AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಆಸ್ಪತ್ರೆಗೆ ದಾಖಲಾದ ಸಮಂತಾ ರುತ್​ ಪ್ರಭು; ಫೋಟೋ ನೋಡಿ ಅಭಿಮಾನಿಗಳಲ್ಲಿ ಆತಂಕ

ಸಮಂತಾ ರುತ್​ ಪ್ರಭು ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಡ್ರಿಪ್ಸ್​ ಹಾಕಲಾಗಿದೆ. ಈ ಸಂದರ್ಭದ ಫೋಟೋವನ್ನು ಸ್ವತಃ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎದುರಾದ ಆರೋಗ್ಯದ ಸಮಸ್ಯೆಗೆ ಯಾವೆಲ್ಲ ರೀತಿಯ ಚಿಕಿತ್ಸೆ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Samantha: ಆಸ್ಪತ್ರೆಗೆ ದಾಖಲಾದ ಸಮಂತಾ ರುತ್​ ಪ್ರಭು; ಫೋಟೋ ನೋಡಿ ಅಭಿಮಾನಿಗಳಲ್ಲಿ ಆತಂಕ
ಸಮಂತಾ
ಮದನ್​ ಕುಮಾರ್​
|

Updated on: Oct 13, 2023 | 12:25 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಅನಾರೋಗ್ಯ ಮುಂದುವರಿದಿದೆ. ಅದೇ ಕಾರಣಕ್ಕಾಗಿ ಅವರು ಸಿನಿಮಾ ಕೆಲಸಗಳಿಂದ ದೀರ್ಘ ಬ್ರೇಕ್​ ಪಡೆದುಕೊಂಡಿದ್ದಾರೆ. ಈ ವರ್ಷ ಅವರು ನಟಿಸಿದ ‘ಖುಷಿ’ ಸಿನಿಮಾ ಬಿಡುಗಡೆ ಆಯಿತು. ಆ ಸಿನಿಮಾದ ಪ್ರಚಾರ ಕಾರ್ಯದಲ್ಲೂ ಅವರು ಹೆಚ್ಚಾಗಿ ಭಾಗವಹಿಸಲಿಲ್ಲ. ಆದಷ್ಟು ಬೇಗ ಸಮಂತಾ ರುತ್​ ಪ್ರಭು ಅವರು ಗುಣಮುಖರಾಗಿ ಬರಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅದು ಸದ್ಯಕ್ಕಂತೂ ನೆರವೇರುವಂತೆ ಕಾಣುತ್ತಿಲ್ಲ. ಯಾಕೆಂದರೆ, ಸಮಂತಾ (Samantha) ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಫೋಟೋ ವೈರಲ್​ ಆಗಿದೆ.

ಸಮಂತಾ ರುತ್​ ಪ್ರಭು ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಡ್ರಿಪ್ಸ್​ ಹಾಕಲಾಗಿದೆ. ಈ ಸಂದರ್ಭದ ಫೋಟೋವನ್ನು ಸ್ವತಃ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎದುರಾದ ಆರೋಗ್ಯದ ಸಮಸ್ಯೆಗೆ ಯಾವೆಲ್ಲ ರೀತಿಯ ಚಿಕಿತ್ಸೆ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಮಂತಾ ಅವರಿಗೆ ಮಯೋಸೈಟಿಸ್​ ಕಾಯಿಲೆ ಇದೆ. ಅದಕ್ಕೆ ಅವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಅವರ ಸಿನಿಮಾ ಕೆಲಸಗಳಿಗೆ ತೊಂದರೆ ಆಗಿದೆ.

ಇದನ್ನೂ ಓದಿ: ನಾಗ ಚೈತನ್ಯ ಸಹಿಯ ಟ್ಯಾಟೂ ತೆಗೆಸಿದ ಸಮಂತಾ; ದೀಪಿಕಾ, ನಯನತಾರಾ ಹಾದಿಯಲ್ಲಿ ಸ್ಯಾಮ್

ಒಂದಷ್ಟು ತಿಂಗಳ ಕಾಲ ಸಮಂತಾ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಅದರಿಂದ ಅವರ ಆರೋಗ್ಯ ಹದಗೆಟ್ಟಿತು. ಬಳಿಕ ಚಿಕಿತ್ಸೆ ಪಡೆದು, ಸ್ಪಲ್ಪ ಚೇತರಿಸಿಕೊಂಡು ಬಂದಿದ್ದರು. ಮತ್ತೆ ಕಠಿಣವಾದ ದೈಹಿಕ ಶ್ರಮ ಬೇಡುವಂತಹ ತರಬೇತಿಯನ್ನು ಅವರು ಪಡೆದುಕೊಂಡಿದ್ದರು. ಆ ಸಂದರ್ಭದ ಫೋಟೋ ಮತ್ತು ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದರು. ಇದರಿಂದ ಮತ್ತೆ ಅವರು ಆರೋಗ್ಯ ಕೆಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹಲವರು ಊಹಿಸಿದ್ದರು. ಈಗ ಹಾಗೆಯೇ ಆಗಿದೆ. ‘ಖುಷಿ’ ಸಿನಿಮಾ ಮತ್ತು ‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಶೂಟಿಂಗ್​ ಬಳಿಕ ಸಮಂತಾಗೆ ಆರೋಗ್ಯ ಕೈಕೊಟ್ಟಿತು.

ಇದನ್ನೂ ಓದಿ: ಈ ನಾಯಿಗಾಗಿ ಸಮಂತಾ-ನಾಗಚೈತನ್ಯ ಒಂದಾಗಬೇಕು ಎಂದು ಬೇಡಿಕೆ ಇಟ್ಟ ಅಭಿಮಾನಿಗಳು

ಸದ್ಯಕ್ಕಂತೂ ಸಮಂತಾ ರುತ್​ ಪ್ರಭು ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಈ ಬಾರಿ ಅವರು ಚಿಕಿತ್ಸೆಗಾಗಿ ಹಲವು ತಿಂಗಳ ಕಾಲ ಸಮಯ ಮೀಸಲಿಟ್ಟಿದ್ದಾರೆ. ಸಂಪೂರ್ಣ ಗುಣಮುಖರಾಗಿ ಬಂದ ನಂತರವೇ ಅವರು ಹೊಸ ಚಿತ್ರಕ್ಕೆ ಸಹಿ ಮಾಡಲಿದ್ದಾರೆ. ಚಿಕಿತ್ಸೆಯ ನಡುವೆಯೇ ಅವರು ಅನೇಕ ದೇಶಗಳಿಗೆ ತೆರಳುತ್ತಿದ್ದಾರೆ. ಅಲ್ಲಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಮಾನಸಿಕ ನೆಮ್ಮದಿಯ ಕಡೆಗೂ ಗಮನ ಹರಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ