AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವೈರಲ್​ ಆಗ್ತಿದೆ ಸಮಂತಾ-ನಾಗಚೈತನ್ಯ ಮದುವೆ ಫೋಟೋ; ಮತ್ತೆ ಒಂದಾಗ್ತಾರಾ ಮಾಜಿ ದಂಪತಿ?

Naga Chaitanya: ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿ, ವಿಚ್ಛೇದನ ಪಡೆದ ಬಳಿಕ ಸಮಂತಾ ರುತ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಇದ್ದ ಒಂದಷ್ಟು ಹಳೇ ಫೋಟೋಗಳನ್ನು ತೆಗೆದು ಹಾಕಿದ್ದರು. ಅದರಲ್ಲೂ ಮದುವೆಯ ಫೋಟೋಗಳನ್ನು ಜನರಿಗೆ ಕಾಣದಂತೆ ಮಾಡಿದ್ದರು. ಆದರೆ ಈಗ ಅವರ ಮದುವೆಯ ಫೋಟೋ ಮತ್ತೆ ಕಾಣಿಸಲು ಆರಂಭಿಸಿದೆ.

Samantha: ವೈರಲ್​ ಆಗ್ತಿದೆ ಸಮಂತಾ-ನಾಗಚೈತನ್ಯ ಮದುವೆ ಫೋಟೋ; ಮತ್ತೆ ಒಂದಾಗ್ತಾರಾ ಮಾಜಿ ದಂಪತಿ?
ಸಮಂತಾ ರುತ್​ ಪ್ರಭು, ನಾಗ ಚೈತನ್ಯ
ಮದನ್​ ಕುಮಾರ್​
|

Updated on: Sep 19, 2023 | 5:54 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರ ಜೀವನದಲ್ಲಿ ಅನೇಕ ಏರುಪೇರುಗಳು ಉಂಟಾಗಿವೆ. ನಾಗ ಚೈತನ್ಯ ಅವರನ್ನು ಹಲವು ವರ್ಷ ಪ್ರೀತಿಸಿ ಮದುವೆ ಆದ ಸಮಂತಾ ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. 2021ರ ಅಕ್ಟೋಬರ್​ನಲ್ಲಿ ಅವರು ಡಿವೋರ್ಸ್​ (Divorce) ಪಡೆದುಕೊಂಡಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಕುರಿತಂತೆ ಅನೇಕ ಅಂತೆ-ಕಂತೆಗಳು ಹರಿದಾಡಿದವು. ಅಚ್ಚರಿ ಏನೆಂದರೆ, ಈಗ ಮತ್ತೆ ಸಮಂತಾ ರುತ್​ ಪ್ರಭು ಹಾಗೂ ನಾಗ ಚೈತನ್ಯ (Naga Chaitanya) ಅವರು ಒಂದಾಗುತ್ತಾರಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಮದುವೆ ಫೋಟೋ! ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ.

ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿ, ವಿಚ್ಛೇದನ ಪಡೆದ ಬಳಿಕ ಸಮಂತಾ ರುತ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಇದ್ದ ಒಂದಷ್ಟು ಹಳೇ ಫೋಟೋಗಳನ್ನು ತೆಗೆದು ಹಾಕಿದ್ದರು. ಅದರಲ್ಲೂ ನಿರ್ದಿಷ್ಟವಾಗಿ ತಮ್ಮ ಮದುವೆಯ ಫೋಟೋಗಳನ್ನು ಜನರಿಗೆ ಕಾಣದಂತೆ ಮಾಡಿದ್ದರು. ಆದರೆ ಈಗ ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮದುವೆಯ ಫೋಟೋ ಮತ್ತೆ ಕಾಣಿಸಲು ಆರಂಭಿಸಿದೆ. ಸಮಂತಾ ಹೀಗೆ ಮಾಡಲು ಕಾರಣ ಏನು ಎಂದು ಜನರು ತಲೆ ಕೆಡಿಸಿಕೊಂಡಿದ್ದಾರೆ. ಈ ಮಾಜಿ ದಂಪತಿ ಮತ್ತೆ ಒಂದಾಗಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: ಮಾಜಿ ಸೊಸೆಯ ನೆನಪಿಸಿಕೊಂಡ ನಾಗಾರ್ಜುನ, ‘ಸಮಂತಾ ಎಲ್ಲಿ’ ಎಂದು ಪ್ರಶ್ನೆ

ಡಿವೋರ್ಸ್​ ಪಡೆದ ಬಳಿಕ ಸಮಂತಾ ಅವರ ಬದುಕು ಸಂಪೂರ್ಣ ಬದಲಾಯಿತು. ಅವರು ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಶೈಲಿ ಕೂಡ ಬದಲಾಯಿತು. ಅನೇಕ ದೇಶಗಳಿಗೆ ಅವರು ಭೇಟಿ ನೀಡಿದರು. ಬೋಲ್ಡ್​ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ನಟಿಸಿದರು. ಅದರ ನಡುವೆ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಅದರಿಂದ ಹಲವು ತಿಂಗಳ ಕಾಲ ಅವರು ಸಿನಿಮಾ ಕೆಲಸಗಳಿಂದ ದೂರ ಉಳಿಯಬೇಕಾಯಿತು. ಅತ್ತ, ನಾಗ ಚೈತನ್ಯ ಅವರು ನಟಿ ಶೋಭಿತಾ ದುಳಿಪಾಲಾ ಜೊತೆ ಡೇಟಿಂಗ್ ಮಾಡಲು ಆರಂಭಿಸಿದರು. ಈಗ ನಾಗ ಚೈತನ್ಯ ಮತ್ತು ಶೋಭಿತಾ ದೂರಾಗಿರಬಹುದಾ? ಆ ಕಾರಣದಿಂದ ಸಮಂತಾ ಮತ್ತೆ ನಾಗ ಚೈತನ್ಯಗೆ ಹತ್ತಿರ ಆಗಿರಬಹುದು? ಇಂಥ ಹಲವು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಸಮಂತಾ ಅವರ ಅಪ್ಪಟ ಅಭಿಮಾನಿಗಳು ಈ ಮಾತುಗಳನ್ನು ಒಪ್ಪಿಕೊಂಡಿಲ್ಲ. ಮತ್ತೆ ನಾಗ ಚೈತನ್ಯ ಜೊತೆ ರಾಜಿ ಅಗುವ ಸಾಧ್ಯತೆ ತುಂಬ ಕಡಿಮೆ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ‘ಸಮಂತಾ ಅವರು ಜೀವನದಲ್ಲಿ ಮುಂದೆ ಸಾಗಿದ್ದಾರೆ. ಮದುವೆ ಆಗಿತ್ತು, ವಿಚ್ಛೇದನ ಆಯಿತು ಎಂಬುದನ್ನೆಲ್ಲ ಅವರೀಗ ಒಪ್ಪಿಕೊಂಡು ಬಹಳ ಮುಂದೆ ಬಂದಿದ್ದಾರೆ. ಈಗ ಮದುವೆ ಫೋಟೋ ಕಾಣಿಸಿದರೂ ಕಾಣಿಸದೇ ಇದ್ದರೂ ಅವರಿಗೆ ಏನೂ ವ್ಯತ್ಯಾಸ ಆಗಲ್ಲ’ ಎಂದು ಅಭಿಮಾನಿಗಳು ಸಮಂತಾ ಪರ ಬ್ಯಾಟ್​ ಬೀಸುತ್ತಿದ್ದಾರೆ. ‘ಖುಷಿ’ ಸಿನಿಮಾದ ಬಳಿಕ ಸಮಂತಾ ಅವರು ಮತ್ತೆ ಬ್ರೇಕ್​ ತೆಗೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ