AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: 12 ಕೋಟಿ ರೂಪಾಯಿ ಲಾಸ್ ಮಾಡಿಕೊಂಡ ಸಮಂತಾ; ಇದಕ್ಕೂ ಒಂದು ವರ್ಷ ಬ್ರೇಕ್​ಗೂ ಇದೆ ಲಿಂಕ್

2020ರಲ್ಲಿ ಕೊವಿಡ್ ಕಾಣಿಸಿ ಕೊಂಡಿತು. ಅದಕ್ಕೂ ಮೊದಲು ವರ್ಷಕ್ಕೆ ಸಮಂತಾ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ, ಕೊವಿಡ್ ಕಾಣಿಸಿಕೊಂಡ ಬಳಿಕ ಸಮಂತಾ ವೃತ್ತಿ ಜೀವನದ ವೇಗ ಕೊಂಚ ತಗ್ಗಿದೆ.

Samantha: 12 ಕೋಟಿ ರೂಪಾಯಿ ಲಾಸ್ ಮಾಡಿಕೊಂಡ ಸಮಂತಾ; ಇದಕ್ಕೂ ಒಂದು ವರ್ಷ ಬ್ರೇಕ್​ಗೂ ಇದೆ ಲಿಂಕ್
ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jul 26, 2023 | 8:57 AM

Share

ನಟಿ ಸಮಂತಾ (Samantha) ಅವರು ಸದ್ಯ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. Myositis ಕಾಯಿಲೆಯಿಂದ ಬಳಲುತ್ತಿರುವ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕಾಯಿಲೆಯಿಂದ ಸ್ವಲ್ಪ ಚೇತರಿಕೆ ಕಂಡ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಮುಗಿಸಿಕೊಟ್ಟರು. ಹೀಗಿರುವಾಗಲೇ ಸಮಂತಾ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಸಮಂತಾಗೆ ಇದರಿಂದ ಒಂದಲ್ಲ, ಎರಡಲ್ಲ ಬರೋಬ್ಬರಿ 12 ಕೋಟಿ ರೂಪಾಯಿ ನಷ್ಟ ಆಗುತ್ತಿದೆ! ಸದ್ಯ ಹೀಗೊಂದು ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2020ರಲ್ಲಿ ಕೊವಿಡ್ ಕಾಣಿಸಿಕೊಂಡಿತು. ಅದಕ್ಕೂ ಮೊದಲು ವರ್ಷಕ್ಕೆ ಸಮಂತಾ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ, ಕೊವಿಡ್ ಕಾಣಿಸಿಕೊಂಡ ಬಳಿಕ ಸಮಂತಾ ವೃತ್ತಿ ಜೀವನದ ವೇಗ ಕೊಂಚ ತಗ್ಗಿದೆ. ಎಲ್ಲವೂ ಸರಿ ಆಯಿತು ಎಂದುಕೊಳ್ಳುವಾಗಲೇ ಅವರಿಗೆ myositis ಕಾಯಿಲೆ ಕಾಣಿಸಿಕೊಂಡಿತು. ಈಗ ಸಮಂತಾಗೆ ಒಂದು ವರ್ಷ ಬ್ರೇಕ್ ಪಡೆಯೋದು ಅನಿವಾರ್ಯ ಆಗಿದೆ.

ಸಮಂತಾ ಅವರು ಪ್ರತಿ ಸಿನಿಮಾಗೆ 3.5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಇದರ ಜೊತೆಗೆ ಅನೇಕ ಜಾಹೀರಾತುಗಳಲ್ಲಿ ಅವರು ನಟಿಸುತ್ತಾರೆ. ಇದನ್ನು ಗಮನದಲ್ಲಿ ಇಟ್ಟುಕೊಂಡರೆ ವರ್ಷಕ್ಕೆ ಅವರು 12 ಕೋಟಿ ರೂಪಾಯಿ ಗಳಿಕೆ ಮಾಡುತ್ತಿದ್ದರು. ಈಗ ಒಂದು ವರ್ಷದ ಬ್ರೇಕ್​ನಿಂದ ಅವರಿಗೆ 12 ಕೋಟಿ ರೂಪಾಯಿ ನಷ್ಟ ಆಗಿದೆ. ಈ ನಷ್ಟ ಭರಿಸಲು ಅವರು ಸಿದ್ಧರಿದ್ದಾರೆ.

ಇದನ್ನೂ ಓದಿ: ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ಇತ್ತೀಚೆಗೆ ಸಮಂತಾ ಅವರು ಬಾಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫ್ರೆಂಡ್ ಜೊತೆ ಸೇರಿ ಅವರು ಬಾಲಿ ಸುತ್ತುತ್ತಿದ್ದಾರೆ. ಸಿನಿಮಾ ವಿಚಾರಕ್ಕೆ ಬರೋದಾದರೆ ಅವರ ನಟನೆಯ ‘ಖುಷಿ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ಹೀರೋ. ಇನ್ನು, ಇಂಗ್ಲಿಷ್ ಸೀರಿಸ್​ ‘ಸಿಟಾಡೆಲ್’ನ ಇಂಡಿಯನ್ ವರ್ಷನ್​ನಲ್ಲಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Wed, 26 July 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ