ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್

ಸಮಂತಾ ರುತ್ ಪ್ರಭು ಅವರಿಗೆ ಇರುವ ಅಭಿಮಾನಿಗಳ ಬಳಗ ದೊಡ್ಡದು. ಅವರು ಎಲ್ಲಿಯೇ ಹೋದರೂ ಜನರು ಸೇರುತ್ತಾರೆ. ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಮಂತಾ ಅತಿಥಿ ಆಗಿ ಬಂದಾಗಲೂ ಹಾಗೆಯೇ ಆಯಿತು. ಬಾಡಿ ಗಾರ್ಡ್ಸ್ ಇದ್ದರೂ ಕೂಡ ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋಯಿತು.

ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್
Samantha

Updated on: Dec 22, 2025 | 10:06 PM

ನಟಿ ನಿಧಿ ಅಗರ್​ವಾಲ್ (Nidhi Agarwal) ಅವರಿಗೆ ಅಭಿಮಾನಿಗಳಿಂದ ಇತ್ತೀಚೆಗೆ ಕಿರಿಕಿರಿ ಉಂಟಾಗಿತ್ತು. ‘ದಿ ರಾಜಾ ಸಾಬ್’ ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದರು. ಆ ಘಟನೆಯ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೂ ಆಗಿದೆ. ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಸಮಂತಾ ಅವರನ್ನು ಅಭಿಮಾನಿಗಳು ಸುತ್ತುವರಿದಿದ್ದಾರೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಮಂತಾ ಅವರಿಗೆ ಸಖತ್ ಜನಪ್ರಿಯತೆ ಇದೆ. ಅವರು ಎಲ್ಲೇ ಹೋದರೂ ಜನರು ಸೇರುತ್ತಾರೆ. ಹೈದರಾಬಾದ್​​ನಲ್ಲಿ ಅವರು ಕಾರ್ಯಕ್ರಮವೊಂದಕ್ಕೆ ಬಂದಿದ್ದರು. ಅಂಗಡಿ ಉದ್ಘಾಟನೆಗೆ ಬಂದಿದ್ದ ಅವರ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆ ಸಂದರ್ಭದಲ್ಲಿ ಪರಿಸ್ಥಿತಿ ಕೈ ಮೀರುವಂತಾಯಿತು. ಆದರೆ ಅದೃಷ್ಟವಾಶಾತ್ ಏನೂ ಅಚಾತುರ್ಯ ಸಂಭವಿಸಿಲ್ಲ.

ಕಾರ್ಯಕ್ರಮ ಮುಗಿಸಿ ತಮ್ಮ ಕಾರಿನ ಕಡೆಗೆ ಸಮಂತಾ ರುತ್ ಪ್ರಭು ಹೋಗುತ್ತಿದ್ದರು. ಸೀರೆ ಧರಿಸಿದ್ದ ಅವರು ಪಟಪಟನೆ ನಡೆದು ಹೋಗುವುದು ಕೂಡ ಕಷ್ಟ ಆಗುತ್ತಿತ್ತು. ಆ ವೇಳೆ ಫೋಟೋಗಾಗಿ ಫ್ಯಾನ್ಸ್ ಮೇಲೆ ಬೀಳಲು ಆರಂಭಿಸಿದರು. ಅಕ್ಕ-ಪಕ್ಕ ಬಾಡಿ ಗಾರ್ಡ್ ಇದ್ದರೂ ಕೂಡ ಸಮಂತಾ ಅವರನ್ನು ಸೇಫ್ ಆಗಿ ಕಾರಿನ ತನಕ ಕರೆದುಕೊಂಡು ಹೋಗುವುದು ಕಷ್ಟ ಆಯಿತು.

ಪರಿಸ್ಥಿತಿ ಹೀಗೆ ಇದ್ದರೂ ಕೂಡ ಸಮಂತಾ ಅವರು ಗಲಿಬಿಲಿ ಆಗಲಿಲ್ಲ. ನಗುನಗುತ್ತಲೇ, ತಾಳ್ಮೆಯಿಂದ ಅವರು ಎಲ್ಲವನ್ನೂ ನಿಭಾಯಿಸಿದರು. ವೈರಲ್ ಆಗಿರುವ ವಿಡಿಯೋ ನೋಡಿ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ನಟಿಯರು ಈ ರೀತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಹೇಗೆ ನಡೆದುಕೊಳ್ಳಬೇಕು ಎಂಬ ಪರಿಜ್ಞಾನ ಜನರಿಗೆ ಇಲ್ಲದೇ ಇರುವುದನ್ನು ನೆಟ್ಟಿಗರು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

2025ರಲ್ಲಿ ಕಾಲ್ತುಳಿತದ ಪ್ರಕರಣಗಳು ಆಗಾಗ ವರದಿ ಆಗಿವೆ. ಹಾಗಿದ್ದರೂ ಕೂಡ ಜನರು ಬುದ್ಧಿ ಕಲಿಯುತ್ತಿಲ್ಲ. ಅಲ್ಲದೇ ಕಾರ್ಯಕ್ರಮಗಳ ಆಯೋಜಕರು ಕೂಡ ಎಚ್ಚರಿಕೆ ವಹಿಸಬೇಕಾಗುತ್ತದೆ. ಪ್ರತಿ ಬಾರಿ ಕಾರ್ಯಕ್ರಮಗಳು ನಡೆದಾದ ಜನರು ಈ ರೀತಿ ಮುಗಿಬೀಳುವುದನ್ನು ತಪ್ಪಿಸಬೇಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us