ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್' ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಸಮಂತಾಗೆ ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ
Follow us
|

Updated on:Dec 11, 2023 | 10:52 AM

ಟಾಲಿವುಡ್​ನ ಟಾಪ್ ಹೀರೋಯಿನ್ ಸಮಂತಾ ಅವರು ಕೆಲವು ಸಮಯದಿಂದ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ‘ಖುಷಿ’ ಚಿತ್ರದ (Kushi Movie) ನಂತರ ಅವರು ಸಂಪೂರ್ಣವಾಗಿ ತಮ್ಮ ಆರೋಗ್ಯದತ್ತ ಗಮನ ಹರಿಸಿದರು. ಮಯೋಸೈಟಿಸ್ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಕೆಲ ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ ಪಡೆದರು. ನಂತರ ಅವರು ಭೂತಾನ್‌ಗೂ ತೆರಳಿದ್ದರು. ಇತ್ತೀಚೆಗಷ್ಟೇ ಭಾರತಕ್ಕೆ ಮರಳಿರುವ ಸಮಂತಾ ಈಗ ಸಿನಿಮಾ ನಿರ್ಮಾಣದತ್ತ ಗಮನ ಹರಿಸುತ್ತಿದ್ದಾರೆ. ಈ ಬಗ್ಗೆ ಅವರ ಕಡೆಯಿಂದಲೇ ಅಧಿಕೃತ ಘೋಷಣೆ ಆಗಿದೆ.

ಇಲ್ಲಿಯವರೆಗೂ ನಾಯಕಿಯಾಗಿ ಪ್ರೇಕ್ಷಕರನ್ನು ರಂಜಿಸಿದ್ದ ಸಮಂತಾ ಈಗ ನಿರ್ಮಾಪಕಿಯಾಗಿದ್ದಾರೆ. ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಿಸಿದ್ದಾರೆ. ನಿರ್ಮಾಣ ಸಂಸ್ಥೆ ಹೆಸರನ್ನು ತಿಳಿಸಲು ವಿಶೇಷ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್’ ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಜನಪ್ರಿಯ ಇಂಗ್ಲಿಷ್ ಪಾಪ್ ಹಾಡು ‘ಬ್ರೌನ್ ಗರ್ಲ್ ಇನ್ ದಿ ರಿಂಗ್’ ಹಾಡಿನ ಸಾಹಿತ್ಯಕ್ಕೂ ‘ತ್ರಲಾಲಾ’ ಪದ ಬರುತ್ತದೆ. ಈಗ ಅದನ್ನೇ ಅವರು ನಿರ್ಮಾಣ ಸಂಸ್ಥೆಗೆ ಹೆಸರು ಇಟ್ಟಿದ್ದಾರೆ. ಹೊಸ ಪ್ರತಿಭೆಗಳು ಮತ್ತು ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ತ್ರಲಾಲ ಬ್ಯಾನರ್ ಸಹಕಾರಿ ಆಗಲಿದೆ.

ಇದನ್ನೂ ಓದಿ: ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

ಸಮಂತಾ ಕೆಲ ವರ್ಷಗಳಿಂದ ಸಾಕಷ್ಟು ನೋವು ತಿಂದಿದ್ದಾರೆ. ನಾಗ ಚೈತನ್ಯ ಅವರಿಂದ ಸಮಂತಾ ವಿಚ್ಛೇದನ ಪಡೆದರು. ಇದಾದ ಬಳಿಕ ಮಯೋಸೈಟಿಸ್ ಸಮಸ್ಯೆ ಕಾಣಿಸಿತು. ಸಮಂತಾ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದರು. ವರುಣ್ ಧವನ್ ಜೊತೆ ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಈ ಸರಣಿಯು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:50 am, Mon, 11 December 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ