AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸ್​ಗೆ ದುಬಾರಿ ಗಿಫ್ಟ್ ಕೊಟ್ಟು ವೇಸ್ಟ್ ಆಯ್ತು ಎಂದು ಓಪನ್​ ಆಗಿ ಹೇಳಿದ ಸಮಂತಾ

ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ಎಕ್ಸ್​ಗೆ ದುಬಾರಿ ಗಿಫ್ಟ್ ಕೊಟ್ಟು ವೇಸ್ಟ್ ಆಯ್ತು ಎಂದು ಓಪನ್​ ಆಗಿ ಹೇಳಿದ ಸಮಂತಾ
ಸಮಂತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 07, 2024 | 11:43 AM

Share

ಸಮಂತಾ ಅವರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇದ್ದಾರೆ. ಅವರ ಮಾಜಿ ಪತಿ ನಾಗ ಚೈತನ್ಯ ಇತ್ತೀಚೆಗೆ ಮದುವೆ ಆದರು. ನಟಿ ಶೋಭಿತಾ ಧುಲಿಪಾಲ್ ಜೊತೆ ಅವರ ವಿವಾಹ ಆಗಿದೆ. ಆದರೆ, ಈ ವಿಚಾರದಲ್ಲಿ ಸಮಂತಾ ಅವರು ಯಾವುದೇ ಕಮೆಂಟ್ ಮಾಡಿಲ್ಲ. ಈ ಬಗ್ಗೆ ಅವರು ಮಾತನಾಡುವುದಿಲ್ಲ ಅನ್ನೋದು ಅನೇಕರಿಗೆ ತಿಳಿದಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವೈರಲ್ ಆಗಿದೆ.

ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಕೇಳಲಾಯಿತು. ,‘ನೀವು ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಿ ಖರ್ಚು ಮಾಡಿದ ಹಣ ಎಂದರೆ ಯಾವುದು’ ಎಂದು ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಸಮಂತಾ ಅವರು, ‘ನನ್ನ ಎಕ್ಸ್​ಗೆ ನೀಡಿದ ದುಬಾರಿ ಗಿಫ್ಟ್’ ಎಂದಿದ್ದಾರೆ. ಇದಕ್ಕೆ ವರುಣ್ ಧವನ್ ನೇರ ಪ್ರಶ್ನೆ ಮಾಡಿದ್ದಾರೆ. ‘ಯಾವ ಗಿಫ್ಟ್ ಮತ್ತು ಎಷ್ಟು’ ಎಂದು ಕೇಳಿದ್ದಾರೆ. ಆದರೆ, ಇದಕ್ಕೆ ಅವರು ಉತ್ತರಿಸಿಲ್ಲ. ‘ಸ್ವಲ್ಪ ಹಣ. ಮುಂದಕ್ಕೆ ಹೋಗೋಣ’ ಎಂದಿದ್ದಾರೆ ಅವರು.

ನಾಗ ಚೈತನ್ಯ ಬಳಿ ಹಲವು ದುಬಾರಿ ಕಾರುಗಳು ಇವೆ. ಇದರಲ್ಲಿ ಅವರು ಹೊರಗೆ ಸುತ್ತಾಟ ಮಾಡುತ್ತಾರೆ. ಈ ಪೈಕಿ ಒಂದು ಕಾರನ್ನು ನಾಗ ಚೈತನ್ಯಗೆ ಸಮಂತಾ ನೀಡಿದ್ದರೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಇದು ನಿಜವೇ ಆದಲ್ಲಿ ಅದರ ಬೆಲೆ ಕೋಟಿ ರೂಪಾಯಿಗಳಲ್ಲಿ ಆಗಲಿದೆ.

View this post on Instagram

A post shared by GlamBlitz (@glamblitz_)

ಇದನ್ನೂ ಓದಿ: ಸಮಂತಾ ಎದುರು ಶೋಭಿತಾ ಜನಪ್ರಿಯತೆಯೇ ಹೆಚ್ಚು; ನಾಗ ಚೈತನ್ಯ ಪತ್ನಿಗೆ 5ನೇ ಸ್ಥಾನ

ಸಮಂತಾ ಹಾಗೂ ನಾಗ ಚೈತನ್ಯ ಅವರು ನಾಲ್ಕು ವರ್ಷಗಳ ಕಾಲ ಸಂಸಾರ ನಡೆಸಿದ್ದರು. ಈ ವೇಳೆ ಪರಸ್ಪರ ಗಿಫ್ಟ್​ಗಳನ್ನು ಇವರು ಕೊಟ್ಟುಕೊಂಡಿದ್ದಾರೆ. ಈಗ ನಾಗ ಚೈತನ್ಯ ಈ ಸಂಬಂಧದಿಂದ ಹೊರಕ್ಕೆ ಬಂದಿದ್ದಾರೆ. ಸಮಂತಾ ಅವರ ನಗು ಮಾಯವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Sat, 7 December 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್