AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಅವರ ಈ ಐಷಾರಾಮಿ ಮನೆಯ ಬೆಲೆ ಎಷ್ಟು ಕೋಟಿ ರೂಪಾಯಿ?

ಹೈದರಾಬಾದ್​ನ ಜುಬ್ಲಿ ಹಿಲ್ಸ್‌ನ ಸಮಂತಾ ಅವರ ಐಷಾರಾಮಿ ಮನೆ ಇದೆ. ಈ ಮನೆಗೆ ವಿಶಾಲವಾದ ಗಾರ್ಡನ್ ಕೂಡ ಇದೆ. ಇದರ ಬೆಲೆ ಕೇಳಿದರೆ ಎಲ್ಲರಿಗೂ ಒಮ್ಮೆ ಶಾಕ್ ಆಗೋದು ಗ್ಯಾರಂಟಿ.

ಸಮಂತಾ ಅವರ ಈ ಐಷಾರಾಮಿ ಮನೆಯ ಬೆಲೆ ಎಷ್ಟು ಕೋಟಿ ರೂಪಾಯಿ?
ಸಮಂತಾ
ರಾಜೇಶ್ ದುಗ್ಗುಮನೆ
|

Updated on:Dec 05, 2023 | 2:19 PM

Share

ಸೌತ್ ಇಂಡಸ್ಟ್ರಿಯ ಟಾಪ್ ಹೀರೋಯಿನ್​ಗಳ ಸಾಲಿನಲ್ಲಿ ಸಮಂತಾ (Samantha Ruth Prabhu) ಕೂಡ ಇದ್ದಾರೆ. ‘ಏ ಮಾಯ ಚೇಸಾವೆ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪರಿಚಯವಾದ ಅವರು ಈಗ ಭಾರತಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಕೋಟ್ಯಂತ ಮಂದಿ ಹಿಂಬಾಲಕರು ಇದ್ದಾರೆ. ವಿಭಿನ್ನ ಕಥಾಹಂದರದ ಆಯ್ಕೆಯ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರ ನಟನೆಗೆ ವಿಮರ್ಶಕರಿಂದ ಮೆಚ್ಚುಗೆ ಸಿಗುತ್ತದೆ. ಅವರು ಹೈದರಾಬಾದ್​ನಲ್ಲಿ ಮನೆ ಹೊಂದಿದ್ದಾರೆ. ಇದರ ಬೆಲೆ ಕೇಳಿದರೆ ನೀವು ಅಚ್ಚರಿಪಡೋದು ಗ್ಯಾರಂಟಿ.

ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದು ಬಹಳ ಸಮಯ ಕಳೆದಿದೆ. ಸಮಂತಾ ಅವರು ಸದ್ಯ ಮಯೋಸಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಜೊತೆಗೆ ಸಮಾಜದಲ್ಲಿ ಎದುರಾಗುತ್ತಿರುವ ನೆಗೆಟಿವ್ ಕಮೆಂಟ್​ಗಳನ್ನು ಅವರು ಎದುರಿಸಬೇಕಿದೆ. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಭೂತಾನ್​ಗೆ ತೆರಳಿದ್ದರು. ಇತ್ತೀಚೆಗೆ ಸಮಂತಾ ಹೈದರಾಬಾದ್​ಗೆ ಆಗಮಿಸಿದ್ದಾರೆ.

ಹೈದರಾಬಾದ್​ನ ಜುಬ್ಲಿ ಹಿಲ್ಸ್‌ನ ಸಮಂತಾ ಅವರ ಐಷಾರಾಮಿ ಮನೆ ಇದೆ. ಈ ಮನೆಗೆ ವಿಶಾಲವಾದ ಗಾರ್ಡನ್ ಕೂಡ ಇದೆ. ಇದರ ಬೆಲೆ ಸುಮಾರು 100 ಕೋಟಿ ರೂಪಾಯಿ ಎನ್ನಲಾಗಿದೆ. ಉತ್ತಮವಾಗಿ ಅಲಂಕರಿಸಿದ ಒಳಾಂಗಣ ವಿನ್ಯಾಸವು ಮನಸ್ಸಿಗೆ ಸಾಕಷ್ಟು ಶಾಂತಿಯನ್ನು ತರುತ್ತದೆ. ಆ ರೀತಿಯಲ್ಲಿ ಡಿಸೈನ್ ಮಾಡಲಾಗಿದೆ. ಮನೆಯಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: ಮೈ ಕೈ ನೋವು ಇದ್ದರೂ ವರ್ಕೌಟ್​ ಮಾಡಿದ ಸಮಂತಾ ರುತ್​ ಪ್ರಭು; ಅಭಿಮಾನಿಗಳಿಗೆ ಚಿಂತೆ

ಇತ್ತೀಚೆಗಷ್ಟೇ ‘ಖುಷಿ’ ಚಿತ್ರದ ಮೂಲಕ ಸಮಂತಾ ಯಶಸ್ಸು ಕಂಡರು. ‘ಸಿಟಾಡೆಲ್’ ವೆಬ್​ ಸರಣಿಯ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಇದರಲ್ಲಿ ಬಾಲಿವುಡ್ ಹೀರೋ ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ‘ಫ್ಯಾಮಿಲಿ ಮ್ಯಾನ್’ ಸೀರೀಸ್ ನಿರ್ದೇಶಕರಾದ ರಾಜ್​ ಹಾಗೂ ಡಿಕೆ ‘ಸಿಟಾಡೆಲ್’ ವೆಬ್ ಸೀರೀಸ್ ನಿರ್ದೇಶನ ಮಾಡಿದ್ದಾರೆ. ಈ ಸರಣಿಯು ಶೀಘ್ರದಲ್ಲೇ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಕಾಣಲಿದೆ. ಉಳಿದಂತೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:18 pm, Tue, 5 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?