AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ವಿಚ್ಛೆದನದ ಬಳಿಕ ಸಂದರ್ಶನವೊಂದರಲ್ಲಿ ಸಮಂತಾ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ನಾಗಚೈತನ್ಯರಿಂದ ಬೇರೆಯಾದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು
ಸಮಂತಾ
TV9 Web
| Updated By: Pavitra Bhat Jigalemane|

Updated on: Dec 07, 2021 | 12:20 PM

Share

ತೆಲುಗು ಚಿತ್ರರಂಗದಲ್ಲಿ ತಮ್ಮ ನಟನೆಯಿಂದ ಗುರುತಿಸಿಕೊಂಡಿರುವ ಸಮಂತಾ ರುತ್ ಪ್ರಭು ಇತ್ತೀಚೆಗೆ ಪತಿ ನಾಗಚೈತನ್ಯರಿಂದ ವಿಚ್ಛೇದನ ಪಡೆದಿದ್ದಾರೆ. ವಿಚ್ಛೆದನದ ಬಳಿಕ ಸಂದರ್ಶನವೊಂದರಲ್ಲಿ ಸಮಂತಾ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ನಾಗಚೈತನ್ಯರಿಂದ ಬೇರೆಯಾದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಇದೇ ಮೊದಲ ಬಾರಿಗೆ ತಮ್ಮ ವಿಚ್ಛೇದನದ ನಂತರದ ಬದುಕಿನ ಕುರಿತು ಸಮಂತಾ ಹೇಳಿಕೊಂಡಿದ್ದಾರೆ. ಅಕ್ಟೋಬರ್ 2ರಂದು ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ 4 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ತಮ್ಮ ವಿಚ್ಛೇದನದ ಕುರಿತು ಸ್ಪಷ್ಟನೆ ನೀಡಿದ್ದರು.

ವಿಚ್ಚೇದನದ ಕುರಿತು ಹೇಳಿಕೆ ನೀಡುವ ಮುನ್ನ ಸಮಂತಾ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್​ನಲ್ಲಿ ಸಮಂತಾ ಅಕ್ಕಿನೇನಿ ಎಂಬ ಹೆಸರಿಗೆ ಕೋಕ್​ ನೀಡಿ ಸಮಂತಾ ಎಂದಷ್ಟೇ ಇರಿಸಿಕೊಂಡಿದ್ದರು. ಇದರಿಂದ ಸಮಂತಾ ಹಾಗೂ ನಾಗಚೈತನ್ಯರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ವದಂತಿಗಳು ಹರಿದಾಡುತಿದ್ದ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ವಿಚ್ಚೇದನದ ಕುರಿತು ಘೋಷಿಸಿ ಅಭಿಮಾನಿಗಳಿಗೆ ಶಾಕ್​ ನೀಡಿದ್ದರು.

ಇದೀಗ ಫಿಲ್ಮ್​ ಫೇರ್​ ಸಂದರ್ಶನವೊಂದರಲ್ಲಿ ಸಮಂತಾ ನಾಗಚೈತನ್ಯರೊಂದಿಗೆ ಬೇರೆಯಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು,ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕು. ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ ಆದರೆ ನನ್ನನ್ನು ನಾನು ಸಮರ್ಥವಾಗಿ ನಿಭಾಯಿಸಿಕೊಂಡಿದ್ದೇನೆ. ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಭಾವಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಸಮಂತಾ ವಿಚ್ಛೇದನದ ಬಳಿಕ ಮತ್ತೆ ತಮ್ಮ ನಟನಾ ಪ್ರಪಂಚಕ್ಕೆ ಮರಳಿದ್ದಾರೆ. ಡಿ.6ರಂದು ಸಮಂತಾ ತಮ್ಮ ಹೊಸ ಚಿತ್ರ ಯಶೋದಾ ಚಿತ್ರೀಕರಣವನ್ನು ಪುಣೆಯಲ್ಲಿ ಆರಂಭಿಸಿದ್ದಾರೆ. ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಲಿದ್ದು, ತೆಲುಗು, ಮಲಯಾಳಂ, ತಮಿಳು, ಕನ್ನಡ, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಮಂತಾ ಲೇಖಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೊಸ ಚಿತ್ರದ ಪೋಸ್ಟರ್​ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು,  ಹೊಸ ಚಿತ್ರಕ್ಕೆ  ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ತಾನಕ್ಕೆ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ

ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ