AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾಗೂ ಇಷ್ಟವಾಯ್ತು ‘ಹನುಮಾನ್​’ ಸಿನಿಮಾ; ಮನಸಾರೆ ಹೊಗಳಿದ ನಟಿ

ಸೂಪರ್​ ಹೀರೋ ಕಾನ್ಸೆಪ್ಟ್​ನಲ್ಲಿ ‘ಹನುಮಾನ್​’ ಸಿನಿಮಾ ಮೂಡಿಬಂದಿದೆ. ಹನುಮಂತನ ಕೃಪೆಯಿಂದ ಸೂಪರ್​ ಹೀರೋ ಆಗಿ ಬದಲಾಗುವ ಸಾಮಾನ್ಯ ಹಳ್ಳಿ ಹುಡುಗನ ಕಾಲ್ಪನಿಕ ಕಥೆ ಈ ಸಿನಿಮಾದಲ್ಲಿದೆ. ಸಮಂತಾ ರುತ್ ಪ್ರಭು ಅವರು ಈ ಚಿತ್ರಕ್ಕೆ ಭೇಷ್​ ಎಂದಿದ್ದಾರೆ. ಅವರು ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್​ ಆಗಿದೆ.

ಸಮಂತಾಗೂ ಇಷ್ಟವಾಯ್ತು ‘ಹನುಮಾನ್​’ ಸಿನಿಮಾ; ಮನಸಾರೆ ಹೊಗಳಿದ ನಟಿ
ತೇಜ ಸಜ್ಜಾ, ಸಮಂತಾ
ಮದನ್​ ಕುಮಾರ್​
|

Updated on: Jan 18, 2024 | 7:00 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಸದ್ಯಕ್ಕೆ ಬ್ರೇಕ್​ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾವನ್ನು ಅವರು ಒಪ್ಪಿಕೊಳ್ಳುತ್ತಿಲ್ಲ. ಹಾಗಂತ ಚಿತ್ರರಂಗದಿಂದ ಅವರು ದೂರ ಉಳಿದುಕೊಂಡಿಲ್ಲ. ಬಣ್ಣದ ಲೋಕದಲ್ಲಿ ಏನಾಗುತ್ತಿದೆ ಎಂಬುದನ್ನು ಅವರು ಗಮನಿಸುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂದರೆ ಅವರು ‘ಹನುಮಾನ್​’ ಸಿನಿಮಾ (Hanuman Movie) ವೀಕ್ಷಿಸಿರುವುದು. ಇತ್ತೀಚೆಗೆ ಚಿತ್ರಮಂದಿರಕ್ಕೆ ಬಂದು ಸಮಂತಾ ಅವರು ಈ ಸಿನಿಮಾ ನೋಡಿದ್ದಾರೆ. ತೇಜ ಸಜ್ಜಾ ನಟನೆಯ ಈ ಚಿತ್ರ ಅವರಿಗೆ ತುಂಬ ಇಷ್ಟ ಆಗಿದೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

ಸೂಪರ್​ ಹೀರೋ ಕಾನ್ಸೆಪ್ಟ್​ನಲ್ಲಿ ‘ಹನುಮಾನ್​’ ಸಿನಿಮಾ ಮೂಡಿಬಂದಿದೆ. ಹನುಮಂತನ ಕೃಪೆಯಿಂದ ಸೂಪರ್​ ಹೀರೋ ಆಗಿ ಬದಲಾಗುವ ಸಾಮಾನ್ಯ ಹಳ್ಳಿ ಹುಡುಗನ ಕಾಲ್ಪನಿಕ ಕಥೆ ಈ ಸಿನಿಮಾದಲ್ಲಿದೆ. ಅನೇಕ ಸೆಲೆಬ್ರಿಟಿಗಳು ‘ಹನುಮಾನ್​’ ಚಿತ್ರವನ್ನು ನೋಡಿ ಹೊಗಳಿದ್ದಾರೆ. ಶಿವರಾಜ್​ಕುಮಾರ್​, ನಂದಮೂರಿ ಬಾಲಕೃಷ್ಣ ಬಳಿಕ ಸಮಂತಾ ರುತ್ ಪ್ರಭು ಕೂಡ ಈ ಚಿತ್ರಕ್ಕೆ ಭೇಷ್​ ಎಂದಿದ್ದಾರೆ. ಅವರು ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾ ನೋಡಿ ಭೇಷ್​ ಎಂದ ಬಾಲಯ್ಯ; ಹೆಚ್ಚಿತು ಚಿತ್ರತಂಡದ ಬಲ

ನಟನೆಯಿಂದ ಬ್ರೇಕ್​ ತೆಗೆದುಕೊಂಡಿದ್ದರೂ ಕೂಡ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ. ‘ಹನುಮಾನ್​’ ವಿಮರ್ಶೆಯನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಿಳಿಸಿದ್ದಾರೆ. ‘ನಮ್ಮನ್ನು ಪುನಃ ಮಕ್ಕಳಂತೆ ಫೀಲ್​ ಮಾಡಿಸುವ ಸಿನಿಮಾಗಳೇ ಅತ್ಯುತ್ತಮ ಸಿನಿಮಾಗಳು’ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

‘ಹನುಮಾನ್​’ ಸಿನಿಮಾದ ದೃಶ್ಯಗಳು, ಕಾಮಿಡಿ, ಸಂಗೀತ, ಎಲ್ಲ ನಟರ ಅಭಿನಯ ಮುಂತಾದ ವಿಚಾರಗಳನ್ನು ಸಮಂತಾ ಇಷ್ಟಪಟ್ಟಿದ್ದಾರೆ. ನಿರ್ದೇಶಕ ಪ್ರಶಾಂತ್​ ವರ್ಮಾ ಅವರ ಕೆಲಸಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ‘ಹನುಮಾನ್​’ ಚಿತ್ರದ ಮುಂದಿನ ಚಾಪ್ಟರ್​ಗಾಗಿ ತಾವು ಕಾಯುತ್ತಿರುವುದಾಗಿ ಹೇಳಿದ್ದಾರೆ. ಮುಖ್ಯ ಪಾತ್ರ ಮಾಡಿರುವ ತೇಜ ಸಜ್ಜಾಗೆ ಸಮಂತಾ ಕಡೆಯಿಂದ ಫುಲ್​ ಮಾರ್ಕ್ಸ್​ ಸಿಕ್ಕಿದೆ. ವರಲಕ್ಷ್ಮಿ ಶರತ್​ಕುಮಾರ್​, ವಿಲನ್​ ಪಾತ್ರ ಮಾಡಿದ ವಿನಯ್​ ರೈ ಅವರಿಗೆ ಸಮಂತಾ ಚೆಪ್ಪಾಳೆ ತಟ್ಟಿದ್ದಾರೆ. ಇನ್ನು, ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಕೂಡ ಈ ಚಿತ್ರತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ