AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ

ಶೋಭಿತಾ ದುಲಿಪಾಲ್ ಅವರು ನಾಗ ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ.ಈ ನಿಶ್ಚಿತಾರ್ಥ ಪೂರ್ಣಗೊಂಡ ಬಳಿಕ ನಾಗ ಚೈತನ್ಯ ತಂದೆ ನಾಗಾರ್ಜುನ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೆಲವರಿಗೆ ಶಾಕಿಂಗ್ ಎನಿಸಿದೆ.

ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ
ನಾಗ ಚೈತನ್ಯ-ಶೋಭಿತಾ
ರಾಜೇಶ್ ದುಗ್ಗುಮನೆ
|

Updated on: Aug 08, 2024 | 6:59 AM

Share

ನಾಗ ಚೈತನ್ಯ ಹಾಗೂ ಸಮಂತಾ ಅವರದ್ದು ಮುಗಿದು ಹೋದ ಕಥೆ. ಇಬ್ಬರೂ ದೂರ ಆಗಿ ಕೆಲವು ವರ್ಷಗಳು ಕಳೆದಿವೆ. ಹೀಗಿರುವಾಗಲೇ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವರಿಸಲು ಸಿದ್ಧರಾಗಿದ್ದಾರೆ ಎಂದು ವರದಿ ಆಗಿದೆ. ಇಬ್ಬರೂ ಇಂದು (ಆಗಸ್ಟ್ 8) ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ನಾಗ ಚೈತನ್ಯ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ಆದರೆ, ಸಮಂತಾ ಫ್ಯಾನ್ಸ್ ಕೋಪಕ್ಕೆ ಕಾರಣ ಆಗಿದೆ.

2021ರ ಅಕ್ಟೋಬರ್ ತಿಂಗಳಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿದರು. ಇದಕ್ಕೆ ಕಾರಣ ಏನು ಎಂಬುದನ್ನು ಯಾರೂ ರಿವೀಲ್ ಮಾಡಿಲ್ಲ. ಆ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದರು. ಅನೇಕ ಬಾರಿ ಇವರು ಫ್ಯಾನ್ಸ್​ ಕೈಗೆ ಸಿಕ್ಕಿ ಬಿದ್ದಿದ್ದೂ ಇದೆ. ಈಗ ಇವರು ತಮ್ಮ ಸಂಬಂಧವನ್ನು ಅಧಿಕೃತ ಮಾಡಲು ಹೊರಟಿದ್ದಾರೆ. ಇದನ್ನು ಯಾರೂ ಖಚಿತ ಪಡಿಸಿಲ್ಲ. ಟಾಲಿವುಡ್ ಅಂಗಳದಲ್ಲಿ ಹೀಗೊಂದು ಸುದ್ದಿ ಹರಿದಾಡುತ್ತಿದೆ.

ನಾಗ ಚೈತನ್ಯ ಹಾಗೂ ಶೋಭಿತಾ ಜೂನ್ ತಿಂಗಳಲ್ಲಿ ಯುರೋಪ್​ ಪ್ರವಾಸ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿತ್ತು. ಇದರಿಂದ ಇವರು ಶೀಘ್ರವೇ ವಿವಾಹ ಆಗಲಿದ್ದಾರೆ ಅನ್ನೋದು ಖಚಿತ ಆಯಿತು. ಈಗ ಇವರು ನಿಶ್ಚಿತಾರ್ಥ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿಶ್ಚಿತಾರ್ಥ ಪೂರ್ಣಗೊಂಡ ಬಳಿಕ ನಾಗ ಚೈತನ್ಯ ತಂದೆ ನಾಗಾರ್ಜುನ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಎಂಗೇಜ್​ಮೆಂಟ್​ಗೆ ಅವರದ್ದೇ ಸಾರಥ್ಯ ಇದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟ ಸಮಂತಾ, ಏನದು?

ಈ ಬೆಳವಣಿಗೆ ಸಹಜವಾಗಿಯೇ ಸಮಂತಾ ಫ್ಯಾನ್ಸ್​ಗೆ ಕೋಪ ತರಿಸಿದೆ. ಈ ಮೊದಲು ನಾಗ ಚೈತನ್ಯ ಡಿವೋರ್ಸ್ ತೆಗೆದುಕೊಂಡು ದೂರ ಆದಾಗ ಸಮಂತಾ ಅಭಿಮಾನಿಗಳು ನಾಗ ಚೈತನ್ಯ ವಿರುದ್ಧ ಕೋಪ ಹೊರ ಹಾಕಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾತೆ ಎಂದರೆ ಅವರ ಬಗ್ಗೆ ಹಾಗೂ ಶೋಭಿತಾ ಬಗ್ಗೆ ಸಿಟ್ಟನ್ನು ಹೊರಹಾಕುವುದನ್ನು ನಿರೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ