AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮ್ಮೂಟಿ ಜೊತೆ ಸಮಂತಾ ಸಿನಿಮಾ; ಆ್ಯಕ್ಷನ್ ಚಿತ್ರ ಒಪ್ಪಿಕೊಂಡ ನಟಿ

ಜೂನ್ 15ರಿಂದ ಚೆನ್ನೈನಲ್ಲಿ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ. ದೊಡ್ಡ ಬ್ರೇಕ್ ಬಳಿಕ ಸಮಂತಾ ಅವರು ಕ್ಯಾಮೆರಾ ಎದುರಿಸುತ್ತಿದ್ದಾರೆ. ಮೈಯೋಸಿಟಿಸ್ ಕಾಯಿಲೆ ಕಾಣಿಸಿಕೊಂಡ ಬಳಿಕ ಸಮಂತಾ ಅದರಿಂದ ರಿಕವರಿ ಆಗುವುದರತ್ತವೇ ಗಮನ ನೀಡಿದರು. ಈಗ ಅವರು ಹೊಸ ಸಿನಿಮಾ ಘೋಷಿಸಿದ್ದಾರೆ.

ಮಮ್ಮೂಟಿ ಜೊತೆ ಸಮಂತಾ ಸಿನಿಮಾ; ಆ್ಯಕ್ಷನ್ ಚಿತ್ರ ಒಪ್ಪಿಕೊಂಡ ನಟಿ
ಸಮಂತಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jun 14, 2024 | 8:00 AM

Share

ನಟಿ ಸಮಂತಾ (Samantha) ಅವರು ಮೈಯೋಸಿಟಿಸ್ ಕಾಯಿಲೆಯಿಂದ ಬಳಲಿದ್ದರು. ಹೀಗಾಗಿ ಅವರು ಹೊಸ ಸಿನಿಮಾ ಒಪ್ಪಿಕೊಳ್ಳೋ ಸಾಹಸ ಮಾಡಿರಲಿಲ್ಲ. ಒಪ್ಪಿಕೊಂಡ ಚಿತ್ರಗಳ ಶೂಟಿಂಗ್​ನ ಅವರು ಪೂರ್ಣಗೊಳಿಸಿದ್ದರು. ಆ ಬಳಿಕ ದೇಶ-ವಿದೇಶ ಸುತ್ತಿದ್ದರು. ಈಗ ಸಮಂತಾ ‘ಸಿಟಾಡೆಲ್: ಹನಿ ಬಬ್ಬಿ’ ಸೀರಿಸ್​ನ ರಿಲೀಸ್ ನಿರೀಕ್ಷೆಯಲ್ಲಿದ್ದಾರೆ. ಅಮೆರಿಕ ‘ಸಿಟಾಡೆಲ್’ ಸೀರಿಸ್​ನ ಭಾರತದ ವರ್ಷನ್ ಇದು. ಈಗ ಸಮಂತಾ ಅವರು ಕಮರ್ಷಿಯಲ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಮಲಯಾಳಂ ಸೂಪರ್​ಸ್ಟಾರ್ ಮಮ್ಮೂಟಿ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಮಂತಾ ಅವರು ನಟಿಸುತ್ತಿದ್ದಾರೆ. ಇದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದೆ. ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಮಂತಾಗೆ ದಕ್ಷಿಣದಲ್ಲಿ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ, ಹಲವು ಭಾಷೆಯಲ್ಲಿ ಸಿನಿಮಾ ಮೂಡಿ ಬರೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜೂನ್ 15ರಿಂದ ಚೆನ್ನೈನಲ್ಲಿ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ. ದೊಡ್ಡ ಬ್ರೇಕ್ ಬಳಿಕ ಸಮಂತಾ ಅವರು ಕ್ಯಾಮೆರಾ ಎದುರಿಸುತ್ತಿದ್ದಾರೆ. ಮೈಯೋಸಿಟಿಸ್ ಕಾಯಿಲೆ ಕಾಣಿಸಿಕೊಂಡ ಬಳಿಕ ಸಮಂತಾ ಅದರಿಂದ ರಿಕವರಿ ಆಗುವುದರತ್ತವೇ ಗಮನ ನೀಡಿದರು. ಇದು ಅಪರೂಪದ ಕಾಯಿಲೆ ಆಗಿದ್ದು, ಎಲ್ಲಿಯೂ ಹೆಚ್ಚು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ, ಅದಕ್ಕೆ ಚಿಕಿತ್ಸೆಯೂ ಕಷ್ಟ.

ಸಿನಿಮಾ ನಿರ್ಮಾಣದತ್ತವೂ ಸಮಂತಾ ಗಮನ ಹರಿಸುತ್ತಿದ್ದಾರೆ. ಅವರು ‘ಬಂಗಾರಂ’ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ನಿರ್ಮಾಪಕಿ ಆಗಿ ಈ ಸಿನಿಮಾ ಪ್ರಾಮುಖ್ಯತೆ ಪಡೆದದಿದೆ. ಸಮಂತಾ ಅವರು ಸೋಶಿಯಲ್ ಮೀಡಿಯಾ ಮೂಲಕ, ಯೂಟ್ಯೂಬ್ ಮೂಲಕ ತಮ್ಮ ಆರೋಗ್ಯದ ಬಗ್ಗೆ, ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತಾರೆ. ಅವರು ತಮ್ಮದೇ ಆದ ಬಟ್ಟೆ ಬ್ರ್ಯಾಂಡ್ ಹೊಂದಿದ್ದು ಅದರ ಪ್ರಚಾರ ಮಾಡುತ್ತಾರೆ.

ಇದನ್ನೂ ಓದಿ: ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ; ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ಹೀರೋ

ಸಮಂತಾ ಅವರು ಸಖತ್ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಫೋಟೋಗಳನ್ನು ಫ್ಯಾನ್ಸ್ ಭರ್ಜರಿ ಇಷ್ಟ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!