AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಶಾಕುಂತಲಂ’ ಚಿತ್ರಕ್ಕೆ ಹೀನಾಯ ಸೋಲು; ಎರಡಂಕಿ ಮುಟ್ಟಲು ವಿಫಲವಾಯ್ತು ಸಮಂತಾ ಸಿನಿಮಾ

Shaakuntalam Box Office Collection: ವೀಕೆಂಡ್​ನಲ್ಲಾದರೂ ‘ಶಾಕುಂತಲಂ’ ಸಿನಿಮಾದ ಕಲೆಕ್ಷನ್​ ಸುಧಾರಿಸಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಆಗಿದ್ದೇ ಬೇರೆ.

Samantha: ‘ಶಾಕುಂತಲಂ’ ಚಿತ್ರಕ್ಕೆ ಹೀನಾಯ ಸೋಲು; ಎರಡಂಕಿ ಮುಟ್ಟಲು ವಿಫಲವಾಯ್ತು ಸಮಂತಾ ಸಿನಿಮಾ
‘ಶಾಕುಂತಲಂ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 17, 2023 | 6:07 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರನ್ನು ಓಡುವ ಕುದುರೆ ಎಂದೇ ಪರಿಗಣಿಸಲಾಗಿತ್ತು. ಅವರ ಸಿನಿಮಾಗೆ ಬಂಡವಾಳ ಹೂಡಿದರೆ ನಿರ್ಮಾಪಕರಿಗೆ ನಷ್ಟ ಆಗುವುದಿಲ್ಲ ಎಂದು ಟಾಲಿವುಡ್​ (Tollywood) ಮಂದಿ ಊಹಿಸಿದ್ದರು. ಆದರೆ ಈಗ ಆ ಲೆಕ್ಕಾಚಾರ ತಲೆಕೆಳಗಾಗಿದೆ. ಸಮಂತಾ ಅವರು ನಟಿಸಿದ ಬಿಗ್​ ಬಜೆಟ್​ ಸಿನಿಮಾ ‘ಶಾಕುಂತಲಂ’ ಹೀನಾಯವಾಗಿ ಸೋತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಮೋಡಿ ಮಾಡಿಲ್ಲ. ಸಮಂತಾ ಅವರು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೂ ಕೂಡ ಪ್ರೇಕ್ಷಕರಿಗೆ ‘ಶಾಕುಂತಲಂ’ ಸಿನಿಮಾ (Shaakuntalam Movie) ಇಷ್ಟ ಆಗಿಲ್ಲ. ಮೊದಲ ವೀಕೆಂಡ್​ ಕಳೆದರೂ ಈ ಚಿತ್ರಕ್ಕೆ ಎರಡಂಕಿ ಮಟ್ಟಲು ಸಾಧ್ಯವಾಗಿಲ್ಲ. ಅಂದರೆ 3 ದಿನಕ್ಕೆ ಬಾಕ್ಸ್​ ಆಫೀಸ್​ನಲ್ಲಿ 10 ಕೋಟಿ ರೂಪಾಯಿ ಕೂಡ ಕಲೆಕ್ಷನ್ ಆಗಿಲ್ಲ!

ಸ್ಟಾರ್​ ಕಲಾವಿದರು ಅಭಿನಯಿಸಿದ ಬಿಗ್​ ಬಜೆಟ್​ ಸಿನಿಮಾಗಳು ಎಷ್ಟೇ ಕೆಟ್ಟ ವಿಮರ್ಶೆ ಪಡೆದುಕೊಂಡರೂ ಕೂಡ ಮಿನಿಮಮ್​​ ಬಿಸ್ನೆಸ್​ ಮಾಡುತ್ತವೆ. ಆದರೆ ‘ಶಾಕುಂತಲಂ’ ಚಿತ್ರಕ್ಕೆ ಅದು ಸಾಧ್ಯವಾಗಿಲ್ಲ. ಏಪ್ರಿಲ್​ 14ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್​ ಆಯಿತು. ಮೊದಲ ದಿನ ತೆಲುಗು, ಕನ್ನಡ, ತಮಿಳು ಮುಂತಾದ ಭಾಷೆಗಳಿಂದ ಈ ಸಿನಿಮಾಗೆ ಆದ ಒಟ್ಟು ಕಲೆಕ್ಷನ್​ ಅಂದಾಜು 5 ಕೋಟಿ ರೂಪಾಯಿ ಮಾತ್ರ.

Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ

ಇದನ್ನೂ ಓದಿ
Image
Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ
Image
Samantha: ಶಾಕುಂತಲಂ ಸಿನಿಮಾ ಚಿತ್ರೀಕರಣದ ಐದು ಕೆಟ್ಟ ಅನುಭವಗಳ ನೆನೆದ ಸಮಂತಾ
Image
ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ
Image
Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

ವೀಕೆಂಡ್​ನಲ್ಲಿ ‘ಶಾಕುಂತಲಂ’ ಸಿನಿಮಾದ ಕಲೆಕ್ಷನ್​ ಸುಧಾರಿಸಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಶನಿವಾರ (ಏಪ್ರಿಲ್​ 15) ಈ ಚಿತ್ರಕ್ಕೆ ಕೇವಲ 2 ಕೋಟಿ ರೂಪಾಯಿ ಕಮಾಯಿ ಆಯಿತು. ಭಾನುವಾರವಾದರೂ (ಏಪ್ರಿಲ್​ 16) ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ಭರವಸೆ ಇತ್ತು. ಆದರೆ ಅಂದು ಕಲೆಕ್ಷನ್​ ಇನ್ನಷ್ಟು ಕುಸಿಯಿತು. ಭಾನುವಾರ 1.5 ಕೋಟಿ ರೂಪಾಯಿ ಗಳಿಸುವಷ್ಟರಲ್ಲಿ ‘ಶಾಕುಂತಲಂ’ ಚಿತ್ರ ಸುಸ್ತು ಹೊಡೆಯಿತು.

ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ

‘ಶಾಕುಂತಲಂ’ ಸಿನಿಮಾದಲ್ಲಿ ಪೌರಾಣಿಕ ಕಥಾಹಂದರ ಇದೆ. ಶಕುಂತಲೆಯಾಗಿ ಸಮಂತಾ ರುತ್​ ಪ್ರಭು ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್​ ಅವರ ಪುತ್ರಿ ಅಲ್ಲು ಅರ್ಹಾ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾಳೆ. ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಗ್ರಾಫಿಕ್ಸ್​ ಮೂಲಕ ಕಟ್ಟಿಕೊಟ್ಟ ದೃಶ್ಯಗಳು ಚೆನ್ನಾಗಿವೆ. ಮೇಕಿಂಗ್​ ಗುಣಮಟ್ಟ ಕೂಡ ಮೆಚ್ಚುಗೆ ಗಳಿಸಿದೆ. ಇಷ್ಟೆಲ್ಲ ಇದ್ದರೂ ಸಹ ಜನರಿಗೆ ಈ ಸಿನಿಮಾ ಇಷ್ಟ ಆಗಿಲ್ಲ.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

ಸದ್ಯ ಸಮಂತಾ ಕೈಯಲ್ಲಿ ಹಲವು ಸಿನಿಮಾಗಳಿವೆ. ‘ಖುಷಿ’ ಚಿತ್ರದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ನಟಿಸುತ್ತಿದ್ದಾರೆ. ‘ಸಿಟಾಡೆಲ್​’ ಇಂಡಿಯನ್​ ವರ್ಷನ್​ನಲ್ಲೂ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ಶಾಕುಂತಲಂ’ ಸೋತಿರುವುದರಿಂದ ಅವರ ಡಿಮ್ಯಾಂಡ್​ ಕೊಂಚ ಕುಸಿಯಲಿರುವುದಂತೂ ನಿಜ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ