AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾಗೂ ಇಷ್ಟವಾಯ್ತು ‘ಹನುಮಾನ್​’ ಸಿನಿಮಾ; ಮನಸಾರೆ ಹೊಗಳಿದ ನಟಿ

ಸೂಪರ್​ ಹೀರೋ ಕಾನ್ಸೆಪ್ಟ್​ನಲ್ಲಿ ‘ಹನುಮಾನ್​’ ಸಿನಿಮಾ ಮೂಡಿಬಂದಿದೆ. ಹನುಮಂತನ ಕೃಪೆಯಿಂದ ಸೂಪರ್​ ಹೀರೋ ಆಗಿ ಬದಲಾಗುವ ಸಾಮಾನ್ಯ ಹಳ್ಳಿ ಹುಡುಗನ ಕಾಲ್ಪನಿಕ ಕಥೆ ಈ ಸಿನಿಮಾದಲ್ಲಿದೆ. ಸಮಂತಾ ರುತ್ ಪ್ರಭು ಅವರು ಈ ಚಿತ್ರಕ್ಕೆ ಭೇಷ್​ ಎಂದಿದ್ದಾರೆ. ಅವರು ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್​ ಆಗಿದೆ.

ಸಮಂತಾಗೂ ಇಷ್ಟವಾಯ್ತು ‘ಹನುಮಾನ್​’ ಸಿನಿಮಾ; ಮನಸಾರೆ ಹೊಗಳಿದ ನಟಿ
ತೇಜ ಸಜ್ಜಾ, ಸಮಂತಾ
ಮದನ್​ ಕುಮಾರ್​
|

Updated on: Jan 18, 2024 | 7:00 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಸದ್ಯಕ್ಕೆ ಬ್ರೇಕ್​ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾವನ್ನು ಅವರು ಒಪ್ಪಿಕೊಳ್ಳುತ್ತಿಲ್ಲ. ಹಾಗಂತ ಚಿತ್ರರಂಗದಿಂದ ಅವರು ದೂರ ಉಳಿದುಕೊಂಡಿಲ್ಲ. ಬಣ್ಣದ ಲೋಕದಲ್ಲಿ ಏನಾಗುತ್ತಿದೆ ಎಂಬುದನ್ನು ಅವರು ಗಮನಿಸುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂದರೆ ಅವರು ‘ಹನುಮಾನ್​’ ಸಿನಿಮಾ (Hanuman Movie) ವೀಕ್ಷಿಸಿರುವುದು. ಇತ್ತೀಚೆಗೆ ಚಿತ್ರಮಂದಿರಕ್ಕೆ ಬಂದು ಸಮಂತಾ ಅವರು ಈ ಸಿನಿಮಾ ನೋಡಿದ್ದಾರೆ. ತೇಜ ಸಜ್ಜಾ ನಟನೆಯ ಈ ಚಿತ್ರ ಅವರಿಗೆ ತುಂಬ ಇಷ್ಟ ಆಗಿದೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

ಸೂಪರ್​ ಹೀರೋ ಕಾನ್ಸೆಪ್ಟ್​ನಲ್ಲಿ ‘ಹನುಮಾನ್​’ ಸಿನಿಮಾ ಮೂಡಿಬಂದಿದೆ. ಹನುಮಂತನ ಕೃಪೆಯಿಂದ ಸೂಪರ್​ ಹೀರೋ ಆಗಿ ಬದಲಾಗುವ ಸಾಮಾನ್ಯ ಹಳ್ಳಿ ಹುಡುಗನ ಕಾಲ್ಪನಿಕ ಕಥೆ ಈ ಸಿನಿಮಾದಲ್ಲಿದೆ. ಅನೇಕ ಸೆಲೆಬ್ರಿಟಿಗಳು ‘ಹನುಮಾನ್​’ ಚಿತ್ರವನ್ನು ನೋಡಿ ಹೊಗಳಿದ್ದಾರೆ. ಶಿವರಾಜ್​ಕುಮಾರ್​, ನಂದಮೂರಿ ಬಾಲಕೃಷ್ಣ ಬಳಿಕ ಸಮಂತಾ ರುತ್ ಪ್ರಭು ಕೂಡ ಈ ಚಿತ್ರಕ್ಕೆ ಭೇಷ್​ ಎಂದಿದ್ದಾರೆ. ಅವರು ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾ ನೋಡಿ ಭೇಷ್​ ಎಂದ ಬಾಲಯ್ಯ; ಹೆಚ್ಚಿತು ಚಿತ್ರತಂಡದ ಬಲ

ನಟನೆಯಿಂದ ಬ್ರೇಕ್​ ತೆಗೆದುಕೊಂಡಿದ್ದರೂ ಕೂಡ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ. ‘ಹನುಮಾನ್​’ ವಿಮರ್ಶೆಯನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಿಳಿಸಿದ್ದಾರೆ. ‘ನಮ್ಮನ್ನು ಪುನಃ ಮಕ್ಕಳಂತೆ ಫೀಲ್​ ಮಾಡಿಸುವ ಸಿನಿಮಾಗಳೇ ಅತ್ಯುತ್ತಮ ಸಿನಿಮಾಗಳು’ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

‘ಹನುಮಾನ್​’ ಸಿನಿಮಾದ ದೃಶ್ಯಗಳು, ಕಾಮಿಡಿ, ಸಂಗೀತ, ಎಲ್ಲ ನಟರ ಅಭಿನಯ ಮುಂತಾದ ವಿಚಾರಗಳನ್ನು ಸಮಂತಾ ಇಷ್ಟಪಟ್ಟಿದ್ದಾರೆ. ನಿರ್ದೇಶಕ ಪ್ರಶಾಂತ್​ ವರ್ಮಾ ಅವರ ಕೆಲಸಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ‘ಹನುಮಾನ್​’ ಚಿತ್ರದ ಮುಂದಿನ ಚಾಪ್ಟರ್​ಗಾಗಿ ತಾವು ಕಾಯುತ್ತಿರುವುದಾಗಿ ಹೇಳಿದ್ದಾರೆ. ಮುಖ್ಯ ಪಾತ್ರ ಮಾಡಿರುವ ತೇಜ ಸಜ್ಜಾಗೆ ಸಮಂತಾ ಕಡೆಯಿಂದ ಫುಲ್​ ಮಾರ್ಕ್ಸ್​ ಸಿಕ್ಕಿದೆ. ವರಲಕ್ಷ್ಮಿ ಶರತ್​ಕುಮಾರ್​, ವಿಲನ್​ ಪಾತ್ರ ಮಾಡಿದ ವಿನಯ್​ ರೈ ಅವರಿಗೆ ಸಮಂತಾ ಚೆಪ್ಪಾಳೆ ತಟ್ಟಿದ್ದಾರೆ. ಇನ್ನು, ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಕೂಡ ಈ ಚಿತ್ರತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ