AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್' ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಸಮಂತಾಗೆ ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ
ರಾಜೇಶ್ ದುಗ್ಗುಮನೆ
|

Updated on:Dec 11, 2023 | 10:52 AM

Share

ಟಾಲಿವುಡ್​ನ ಟಾಪ್ ಹೀರೋಯಿನ್ ಸಮಂತಾ ಅವರು ಕೆಲವು ಸಮಯದಿಂದ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ‘ಖುಷಿ’ ಚಿತ್ರದ (Kushi Movie) ನಂತರ ಅವರು ಸಂಪೂರ್ಣವಾಗಿ ತಮ್ಮ ಆರೋಗ್ಯದತ್ತ ಗಮನ ಹರಿಸಿದರು. ಮಯೋಸೈಟಿಸ್ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಕೆಲ ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ ಪಡೆದರು. ನಂತರ ಅವರು ಭೂತಾನ್‌ಗೂ ತೆರಳಿದ್ದರು. ಇತ್ತೀಚೆಗಷ್ಟೇ ಭಾರತಕ್ಕೆ ಮರಳಿರುವ ಸಮಂತಾ ಈಗ ಸಿನಿಮಾ ನಿರ್ಮಾಣದತ್ತ ಗಮನ ಹರಿಸುತ್ತಿದ್ದಾರೆ. ಈ ಬಗ್ಗೆ ಅವರ ಕಡೆಯಿಂದಲೇ ಅಧಿಕೃತ ಘೋಷಣೆ ಆಗಿದೆ.

ಇಲ್ಲಿಯವರೆಗೂ ನಾಯಕಿಯಾಗಿ ಪ್ರೇಕ್ಷಕರನ್ನು ರಂಜಿಸಿದ್ದ ಸಮಂತಾ ಈಗ ನಿರ್ಮಾಪಕಿಯಾಗಿದ್ದಾರೆ. ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಿಸಿದ್ದಾರೆ. ನಿರ್ಮಾಣ ಸಂಸ್ಥೆ ಹೆಸರನ್ನು ತಿಳಿಸಲು ವಿಶೇಷ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್’ ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಜನಪ್ರಿಯ ಇಂಗ್ಲಿಷ್ ಪಾಪ್ ಹಾಡು ‘ಬ್ರೌನ್ ಗರ್ಲ್ ಇನ್ ದಿ ರಿಂಗ್’ ಹಾಡಿನ ಸಾಹಿತ್ಯಕ್ಕೂ ‘ತ್ರಲಾಲಾ’ ಪದ ಬರುತ್ತದೆ. ಈಗ ಅದನ್ನೇ ಅವರು ನಿರ್ಮಾಣ ಸಂಸ್ಥೆಗೆ ಹೆಸರು ಇಟ್ಟಿದ್ದಾರೆ. ಹೊಸ ಪ್ರತಿಭೆಗಳು ಮತ್ತು ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ತ್ರಲಾಲ ಬ್ಯಾನರ್ ಸಹಕಾರಿ ಆಗಲಿದೆ.

ಇದನ್ನೂ ಓದಿ: ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

ಸಮಂತಾ ಕೆಲ ವರ್ಷಗಳಿಂದ ಸಾಕಷ್ಟು ನೋವು ತಿಂದಿದ್ದಾರೆ. ನಾಗ ಚೈತನ್ಯ ಅವರಿಂದ ಸಮಂತಾ ವಿಚ್ಛೇದನ ಪಡೆದರು. ಇದಾದ ಬಳಿಕ ಮಯೋಸೈಟಿಸ್ ಸಮಸ್ಯೆ ಕಾಣಿಸಿತು. ಸಮಂತಾ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದರು. ವರುಣ್ ಧವನ್ ಜೊತೆ ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಈ ಸರಣಿಯು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:50 am, Mon, 11 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು