AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಆರೋಗ್ಯ ಇಷ್ಟೊಂದು ಸುಧಾರಿಸಿತಾ? ನಟಿಯ ವರ್ಕೌಟ್​ ವಿಡಿಯೋ ನೋಡಿದವರಿಗೆ ಅಚ್ಚರಿ

Samantha Ruth Prabhu | Samantha Gym Video: ಸಮಂತಾ ಅವರು ಹಂಚಿಕೊಂಡಿರುವ ಈ ವಿಡಿಯೋ ವೈರಲ್​ ಆಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ.​ 3 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ.

Samantha: ಸಮಂತಾ ಆರೋಗ್ಯ ಇಷ್ಟೊಂದು ಸುಧಾರಿಸಿತಾ? ನಟಿಯ ವರ್ಕೌಟ್​ ವಿಡಿಯೋ ನೋಡಿದವರಿಗೆ ಅಚ್ಚರಿ
ಸಮಂತಾ ವರ್ಕೌಟ್
ಮದನ್​ ಕುಮಾರ್​
|

Updated on: Feb 20, 2023 | 3:04 PM

Share

ಚಿತ್ರರಂಗದಲ್ಲಿ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಅವಕಾಶಗಳು ಹೇರಳವಾಗಿ ಬರಲು ಆರಂಭಿಸಿದಾಗಲೇ ಆರೋಗ್ಯ ಕೈ ಕೊಟ್ಟಿತು. ಇದರಿಂದ ಅವರ ವೃತ್ತಿಬದುಕಿನ ಓಟ ಕುಂಠಿತವಾಯಿತು. Myositis ಕಾಯಿಲೆಯಿಂದ ಅವರು ಬಳಲುತ್ತಿರುವುದರಿಂದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳುವುದು ಕಡಿಮೆ ಆಯಿತು. ಚಿಕಿತ್ಸೆಗಾಗಿ ಅವರು ತುಂಬ ದಿನಗಳ ಕಾಲ ಬ್ರೇಕ್​ ಪಡೆದುಕೊಂಡರು. ಆದರೆ ಈಗ ಸಮಂತಾ (Samantha) ಅವರು ಮತ್ತೆ ಮೈಗೊಡವಿ ನಿಂತಿದ್ದಾರೆ. ಮತ್ತೆ ಮೊದಲಿನಂತೆ ಸಿನಿಮಾ, ವೆಬ್​ ಸೀರಿಸ್​ಗಳಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕಾಗಿ ಜಿಮ್​ನಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಮಂತಾ ವರ್ಕೌಟ್​ ಮಾಡುತ್ತಿರುವ ಹೊಸ ವಿಡಿಯೋ (Samantha Workout Video) ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Myositis ಕಾಯಿಲೆಯಿಂದ ಚೇತರಿಸಿಕೊಂಡಿರುವ ಸಮಂತಾ ರುತ್​ ಪ್ರಭು ಅವರು ಈಗ ಫಿಟ್ನೆಸ್​ ಕಡೆಗೆ ಗಮನ ಹರಿಸಿದ್ದಾರೆ. ಹೆಚ್ಚು ಸಮಯವನ್ನು ಜಿಮ್​ನಲ್ಲಿ ಕಳೆಯುತ್ತಿದ್ದಾರೆ. ‘ನಾವು ಇನ್ನಷ್ಟು ಸದೃಢರಾಗುವ ವರ್ಷ 2023’ ಎಂಬ ಕ್ಯಾಪ್ಷನ್​ನೊಂದಿಗೆ ಅವರು ಹೊಸ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ‘ಈ ರೀತಿ ಮಾಡಲು ನೀವು ಪ್ರಯತ್ನಿಸುತ್ತೀರಾ?’ ಎಂದು ಅವರು ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Samantha: ಮುಂಬೈನಲ್ಲಿ 3 ಬೆಡ್​ ರೂಂ ಮನೆ ಖರೀದಿಸಿದ ನಟಿ ಸಮಂತಾ; ಇದರ ಬೆಲೆ ಎಷ್ಟು?

ಸಮಂತಾ ಅವರು ಹಂಚಿಕೊಂಡಿರುವ ಈ ವಿಡಿಯೋ ವೈರಲ್​ ಆಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ.​ 3 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. 88 ಲಕ್ಷಕ್ಕೂ ಹೆಚ್ಚು ಬಾರಿ ಇದು ವೀಕ್ಷಣೆ ಕಂಡಿದೆ. ಅನೇಕರಿಗೆ ಸಮಂತಾ ಅವರು ಮಾದರಿ ಆಗಿದ್ದಾರೆ. ವೈಯಕ್ತಿಕ ಜೀವನದಲ್ಲಿ ಎಷ್ಟೇ ಅಡೆತಡೆಗಳು ಬಂದರೂ ಗುರಿ ಮರೆಯಬಾರದು ಎಂಬ ವಿಚಾರದಲ್ಲಿ ಸಮಂತಾ ಸ್ಫೂರ್ತಿ ಆಗಿದ್ದಾರೆ ಎಂದು ಹಲವರು ಕಮೆಂಟ್​ ಮಾಡುತ್ತಿದ್ದಾರೆ.

ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಈ ಚಿತ್ರ ರಿಲೀಸ್​ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಏಪ್ರಿಲ್​ 14ರಂದು ‘ಶಾಕುಂತಲಂ’ ತೆರೆಕಾಣಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಮಂತಾ ತೊಡಗಿಕೊಳ್ಳಲಿದ್ದಾರೆ. ಅಭಿಮಾನಿಗಳು ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾ ಕೂಡ ಇದರಲ್ಲಿ ನಟಿಸಿರುವುದು ವಿಶೇಷ.

ಇದನ್ನೂ ಓದಿ: Samantha: ವೇದಿಕೆ ಮೇಲೆ ಎಲ್ಲರ ಎದುರು ಕಣ್ಣೀರು ಹಾಕಿದ ಸಮಂತಾ ರುತ್​ ಪ್ರಭು; ವಿಡಿಯೋ ವೈರಲ್​

ವಿಜಯ್​ ದೇವರಕೊಂಡ ಜೊತೆ ‘ಖುಷಿ’ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಆ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಸಮಂತಾ ಚೇತರಿಸಿಕೊಂಡಿರುವುದರಿಂದ ‘ಖುಷಿ’ ಚಿತ್ರದ ಶೂಟಿಂಗ್​ನಲ್ಲಿ ಅವರು ಶೀಘ್ರವೇ ಭಾಗಿಯಾಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್