AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಅಚಾನಕ್ಕಾಗಿ ಅರೆಬೆತ್ತಲೆ ಫೋಟೋ ಅಪ್​ಲೋಡ್ ಮಾಡಿದ್ರಾ ಸಮಂತಾ?

ಸಮಂತಾ ಹಲವು ಸಿನಿಮಾಗಳಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ ನಿಜ. ಅದು ತೆರೆಮೇಲಿನ ವಿಚಾರ ಅಷ್ಟೇ. ಆದರೆ, ಕೆಲವು ಕಿಡಿಗೇಡಿಗಳು ಅವರ ಹೆಸರನ್ನು ಕೆಡಿಸೋ ಪ್ರಯತ್ನದಲ್ಲಿದ್ದಾರೆ. ಅವರು ಅರೆಬೆತ್ತಲೆ ಫೋಟೋ ಹಂಚಿಕೊಂಡಿದ್ದಾರೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಆದರೆ ಅಸಲಿ ವಿಚಾರ ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ

Samantha: ಅಚಾನಕ್ಕಾಗಿ ಅರೆಬೆತ್ತಲೆ ಫೋಟೋ ಅಪ್​ಲೋಡ್ ಮಾಡಿದ್ರಾ ಸಮಂತಾ?
ಸಮಂತಾ
ರಾಜೇಶ್ ದುಗ್ಗುಮನೆ
|

Updated on: May 06, 2024 | 6:58 AM

Share

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ‘ಖುಷಿ’ ಬಳಿಕ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಇದಕ್ಕೆ ಕಾರಣ ಅವರಿಗೆ ಅನಾರೋಗ್ಯ ಉಂಟಾಗಿರುವುದು. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಆದಷ್ಟು ಬೇಗ ಹೊಸ ಚಿತ್ರಕ್ಕೆ ಸಹಿ ಹಾಕಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಮಧ್ಯೆ ಅವರ ಅತೆಬೆತ್ತಲೆ ಫೋಟೋ ಒಂದು ವೈರಲ್ ಆಗಿದೆ. ಸಮಂತಾ ಇನ್​ಸ್ಟಾಗ್ರಾಮ್ ಸ್ಟೇಟಸ್​ಗೆ ಹಾಕಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಅಸಲಿಗೆ ಇದು ತಿರುಚಿದ ಫೋಟೋ ಅನ್ನೋದು ಗೊತ್ತಾಗಿದೆ.

ಸಮಂತಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಅವರು ವಿಚ್ಛೇದನ ಕಾರಣಕ್ಕೆ ಸಾಕಷ್ಟು ಸುದ್ದಿ ಆಗಿದ್ದರು. ಈಗ ಸಮಂತಾ ಎಲ್ಲವನ್ನೂ ಮರೆತು ಮುಂದಕ್ಕೆ ಹೋಗುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಕೆಲವು ಕಿಡಿಕೇಡಿಗಳು ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಖಂಡಿಸಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಸಮಂತಾ ಅವರು ಚೇರ್ ಮೇಲೆ ಕುಳಿತಿರೋ ಫೋಟೋ, ಬಾತ್​ ಟಬ್​ನಲ್ಲಿ ಅರೆಬೆತ್ತಲಾಗಿ ಕುಳಿತಿರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇದು ಸಮಂತಾ ಫೋಟೋ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇವರು ಅಸಲಿಗೆ ಸಮಂತಾ ಅಲ್ಲವೇ ಅಲ್ಲ. ಇದು ಫೇಕ್ ಫೋಟೋ ಅನ್ನೋದು ಫ್ಯಾನ್ಸ್​ಗೆ ಗೊತ್ತಾಗಿದೆ. ಈ ರೀತಿ ಕಿಡಿಗೇಡಿತನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಕಳೆದ ವರ್ಷ ರಿಲೀಸ್ ಆಗಿ ಸಾಧಾರಣ ಗೆಲುವು ಕಂಡಿತು. ಆ ಬಳಿಕ ಸಮಂತಾ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರು ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ