AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸೀರೆಯಲ್ಲೂ ಸಖತ್​ ಗ್ಲಾಮರಸ್​ ಅವತಾರ ತಾಳಿದ ನಟಿ ಸಮಂತಾ ರುತ್ ಪ್ರಭು; ಫೋಟೋ ವೈರಲ್​​

Samantha Ruth Prabhu: ಸಮಂತಾ ರುತ್​ ಪ್ರಭು ಅವರು ಯಾವ ಡ್ರೆಸ್​ ಧರಿಸಿದರೂ ಸೂಪರ್ ಆಗಿ ಕಾಣುತ್ತಾರೆ. ಗ್ಲಾಮರಸ್​ ಆಗಿ ಪೋಸ್​ ನೀಡಲು ಅವರು ಹಿಂದೇಟು ಹಾಕುವವರಲ್ಲ. ಸೀರೆ ಧರಿಸಿಯೂ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ವೈರಲ್​ ಆಗಿರುವ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Samantha: ಸೀರೆಯಲ್ಲೂ ಸಖತ್​ ಗ್ಲಾಮರಸ್​ ಅವತಾರ ತಾಳಿದ ನಟಿ ಸಮಂತಾ ರುತ್ ಪ್ರಭು; ಫೋಟೋ ವೈರಲ್​​
ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Nov 02, 2023 | 8:17 PM

Share

ಬಹುಬೇಡಿಕೆಯ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ಅವಸರಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಯೋಸೈಟಿಸ್​ ಕಾಯಿಲೆ ಬಂದಾಗಿನಿಂದ ಅವರ ವೇಗ ಕಡಿಮೆ ಆಗಿದೆ. ಈ ಮೊದಲೇ ಒಪ್ಪಿಕೊಂಡಿದ್ದ ಸಿನಿಮಾಗಳ ಕೆಲಸಗಳನ್ನು ಮುಗಿಸಿಕೊಟ್ಟು, ಈಗ ಸಮಂತಾ (Samantha) ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ಅದರ ನಡುವೆಯೂ ಅವರು ಅಭಿಮಾನಿಗಳನ್ನು ಮರೆತಿಲ್ಲ. ಫ್ಯಾನ್ಸ್​ ಸಲುವಾಗಿ ಹೊಸ ಹೊಸ ಫೋಟೋಶೂಟ್​ (Samantha New Photoshoot) ಮಾಡಿಸುತ್ತಿದ್ದಾರೆ. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಲಕ್ಷಾಂತರ ಲೈಕ್ಸ್​ ಪಡೆಯುತ್ತಿದ್ದಾರೆ.

ಈ ವರ್ಷ ವಿಜಯ್​ ದೇವರಕೊಂಡ ಜೊತೆ ಸಮಂತಾ ರುತ್​ ಪ್ರಭು ಅಭಿನಯಿಸಿದ ‘ಖುಷಿ’ ಸಿನಿಮಾ ಬಿಡುಗಡೆಯಾಗಿ ಸಾಧಾರಣ ಸಕ್ಸಸ್​ ಕಂಡಿತು. ಆ ಬಳಿಕ ಅವರು ಚಿಕಿತ್ಸೆ ಪಡೆಯುವ ಸಲುವಾಗಿ ವಿದೇಶಕ್ಕೆ ತೆರಳಿದರು. ಹಾಗಂತ ಅವರು ಎಲ್ಲ ದಿನವೂ ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತಿಲ್ಲ. ಚಿಕಿತ್ಸೆ ನಡುವೆ ಹಲವು ಊರುಗಳನ್ನು ಸುತ್ತುತ್ತ, ಅಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ಎಂಜಾಯ್​ ಮಾಡುತ್ತಿದ್ದಾರೆ. ಅದರ ಜೊತೆ ಫೋಟೋಶೂಟ್​ ಮಾಡಿಸುವತ್ತಲೂ ಗಮನ ಹರಿಸಿದ್ದಾರೆ. ಅಭಿಮಾನಿಗಳು ಈ ಫೋಟೋಗಳನ್ನು ಮೆಚ್ಚಿಕೊಂಡಿದ್ದಾರೆ.

View this post on Instagram

A post shared by Saaki (@saaki.world)

ಸಮಂತಾ ರುತ್​ ಪ್ರಭು ಅವರು ಯಾವ ಡ್ರೆಸ್​ ಧರಿಸಿದರೂ ಸೂಪರ್ ಆಗಿ ಕಾಣುತ್ತಾರೆ. ಗ್ಲಾಮರಸ್​ ಆಗಿ ಪೋಸ್​ ನೀಡಲು ಅವರು ಹಿಂದೇಟು ಹಾಕುವವರಲ್ಲ. ಸೀರೆ ಧರಿಸಿಯೂ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ವೈರಲ್​ ಆಗಿರುವ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇತ್ತೀಚೆಗೆ ಸಮಂತಾ ಅವರಿಗೆ ಸೀರೆ ಬಗ್ಗೆ ವಿಶೇಷ ಒಲವು ಮೂಡಿದಂತಿದೆ. ಬಣ್ಣಬಣ್ಣದ ಸೀರೆ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಫ್ಯಾನ್ಸ್​ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ಹೆಚ್ಚಾಗಿದೆ ಸಮಂತಾ ಓಡಾಟ; ಹಿಂದಿ ಸಿನಿಮಾ ಮಾಡ್ತಾರಾ?

ನಟ ನಾಗಚೈತನ್ಯ ಅವರ ಜೊತೆಗಿನ ದಾಂಪತ್ಯವನ್ನು ಕಡಿದುಕೊಂಡ ಬಳಿಕ ಸಮಂತಾ ಅವರ ಬದುಕಿನಲ್ಲಿ ಹೊಸ ಇನ್ನಿಂಗ್ಸ್​ ಆರಂಭ ಆಯಿತು. ಸಿನಿಮಾಗಳ ಆಯ್ಕೆಯಲ್ಲಿ ಅವರು ಬೇರೆಯದೇ ನಿಯಮ ಪಾಲಿಸಲು ಆರಂಭಿಸಿದರು. ಪಾತ್ರಕ್ಕೆ ಅನಿವಾರ್ಯ ಎನಿಸಿದಾಗ ಯಾವುದೇ ಮಡಿವಂತಿಕೆ ಇಲ್ಲದೇ ಅಭಿನಯಿಸಲು ಶುರು ಮಾಡಿದರು. ಸದ್ಯಕ್ಕೆ ಅವರಿಗೆ ಸಖತ್​ ಬೇಡಿಕೆ ಇದೆ. ತೆಲುಗು ಮಾತ್ರವಲ್ಲದೇ ಬಾಲಿವುಡ್​ನಿಂದಲೂ ಹೆಚ್ಚು ಆಫರ್​ಗಳು ಅವರಿಗೆ ಬರುತ್ತಿವೆ. ವೆಬ್​ ಸಿರೀಸ್​ ಲೋಕದಲ್ಲೂ ಸಮಂತಾಗೆ ಭಾರಿ ಡಿಮ್ಯಾಂಡ್​ ಸೃಷ್ಟಿಯಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು