದರೆ ಅದಕ್ಕೆ ಜುನೈದ್​ ಅವಕಾಶ ನೀಡಿಲ್ಲ. ಮೈ ಕೈ ನೋವು ಇದ್ದರೂ ಅವರು ವರ್ಕೌಟ್​ ಮಾಡಿಸಿದ್ದಾರೆ. ಭಾನುವಾರ ಕೂಡ ವರ್ಕೌಟ್​ ತಪ್ಪಿಸಲು ಅವರು ಅವಕಾಶ ನೀಡಿಲ್ಲ. ಹಾಗಾಗಿ ‘ಇದೊಂದು ಕ್ರೂರ ಭಾನುವಾರ’ ಎಂದು ಸಮಂತಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಈ ನಾಯಿಗಾಗಿ ಸಮಂತಾ-ನಾಗಚೈತನ್ಯ ಒಂದಾಗಬೇಕು ಎಂದು ಬೇಡಿಕೆ ಇಟ್ಟ ಅಭಿಮಾನಿಗಳು

ಸಮಂತಾ ಅವರು ಕೆಲವೇ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಬೆಡ್​ ಮೇಲೆ ಮಲಗಿ ಡ್ರಿಪ್ಸ್​ ಹಾಕಿಸಿಕೊಳ್ಳುತ್ತಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದರು. ಆರೋಗ್ಯದ ಪರಿಸ್ಥಿತಿ ಹೀಗಿರುವಾಗ ಅವರು ಕಠಿಣ ವರ್ಕೌಟ್​ ಮಾಡುತ್ತಿರುವುದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. ಸದ್ಯಕ್ಕಂತೂ ಸಮಂತಾ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. ಆದಷ್ಟು ಬೇಗ ಅವರು ಪೂರ್ತಿ ಗುಣಮುಖರಾಗಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ‘ಸಿಟಾಡೆಲ್​’ ವೆಬ್​ ಸರಣಿಯ ಭಾರತದ ವರ್ಷನ್​ನಲ್ಲಿ ಅವರು ನಟಿಸಿದ್ದಾರೆ. ಅದರ ಬಿಡುಗಡೆಗಾಗಿ ಪ್ರೇಕ್ಷಕರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ