AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ’; ಸಮಂತಾ ಬೇಸರ

ಸಮಂತಾ ರುತ್ ಪ್ರಭು ಅವರು ಇತ್ತೀಚೆಗೆ ಋತುಚಕ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಮಹಿಳೆಯರು ಈ ವಿಷಯದ ಬಗ್ಗೆ ಮೌನ ವಹಿಸುವುದನ್ನು ಅವರು ಖಂಡಿಸಿದ್ದಾರೆ. ನಟನೆ ಮತ್ತು ನಿರ್ಮಾಣದಲ್ಲಿ ತೊಡಗಿರುವ ಸಮಂತಾ, 'ಶುಭಂ' ಚಿತ್ರ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಹಾಗೂ ವೆಬ್ ಸೀರಿಸ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ’; ಸಮಂತಾ ಬೇಸರ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Apr 17, 2025 | 7:21 AM

Share

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಇತ್ತೀಚೆಗೆ ಸಿನಿಮಾ ಕಾರಣಕ್ಕೆ ಹೆಚ್ಚು ಸುದ್ದಿ ಆಗುತ್ತಿಲ್ಲ. ‘ಖುಷಿ’ ಬಳಿಕ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿಲ್ಲ. ಅನಾರೋಗ್ಯದ ಕಾರಣದಿಂದ ಅವರು ಸಿನಿಮಾ ಕೆಲಸ ಕಡಿಮೆ ಮಾಡಿದ್ದಾರೆ. ವೆಬ್ ಸೀರಿಸ್​​ಗಳತ್ತ ಅವರ ಗಮನ ಇದೆ. ಇವುಗಳ ಜೊತೆ ಸಮಂತಾ ಅವರು ಸಾಮಾಜಿಕ ಕಳಕಳಿ ತೋರಿಸುವ ಕೆಲಸ ಮಾಡುತ್ತಾರೆ. ಮಹಿಳೆಯರ ಪರವಾಗಿ ಧ್ವನಿ ಎತ್ತುತ್ತಾರೆ. ಈಗ ಅವರು ಋತುಚಕ್ರದ ಬಗ್ಗೆ ಮಾತನಾಡಿದ್ದು, ಈ ವಿಚಾರವನ್ನು ಓಪನ್ ಆಗಿ ಮಾತನಾಡಲು ಮುಜುಗರಪಟ್ಟುಕೊಳ್ಳುವ ಸ್ಥಿತಿ ಇದೆ ಎಂದು ಬೇಸರ ಹೊರಹಾಕಿದ್ದಾರೆ.

‘ಮಹಿಳೆಯರಾಗಿ ನಾವು ಇಲ್ಲಿಯವರೆಗೆ ಬಂದಿದ್ದೇವೆ. ಆದರೂ ಋತುಚಕ್ರದ ವಿಚಾರಗಳ ಬಗ್ಗೆ ಮಾತನಾಡುವಾಗ ಇನ್ನೂ ಮೌನ ವಹಿಸುತ್ತೇವೆ. ​​ಪಿಸುಮಾತುಗಳಿಂದ ಹೇಳುತ್ತೇವೆ. ಅವಮಾನ ಎಂದು ಭಾವಿಸುತ್ತೇವೆ’ ಎಂದು ಸಮಂತಾ ಅವರು ಬೇಸರ ಹೊರಹಾಕಿದ್ದಾರೆ. ಈ ಮನಸ್ಥಿತಿ ಬದಲಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

‘ನಮ್ಮ ಋತುಚಕ್ರ ಶಕ್ತಿಯುತವಾಗಿವೆ. ಇದು ಜೀವನವನ್ನು ದೃಢಪಡಿಸುತ್ತವೆ. ಇದು ಖಂಡಿತವಾಗಿಯೂ ಮುಜುಗರ ಅಥವಾ ಹಗುರವಾಗಿ ಪರಿಗಣಿಸುವ ವಿಷಯವಲ್ಲ. ಋತುಚಕ್ರ ನಮ್ಮ ಮನಸ್ಸು ಮತ್ತು ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಪ್ರತಿ ವರ್ಷವೂ ನಿರಂತರವಾಗಿ ಕಲಿಯುತ್ತಲೇ ಇರಬೇಕು’ ಎಂದು ಸಮಂತಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್
Image
ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?
Image
ರಶ್ಮಿಕಾ ಸಸ್ಯಾಹಾರಿಯೋ, ಮಾಂಸಹಾರಿಯೋ? ಈ ತರಕಾರಿ ಕಂಡರೆ ಆಗುವುದೇ ಇಲ್ಲ
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ

ಸಮಂತಾ ಅವರು ನಟನೆ ಜೊತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರ ನಟನೆಯ ‘ಶುಭಂ’ ಚಿತ್ರ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಇದರ ಟೀಸರ್ ರಿಲೀಸ್ ಆಗಿದೆ. ಇದರ ಜೊತೆಗೆ ಸಮಂತಾ ಅವರು ವೆಬ್ ಸೀರಿಸ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ‘ಮಾ ಇಂಟಿ ಬಂಗಾರಂ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ವರ್ಷ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ. ಇನ್ನು, ರಾಜ್ ಹಾಗೂ ಡಿಕೆ ನಿರ್ದೇಶನ ಮಾಡುತ್ತಿರುವ ‘ರಕ್ತ ಬ್ರಹ್ಮಾಂಡ: ದಿ ಬ್ಲಡಿ ಕಿಂಗ್​ಡಮ್’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಸಮಂತಾಗೆ ಭಾರಿ ದೊಡ್ಡ ಅವಕಾಶ, ವೃತ್ತಿ ಜೀವನದ ಬಿಗ್​ಬಜೆಟ್ ಸಿನಿಮಾದಲ್ಲಿ ನಟನೆ

ಇನ್ನು, ರಾಜ್ ಜೊತೆ ಸಮಂತಾ ಡೇಟಿಂಗ್ ಮಾಡತ್ತಿರುವ ಬಗ್ಗೆ ವರದಿಗಳೂ ಇವೆ. ಆದರೆ, ಇದನ್ನು ಸಮಂತಾ ಅವರು ಖಚಿತಪಡಿಸಿಲ್ಲ. ರಾಜ್ ಅವರಿಗೆ ಈಗಾಗಲೇ ವಿವಾಹ ಆಗಿದೆ. ಅವರ ಜೊತೆ ಸಮಂತಾ ಕಾಣಿಸಿಕೊಂಡಿರೋದು ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು