AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಮಂತಾಗೆ ಮಧ್ಯ ರಸ್ತೆಯಲ್ಲಿ ಕಿರುಕುಳ; ವೈರಲ್ ಆಗಿದೆ ವಿಡಿಯೋ

ಮುಂಬೈನ ಬೀದಿಯಲ್ಲಿ ಈ ಘಟನೆ ನಡೆದಿದೆ. ಸಮಂತಾ ರುತ್ ಪ್ರಭು ಅವರನ್ನು ಒಂದಷ್ಟು ಜನರು ಸುತ್ತುವರಿದಿದ್ದಾರೆ. ಪಾಪರಾಜಿಗಳ ಈ ವರ್ತನೆಗೆ ನೆಟ್ಟಿಗರು ಕೂಡ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿದವರು ಇದನ್ನು ‘ಕಿರುಕುಳ’ ಎಂದು ಹೇಳಿದ್ದಾರೆ. ಆ ಬಗ್ಗೆ ಇನ್ನಷ್ಟು ವಿವರ ಇಲ್ಲಿದೆ..

ನಟಿ ಸಮಂತಾಗೆ ಮಧ್ಯ ರಸ್ತೆಯಲ್ಲಿ ಕಿರುಕುಳ; ವೈರಲ್ ಆಗಿದೆ ವಿಡಿಯೋ
Samantha Ruth Prabhu
ಮದನ್​ ಕುಮಾರ್​
|

Updated on: Jun 17, 2025 | 5:33 PM

Share

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮುಂಬೈನಲ್ಲಿದ್ದಾರೆ. ಅಲ್ಲಿಯೇ ಅವರು ಜಿಮ್​ಗೆ ತೆರಳಿದ್ದಾರೆ. ಅವರ ಫೋಟೋ ಮತ್ತು ವಿಡಿಯೋ ಚಿತ್ರಿಸುವ ಸಲುವಾಗಿ ಪಾಪರಾಜಿಗಳು (Paparazzi) ಮುಗಿಬಿದ್ದಿದ್ದಾರೆ. ಇದರಿಂದ ಸಮಂತಾ ಅವರಿಗೆ ಕೋಪ ಬಂದಿದೆ. ಬೇಡ ಎಂದರೂ ಕೂಡ ತಮ್ಮ ಫೋಟೋ ತೆಗೆಯಲು ಬಂದ ಪಾಪರಾಜಿಗಳ ಮೇಲೆ ಸಮಂತಾ (Samantha) ಗರಂ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಪರಾಜಿಗಳ ಈ ವರ್ತನೆಯನ್ನು ಕಿರುಕುಳ ಎಂದು ನೆಟ್ಟಿಗರು ಹೇಳಿದ್ದಾರೆ. ಸೆಲೆಬ್ರಿಟಿಗಳ ಖಾಸಗಿತನಕ್ಕೆ ಗೌರವ ಕೊಡಿ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಪಾಪರಾಜಿಗಳ ಎದುರು ಸೆಲೆಬ್ರಿಟಿಗಳು ಖುಷಿಯಿಂದಲೇ ಪೋಸ್ ನೀಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಮಾತ್ರ ಕೋಪಗೊಳ್ಳುತ್ತಾರೆ. ನಟಿ ಸಮಂತಾ ಅವರು ಈಗ ಒಳ್ಳೆಯ ಮೂಡ್​ನಲ್ಲಿ ಇಲ್ಲ ಎನಿಸುತ್ತದೆ. ಆ ಕಾರಣದಿಂದಲೇ ಅವರು ಪಾಪರಾಜಿಗಳಿಗೆ ಪೋಸ್ ನೀಡಲು ಒಪ್ಪಲಿಲ್ಲ. ಸಮಂತಾ ಪರವಾಗಿ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ
Image
ಬಿಡುಗಡೆಗೆ ರೆಡಿಯಾಗಿದೆ ಸಮಂತಾ ನಿರ್ಮಾಣದ ಮೊದಲ ಸಿನಿಮಾ
Image
ಕದ್ದುಮುಚ್ಚಿ ಡೇಟಿಂಗ್ ಮಾಡೋದು ನಿಲ್ಲಿಸಿದ ಸಮಂತಾ? ಓಪನ್ ಆಗಿ ಸುತ್ತಾಟ
Image
2025ರಲ್ಲಿ ಸಮಂತಾ 2ನೇ ಮದುವೆ, ತಾಯಿ ಆಗುವ ಸೂಚನೆ ನೀಡಿದ ನಟಿ

ಸಮಂತಾ ಅವರು ಜಿಮ್​ನಲ್ಲಿ ವರ್ಕೌಟ್ ಮುಗಿಸಿಕೊಂಡು ಹೊರಗೆ ಬಂದರು. ಆದರೆ ಅವರ ಕಾರು ಇನ್ನೂ ಬಂದಿರಲಿಲ್ಲ. ಸಮಂತಾ ಅವರು ಫೋನಿನಲ್ಲಿ ಮಾತನಾಡುತ್ತಾ ರಸ್ತೆಗೆ ಬಂದೇ ಬಿಟ್ಟರು. ಅಲ್ಲಿ ಅವರಿಗೆ ಕಾರು ಕಾಣಿಸಲಿಲ್ಲ. ಅಲ್ಲದೇ ಅವರು ಯಾವುದೋ ಟೆನ್ಷನ್​ನಲ್ಲಿ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ. ಹಾಗಿದ್ದರೂ ಕೂಡ ಅವರನ್ನು ಪಾಪರಾಜಿಗಳು ಮುತ್ತಿಕೊಂಡರು. ಇದರಿಂದ ಅವರಿಗೆ ಕಿರಿಕಿರಿ ಆಯಿತು.

View this post on Instagram

A post shared by Voompla (@voompla)

‘ದಯವಿಟ್ಟು ಇದನ್ನೆಲ್ಲ ನಿಲ್ಲಿಸಿ..’ ಎಂದು ಸಮಂತಾ ಅವರು ಕೂಗಾಡಿದ್ದಾರೆ. ಆದರೂ ಸಹ ಅವರ ಮಾತಿಗೆ ಪಾಪರಾಜಿಗಳು ಬೆಲೆ ಕೊಟ್ಟಿಲ್ಲ. ನಡು ರಸ್ತೆಯಲ್ಲಿ ನಟಿಯ ಫೋಟೋ, ವಿಡಿಯೋಗಾಗಿ ಈ ರೀತಿ ನಡೆದುಕೊಂಡ ಪಾಪರಾಜಿಗಳಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ಇನ್ನು, ಸಮಂತಾ ಅವರು ಯಾವ ಕಾರಣದಿಂದ ಇಷ್ಟು ಟೆನ್ಷನ್​ನಲ್ಲಿ ಇದ್ದರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

ಇದನ್ನೂ ಓದಿ: ಮರಳುಗಾಡಲ್ಲೂ ಮನಶಾಂತಿ ಕಂಡುಕೊಂಡ ನಟಿ ಸಮಂತಾ

ಸಿನಿಮಾ, ವೆಬ್ ಸಿರೀಸ್ ಮತ್ತು ಜಾಹೀರಾತು ಕ್ಷೇತ್ರದಲ್ಲಿ ಸಮಂತಾ ರುತ್ ಪ್ರಭು ಅವರಿಗೆ ಸಖತ್ ಬೇಡಿಕೆ ಇದೆ. ದಕ್ಷಿಣ ಭಾರತ ಮತ್ತು ಬಾಲಿವುಡ್ ಎರಡರಲ್ಲೂ ಅವರು ಜನಪ್ರಿಯತೆ ಹೊಂದಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್ 2’ ಮತ್ತು ‘ಸಿಟಾಡೆಲ್: ಹನಿಬನಿ’ ವೆಬ್ ಸರಣಿಗಳಿಂದ ಹಿಂದಿ ಪ್ರೇಕ್ಷಕರನ್ನು ಸಮಂತಾ ಸೆಳೆದುಕೊಂಡಿದ್ದಾರೆ. ನಿರ್ದೇಶಕ ರಾಜ್ ನಿಧಿಮೋರು ಜೊತೆ ಅವರು ಸುತ್ತಾಡುತ್ತಿರುವುದು ಕೂಡ ಹೆಚ್ಚು ಸುದ್ದಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!