AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನೀವು ಗೆಲುವಿಗೆ ಅರ್ಹರು’; ಆರ್​​ಸಿಬಿ ಜಯಕ್ಕೆ ಪ್ರಾರ್ಥಿಸಿದ್ರಾ ಸಮಂತಾ?

ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಆರ್​ಸಿಬಿ ಗೆಲ್ಲಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಸಮಂತಾ ಅವರು ವಿರಾಟ್ ಕೊಹ್ಲಿ ಅವರ ಆರ್​ಸಿಬಿ ತಂಡ ಗೆಲ್ಲಲಿ ಎಂದು ಪ್ರಾರ್ಥಿಸಿದರೇ ಎನ್ನುವ ಅನುಮಾನ ಮೂಡಿದೆ.

Samantha: ‘ನೀವು ಗೆಲುವಿಗೆ ಅರ್ಹರು’; ಆರ್​​ಸಿಬಿ ಜಯಕ್ಕೆ ಪ್ರಾರ್ಥಿಸಿದ್ರಾ ಸಮಂತಾ?
ವಿರಾಟ್-ಸಮಂತಾ
ರಾಜೇಶ್ ದುಗ್ಗುಮನೆ
|

Updated on: May 22, 2024 | 10:42 AM

Share

ನಟಿ ಸಮಂತಾ (Samantha) ಅವರು ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅನಾರೋಗ್ಯ ಕಾರಣದಿಂದ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಸಖತ್ ಬೇಸರ ಇದೆ. ಇದರ ಜೊತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಾಕುವ ಪೋಸ್ಟ್​ಗಳು ಆಗಾಗ ಗಮನ ಸೆಳೆಯುತ್ತವೆ. ಈಗ ಸಮಂತಾ ಅವರ ಪೋಸ್ಟ್ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ಆರ್​ಸಿಬಿ ಗೆಲುವಿಗೆ ಪ್ರಾರ್ಥಿಸಿದರೇ ಎನ್ನುವ ಅನುಮಾನ ಮೂಡಿದೆ.

ಆರ್​ಸಿಬಿ ಅಭಿಮಾನಿ ಬಳಗ ದೊಡ್ಡದು. ರಾಜ್ಯ, ದೇಶದ ಗಡಿ ಮೀರಿ ಈ ತಂಡಕ್ಕೆ ಅಭಿಮಾನಿಗಳು ಇದ್ದಾರೆ. ಇಂದಿನ (ಮೇ 22) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಆರ್​ಸಿಬಿ ಗೆಲ್ಲಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಸಮಂತಾ ಅವರು ವಿರಾಟ್ ಕೊಹ್ಲಿ ಅವರ ಆರ್​ಸಿಬಿ ತಂಡ ಗೆಲ್ಲಲಿ ಎಂದು ಪ್ರಾರ್ಥಿಸಿದರೇ ಎನ್ನುವ ಅನುಮಾನ ಮೂಡಿದೆ.

ಇದನ್ನೂ ಓದಿ: ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ

ಇನ್​ಸ್ಟಾಗ್ರಾಮ್​ನಲ್ಲಿ ‘ನಾನು ನಿಮ್ಮ ಗೆಲುವನ್ನು ನೋಡಲು ಬಯಸುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ ಸಮಂತಾ. ಇಷ್ಟಕ್ಕೆ ನಿಂತಿಲ್ಲ. ಅವರು ಇದಕ್ಕೆ ಕ್ಯಾಪ್ಶನ್ ಕೂಡ ನೀಡಿದ್ದಾರೆ. ‘ನಿಮ್ಮ ಹೃದಯವು ಏನನ್ನು ಬಯಸಿದರೂ, ನೀವು ಯಾವುದೇ ಆಕಾಂಕ್ಷೆಗಳನ್ನು ಹೊಂದಿದ್ದರೂ, ನಾನು ನಿಮಗಾಗಿ ಬೇರೂರಿರುವೆ. ನೀವು ಗೆಲುವಿಗೆ ಅರ್ಹರು’ ಎಂದು ಸಮಂತಾ ಪೋಸ್ಟ್ ಮಾಡಿದ್ದಾರೆ. ಇದರಿಂದ ಸಮಂತಾ ಆರ್​​ಸಿಬಿ ತಂಡಕ್ಕೆ ಬೆಂಬಲ ಸೂಚಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.  

ಸಮಂತಾ ಅವರು ಈ ಮೊದಲು  ಹಲವು ಸಂದರ್ಶನಗಳಲ್ಲಿ ವಿರಾಟ್ ಕೊಹ್ಲಿ ಅವರನ್ನು ಹೊಗಳಿದ್ದಾರೆ. ಅವರ ಕಂಬ್ಯಾಕ್​ನಿಂದ ತಮಗೆ ಸ್ಫೂರ್ತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಈ ಬಾರಿಯ ಆರ್​ಸಿಬಿ ಕಂಬ್ಯಾಕ್​ನ ಯಾರೊಬ್ಬರೂ ಊಹಿಸಿರಲಿಲ್ಲ. ಇದರಿಂದ ಸಮಂತಾ ಇಂಪ್ರೆಸ್ ಆದರೇ ಎನ್ನುವ ಪ್ರಶ್ನೆ ಮೂಡಿದೆ. ವಿರಾಟ್ ಕೊಹ್ಲಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಆರೆಂಜ್ ಕ್ಯಾಪ್​ನ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?