Rashmika Mandanna: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ

ಸಮಂತಾ ಅವರು ‘ಯಶೋದಾ’ ಮೊದಲಾದ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ‘ರೇನ್​ಬೋ’ ಆಫರ್ ನೀಡಲಾಯಿತು.

Rashmika Mandanna: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ
ರಶ್ಮಿಕಾ ಮಂದಣ್ಣ-ಸಮಂತಾ
Follow us
|

Updated on:Apr 05, 2023 | 6:43 AM

ರಶ್ಮಿಕಾ ಮಂದಣ್ಣ ಅವರಿಗೆ ಇಂದು (ಮಾರ್ಚ್​ 5) ಜನ್ಮದಿನದ ಸಂಭ್ರಮ. ರಶ್ಮಿಕಾ ಮಂದಣ್ಣ (Rashmika Mandanna) ಅವರು ವೃತ್ತಿ ಜೀವನದಲ್ಲಿ 7 ವರ್ಷ ಕಳೆದಿದ್ದಾರೆ. ಇಲ್ಲಿವರೆಗೆ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಪೂರ್ಣಪ್ರಮಾಣದ ಮಹಿಳಾ ಪ್ರಧಾನ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೇನ್​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ರಶ್ಮಿಕಾಗೆ ಈ ಆಫರ್ ಸಿಗೋಕೆ ಕಾರಣವಾಗಿದ್ದು ಸಮಂತಾ (Samantha) ರುತ್ ಪ್ರಭು ಎನ್ನುವ ಸುದ್ದಿ ಹರಿದಾಡಿದೆ. ಇದು ಸತ್ಯವೋ ಅಥವಾ ವದಂತಿಯೋ ಎನ್ನುವ ಬಗ್ಗೆ ರಶ್ಮಿಕಾ ಅವರೇ ಉತ್ತರ ನೀಡಬೇಕಿದೆ.

ಸಮಂತಾ ಅವರ ಬಾಳಲ್ಲಿ ಅನೇಕ ಏಳುಬೀಳುಗಳು ಎದುರಾದವು. ಅವರಿಗೆ Myositis ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಈ ಕಾಯಿಲೆಯಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ದೊಡ್ಡ ಬ್ರೇಕ್ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದರಿಂದ ಸಮಂತಾ ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಅವರು Myositis ಕಾಯಿಲೆಯಿಂದ ಗುಣಮುಖರಾಗಿ ಒಪ್ಪಿಕೊಂಡ ಸಿನಿಮಾಗಳ ಕೆಲಸ ಮುಗಿಸುತ್ತಿದ್ದಾರೆ. ಇದು ರಶ್ಮಿಕಾಗೆ ವರದಾನವಾಗಿದೆ ಎನ್ನಲಾಗಿದೆ.

ಸಮಂತಾ ಅವರು ‘ಯಶೋದಾ’ ಮೊದಲಾದ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ‘ರೇನ್​ಬೋ’ ಆಫರ್ ನೀಡಲಾಯಿತು. ಆದರೆ, ಸಮಂತಾ ಇದನ್ನು ಒಪ್ಪಿಕೊಂಡಿಲ್ಲ. ಈಗ ಒಪ್ಪಿಕೊಂಡ ಚಿತ್ರಗಳ ಕೆಲಸ ಪೂರ್ಣಗೊಳಿಸುವ ಅಗತ್ಯ ಅವರಿಗೆ ಇರೋ ಹಿನ್ನೆಲೆಯಲ್ಲಿ ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ರಶ್ಮಿಕಾಗೆ ಈ ಆಫರ್ ಹೋಗಿದೆ.

ಇದನ್ನೂ ಓದಿ: RM22: ಬ್ಯಾಕ್ ​ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ‘ರೈನ್​ಬೋ’ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ

ಶಾಂತರುಬಾನ್ ಅವರು ‘ರೈನ್​ಬೋ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರೊಮ್ಯಾಂಟಿಕ್ ಫ್ಯಾಂಟಸಿ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಏಪ್ರಿಲ್ 3ರಂದು ಸಿನಿಮಾದ ಮುಹೂರ್ತ ನೆರವೇರಿದೆ. ಚಿತ್ರದ ಶೂಟಿಂಗ್ ಏಪ್ರಿಲ್ 7ರಿಂದ ಆರಂಭ ಆಗಲಿದೆ. ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ನಿತೀನ್ ಜೊತೆಗೂ ಅವರು ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:30 am, Wed, 5 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ