AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ

ಶೋಭಿತಾ ದುಲಿಪಾಲ್ ಅವರು ನಾಗ ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ.ಈ ನಿಶ್ಚಿತಾರ್ಥ ಪೂರ್ಣಗೊಂಡ ಬಳಿಕ ನಾಗ ಚೈತನ್ಯ ತಂದೆ ನಾಗಾರ್ಜುನ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೆಲವರಿಗೆ ಶಾಕಿಂಗ್ ಎನಿಸಿದೆ.

ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ
ನಾಗ ಚೈತನ್ಯ-ಶೋಭಿತಾ
ರಾಜೇಶ್ ದುಗ್ಗುಮನೆ
|

Updated on: Aug 08, 2024 | 6:59 AM

Share

ನಾಗ ಚೈತನ್ಯ ಹಾಗೂ ಸಮಂತಾ ಅವರದ್ದು ಮುಗಿದು ಹೋದ ಕಥೆ. ಇಬ್ಬರೂ ದೂರ ಆಗಿ ಕೆಲವು ವರ್ಷಗಳು ಕಳೆದಿವೆ. ಹೀಗಿರುವಾಗಲೇ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವರಿಸಲು ಸಿದ್ಧರಾಗಿದ್ದಾರೆ ಎಂದು ವರದಿ ಆಗಿದೆ. ಇಬ್ಬರೂ ಇಂದು (ಆಗಸ್ಟ್ 8) ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ನಾಗ ಚೈತನ್ಯ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ಆದರೆ, ಸಮಂತಾ ಫ್ಯಾನ್ಸ್ ಕೋಪಕ್ಕೆ ಕಾರಣ ಆಗಿದೆ.

2021ರ ಅಕ್ಟೋಬರ್ ತಿಂಗಳಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿದರು. ಇದಕ್ಕೆ ಕಾರಣ ಏನು ಎಂಬುದನ್ನು ಯಾರೂ ರಿವೀಲ್ ಮಾಡಿಲ್ಲ. ಆ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದರು. ಅನೇಕ ಬಾರಿ ಇವರು ಫ್ಯಾನ್ಸ್​ ಕೈಗೆ ಸಿಕ್ಕಿ ಬಿದ್ದಿದ್ದೂ ಇದೆ. ಈಗ ಇವರು ತಮ್ಮ ಸಂಬಂಧವನ್ನು ಅಧಿಕೃತ ಮಾಡಲು ಹೊರಟಿದ್ದಾರೆ. ಇದನ್ನು ಯಾರೂ ಖಚಿತ ಪಡಿಸಿಲ್ಲ. ಟಾಲಿವುಡ್ ಅಂಗಳದಲ್ಲಿ ಹೀಗೊಂದು ಸುದ್ದಿ ಹರಿದಾಡುತ್ತಿದೆ.

ನಾಗ ಚೈತನ್ಯ ಹಾಗೂ ಶೋಭಿತಾ ಜೂನ್ ತಿಂಗಳಲ್ಲಿ ಯುರೋಪ್​ ಪ್ರವಾಸ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿತ್ತು. ಇದರಿಂದ ಇವರು ಶೀಘ್ರವೇ ವಿವಾಹ ಆಗಲಿದ್ದಾರೆ ಅನ್ನೋದು ಖಚಿತ ಆಯಿತು. ಈಗ ಇವರು ನಿಶ್ಚಿತಾರ್ಥ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿಶ್ಚಿತಾರ್ಥ ಪೂರ್ಣಗೊಂಡ ಬಳಿಕ ನಾಗ ಚೈತನ್ಯ ತಂದೆ ನಾಗಾರ್ಜುನ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಎಂಗೇಜ್​ಮೆಂಟ್​ಗೆ ಅವರದ್ದೇ ಸಾರಥ್ಯ ಇದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟ ಸಮಂತಾ, ಏನದು?

ಈ ಬೆಳವಣಿಗೆ ಸಹಜವಾಗಿಯೇ ಸಮಂತಾ ಫ್ಯಾನ್ಸ್​ಗೆ ಕೋಪ ತರಿಸಿದೆ. ಈ ಮೊದಲು ನಾಗ ಚೈತನ್ಯ ಡಿವೋರ್ಸ್ ತೆಗೆದುಕೊಂಡು ದೂರ ಆದಾಗ ಸಮಂತಾ ಅಭಿಮಾನಿಗಳು ನಾಗ ಚೈತನ್ಯ ವಿರುದ್ಧ ಕೋಪ ಹೊರ ಹಾಕಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾತೆ ಎಂದರೆ ಅವರ ಬಗ್ಗೆ ಹಾಗೂ ಶೋಭಿತಾ ಬಗ್ಗೆ ಸಿಟ್ಟನ್ನು ಹೊರಹಾಕುವುದನ್ನು ನಿರೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು