AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Father Death: ನಟಿ ಸಮಂತಾ ರುತ್​ ಪ್ರಭು ತಂದೆ ಜೋಸೆಫ್​ ಪ್ರಭು ನಿಧನ

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ಮನೆಯಲ್ಲಿ ಶೋಕ ಆವರಿಸಿದೆ. ಸಮಂತಾ ತಂದೆ ಜೋಸೆಫ್​ ಪ್ರಭು ಅವರು ನಿಧನರಾಗಿದ್ದಾರೆ. ಈ ವಿಷಯವನ್ನು ಸ್ವತಃ ಸಮಂತಾ ಅವರು ಹಂಚಿಕೊಂಡಿದ್ದಾರೆ. ಈ ಕಷ್ಟದ ಕಾಲದಲ್ಲಿ ಸಮಂತಾ ಅವರಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಮಂತಾ ಸಾಧನೆ ಮಾಡಲು ಅವರ ತಂದೆ ಬೆಂಬಲವಾಗಿದ್ದರು.

Samantha Father Death: ನಟಿ ಸಮಂತಾ ರುತ್​ ಪ್ರಭು ತಂದೆ ಜೋಸೆಫ್​ ಪ್ರಭು ನಿಧನ
ಸಮಂತಾ, ಜೋಸೆಫ್​ ಪ್ರಭು
ಮದನ್​ ಕುಮಾರ್​
|

Updated on:Nov 29, 2024 | 5:39 PM

Share

ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರ ಕುಟುಂಬದಲ್ಲಿ ಶೋಕ ಆವರಿಸಿದೆ. ಸಮಂತಾ ತಂದೆ ಜೋಸೆಫ್​ ಪ್ರಭು ಇಂದು (ನವೆಂಬರ್​ 29) ನಿಧನರಾಗಿದ್ದಾರೆ. ಈ ನೋವಿನ ವಿಷಯವನ್ನು ಸ್ವತಃ ಸಮಂತಾ ರುತ್ ಪ್ರಭು ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಈ ಕಷ್ಟದ ಕಾಲದಲ್ಲಿ ಸಮಂತಾ ಅವರಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ‘ಮತ್ತೆ ನಾವು ಸಿಗವವರೆಗೆ ಅಪ್ಪ..’ ಎಂದು ಸಮಂತಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ, ಒಡೆದ ಹೃದಯದ ಎಮೋಜಿ ಬಳಸಿದ್ದಾರೆ.

ಸಮಂತಾ ತಂದೆ ಜೋಸೆಫ್​ ಪ್ರಭು ಅವರು ತೆಲುಗು ಆಂಗ್ಲೋ ಇಂಡಿಯನ್ ಆಗಿದ್ದರು. ಸಮಂತಾ ಯಶಸ್ಸಿನಲ್ಲಿ ತಂದೆಯ ಕೊಡುಗೆ ಪ್ರಮುಖವಾಗಿತ್ತು. ವೃತ್ತಿಜೀವನದಲ್ಲಿ ಹಾಗೂ ವೈಯಕ್ತಿಕ ಬದುಕಿನ ಏಳು-ಬೀಳಿನಲ್ಲಿ ಸಮಂತಾಗೆ ಅವರ ತಂದೆ ಬೆಂಬಲವಾಗಿ ನಿಂತಿದ್ದರು. ತಂದೆಯನ್ನು ಕಳೆದುಕೊಂಡ ಸಮಂತಾ ಅವರಿಗೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಸಾಂತ್ವನದ ಸಂದೇಶ ಕಳಿಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಸಮಂತಾ ಅವರು ತಮ್ಮ ಕುಟುಂಬದವರ ಬೆಂಬಲವನ್ನು ನೆನೆಯುತ್ತಿದ್ದರು. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆದಿದ್ದಾಗ ಜೋಸೆಫ್​ ಪ್ರಭು ಅವರು ತುಂಬ ಬೇಸರ ಮಾಡಿಕೊಂಡಿದ್ದರು. ಆ ನೋವಿನಿಂದ ಹೊರಗೆ ಬರಲು ಅವರಿಗೆ ಬಹಳ ಸಮಯ ಹಿಡಿದಿತ್ತು.

ಇದನ್ನೂ ಓದಿ: ‘ನಿಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರಿಗೆ ಸತ್ಯ ತಿಳಿದಿದೆ’: ವಿಚ್ಛೇದನ ಬಗ್ಗೆ ಸಮಂತಾ ಮಾತು

ಚಿತ್ರರಂಗದಲ್ಲಿ ಸಮಂತಾ ಅವರು ಸ್ಟಾರ್​ ನಟಿ ಆಗಿದ್ದಾರೆ. ಸಿನಿಮಾ, ವೆಬ್ ಸಿರೀಸ್​, ಜಾಹೀರಾತು, ಪಾಡ್​ಕಾಸ್ಟ್​ ಮುಂತಾದ ಕ್ಷೇತ್ರದಲ್ಲಿ ಅವರಿಗೆ ಬೇಡಿಕೆ ಇದೆ. ಅವರು ನಟಿಸಿದ ‘ಸಿಟಾಡೆಲ್​ ಹನಿಬನಿ’ ವೆಬ್​ ಸರಣಿ ಇತ್ತೀಚೆಗಷ್ಟೇ ಅಮೇಜಾನ್ ಪ್ರೈಂ ವಿಡಿಯೋ ಮೂಲಕ ಪ್ರಸಾರ ಆಗಿದೆ. ಅವರ ನಟನೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಅನಾರೋಗ್ಯದ ನಡುವೆಯೂ ಕಷ್ಟಪಟ್ಟು, ಸಾಕಷ್ಟು ತಯಾರಿ ಮಾಡಿಕೊಂಡು ಸಮಂತಾ ಅವರು ಈ ಸಿರೀಸ್​ನಲ್ಲಿ ನಟಿಸಿದರು. ಅದರ ಯಶಸ್ಸಿನ ಖುಷಿಯಲ್ಲಿ ಇರುವಾಗಲೇ ತಂದೆಯ ನಿಧನದಿಂದ ಅವರಿಗೆ ತೀವ್ರ ನೋವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:21 pm, Fri, 29 November 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?