AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಮಿತಿ ಮೀರಿದ ಯೂಟ್ಯೂಬರ್; ಸಮಂತಾ ಹೆಲ್ತ್​ ಬಗ್ಗೆ ತಪ್ಪು ಮಾಹಿತಿ ಹರಡಿದವರಿಗೆ ಕಾದಿದೆ ಗ್ರಹಚಾರ

Samantha Ruth Prabhu: ಈ ಹಿಂದಿನ ಘಟನೆಯಿಂದ ಕೆಲವು ಯೂಟ್ಯೂಬರ್​ಗಳು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಅಂಥವರಿಗೆ ಈ ಬಾರಿ ಸಮಂತಾ ತಕ್ಕ ಪಾಠ ಕಲಿಸುವ ಸಾಧ್ಯತೆ ದಟ್ಟವಾಗಿದೆ.

Samantha: ಮಿತಿ ಮೀರಿದ ಯೂಟ್ಯೂಬರ್; ಸಮಂತಾ ಹೆಲ್ತ್​ ಬಗ್ಗೆ ತಪ್ಪು ಮಾಹಿತಿ ಹರಡಿದವರಿಗೆ ಕಾದಿದೆ ಗ್ರಹಚಾರ
ಸಮಂತಾ
TV9 Web
| Edited By: |

Updated on:Sep 06, 2022 | 12:46 PM

Share

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಗಾಸಿಪ್​ಗಳಿಗೂ ಕೊರತೆ ಇಲ್ಲ. ಸಮಂತಾ ಅವರ ವೃತ್ತಿ ಜೀವನ ಮತ್ತು ಖಾಸಗಿ ಬದುಕಿನ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡುತ್ತಿವೆ. ಸೆಲೆಬ್ರಿಟಿ ಎಂದಮೇಲೆ ಅದೆಲ್ಲ ಸಹಜ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ಕೆಲವರು ಸಮಂತಾ ಆರೋಗ್ಯದ (Samantha Health) ಬಗ್ಗೆಯೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅವರ ವೃತ್ತಿಜೀವನಕ್ಕೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಬಾರಿ ಸಮಂತಾ ಅವರು ಕಾನೂನು ಸಮರ ಸಾರಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಯೂಟ್ಯೂಬರ್​ಗಳಿಗೆ (Youtubers) ಗ್ರಹಚಾರ ಬಿಡಿಸಲು ಸಮಂತಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಅಷ್ಟಕ್ಕೂ ಸಮಂತಾ ಅವರು ಆರೋಗ್ಯದ ಬಗ್ಗೆ ಗಾಸಿಪ್​ ಹಬ್ಬಿದ್ದು ಯಾಕೆ? ಉತ್ತರ ಸಿಂಪಲ್. ಸಮಂತಾ ಯಾವಾಗಲೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಅಷ್ಟಾಗಿ ಸೋಶಿಯಲ್​ ಮೀಡಿಯಾ ಬಳಸುತ್ತಿಲ್ಲ. ಅವರಿಗೆ ಅನಾರೋಗ್ಯ ಕಾಡುತ್ತಿರುವುದರಿಂದ ಈ ರೀತಿ ಸೈಲೆಂಟ್​ ಆಗಿದ್ದಾರೆ ಎಂಬುದು ಕೆಲವು ಯೂಟ್ಯೂಬರ್​ಗಳ ವಾದ. ಕೆಲವರಂತೂ ​ಅತಿ ಕೆಟ್ಟದಾಗಿ ಥಂಬ್​ನೇಲ್​ಗಳನ್ನು ಮಾಡಿ ಹರಿಬಿಟ್ಟಿದ್ದಾರೆ. ಇದರಿಂದ ಸಮಂತಾ ಅಭಿಮಾನಿಗಳಿಗೆ ಬೇಸರ ಆಗಿದೆ.

ಈ ಹಿಂದೆ ಕೂಡ ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ನೀಡಿದ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಸಮಂತಾ ಅವರ ಪರ್ಸನಲ್​ ಲೈಫ್​ ಬಗ್ಗೆ ಇಲ್ಲಸಲ್ಲದ ಗಾಸಿಪ್​ ಹಬ್ಬಿಸಲಾಗಿತ್ತು. ಆಗಲೂ ಅವರು ಕಾನೂನು ಸಮರ ಸಾರಿದ್ದರು. ಅಷ್ಟಾದರೂ ಕೆಲವು ಯೂಟ್ಯೂಬರ್​ಗಳು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಅಂಥವರಿಗೆ ಈ ಬಾರಿ ಸಮಂತಾ ತಕ್ಕ ಪಾಠ ಕಲಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿಚ್ಛೇದನದ ಬಳಿಕ ಸಮಂತಾ ಅವರು ಚಾರ್ಮ್​ ಹೆಚ್ಚಿದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಅಭಿನಯಿಸುತ್ತಿರುವ ‘ಖುಷಿ’ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಹಾಗೆಯೇ ‘ಯಶೋಧ’ ಸಿನಿಮಾದಲ್ಲಿ ಸಮಂತಾ ಅವರು ಆ್ಯಕ್ಷನ್​ ಅವತಾರ ತಾಳುತ್ತಿದ್ದಾರೆ. ‘ಶಾಕುಂತಲಂ’ ಚಿತ್ರದಲ್ಲಿ ಶಕುಂತಲೆಯ ಪಾತ್ರ ಮಾಡುತ್ತಿದ್ದಾರೆ. ಹೀಗೆ ಒಂದಕ್ಕಿಂತ ಒಂದು ಡಿಫರೆಂಟ್​ ಸಿನಿಮಾಗಳು ಅವರ ಕೈಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:46 pm, Tue, 6 September 22

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?