AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಆರೋಗ್ಯ ಹದಗೆಟ್ಟ ಬಳಿಕ ಮತ್ತೆ ದೇವರ ಮೊರೆಹೋದ ನಟಿ ಸಮಂತಾ ರುತ್​ ಪ್ರಭು

Samantha Ruth Prabhu: Myositis ಕಾಯಿಲೆಯಿಂದ ಸಮಂತಾ ಅವರು ಅನುಭವಿಸಿದ ಸಮಸ್ಯೆಗಳು ಒಂದೆರಡಲ್ಲ. ಮತ್ತೆ ಅವರಿಗೆ ಆ ಸಮಸ್ಯೆ ಮರುಕಳಿಸಿದೆ.

Samantha: ಆರೋಗ್ಯ ಹದಗೆಟ್ಟ ಬಳಿಕ ಮತ್ತೆ ದೇವರ ಮೊರೆಹೋದ ನಟಿ ಸಮಂತಾ ರುತ್​ ಪ್ರಭು
ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Jul 16, 2023 | 7:48 AM

Share

ಖ್ಯಾತ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಅನಾರೋಗ್ಯ ಕಾಡುತ್ತಲೇ ಇದೆ. ಕೆಲವು ತಿಂಗಳ ಕಾಲ ಕೊಂಚ ಚೇತರಿಸಿಕೊಂಡು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದ ಅವರು ಈಗ ಮತ್ತೆ ಸಮಸ್ಯೆ ಎದುರಿಸುತ್ತಿದ್ದಾರೆ. Myositis ಕಾಯಿಲೆಗೆ ಸಮಂತಾ (Samantha) ಅವರು ಹೆಚ್ಚಿನ ಚಿಕಿತ್ಸೆ ಪಡೆಯುವುದು ಅನಿವಾರ್ಯ ಆಗಿದೆ. ಹಾಗಾಗಿ ಅವರು ಶೀಘ್ರದಲೇ ಅಮೆರಿಕಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಹಿಂದೆ ಕೂಡ ಅವರು Myositis ಕಾಯಿಲೆ ಗುಣವಾಗದೇ ಇದ್ದಾಗ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈಗ ಅವರು ವೆಲ್ಲೂರಿನ ಶ್ರೀ ಲಕ್ಷ್ಮೀ ನಾರಾಯಣಿ ಗೋಲ್ಡನ್​ ಟೆಂಪಲ್​ಗೆ (Sri Lakshmi Narayani Golden Temple) ತೆರಳಿದ್ದಾರೆ. ಅದರ ಬಗ್ಗೆ ಸ್ವತಃ ಸಮಂತಾ ಅಪ್​ಡೇಟ್​ ನೀಡಿದ್ದಾರೆ.

ಸ್ನೇಹಿತರ ಜೊತೆಗೂಡಿ ಸಮಂತಾ ಅವರು ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಅವರು ತಮ್ಮ ಇಷ್ಟದ ಹಾಡುಗಳನ್ನು ಕೇಳುತ್ತಾ ಎಂಜಾಯ್​ ಮಾಡಿದ್ದಾರೆ. ಪ್ರಯಾಣದ ಒಂದಷ್ಟು ವಿವರಗಳ ಬಗ್ಗೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಮಂತಾ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ಶೂಟಿಂಗ್ ಮುಗಿಸಿ ಮರಳಿದ ಸಮಂತಾ: ಕೈಯಲ್ಲಿರುವ ಬ್ಯಾಗ್ ಬೆಲೆ ಎಷ್ಟು ಗೊತ್ತೆ?

Myositis ಕಾಯಿಲೆಯಿಂದ ಸಮಂತಾ ಅವರು ಅನುಭವಿಸಿದ ಸಮಸ್ಯೆಗಳು ಒಂದೆರಡಲ್ಲ. ಅದರಿಂದ ಚೇತರಿಸಿಕೊಳ್ಳಲು ಅವರಿಗೆ ಹಲವು ತಿಂಗಳುಗಳು ಬೇಕಾದವು. ಆದರೆ ಮತ್ತೆ ಅವರಿಗೆ ಆ ಸಮಸ್ಯೆ ಮರುಕಳಿಸಿದೆ. ಹಾಗಾಗಿ ಪುನಃ ಬ್ರೇಕ್​ ತೆಗೆದುಕೊಂಡು ಹೆಚ್ಚಿನ ಚಿಕಿತ್ಸೆ ಪಡೆಯಲು ಅವರು ನಿರ್ಧರಿಸಿದ್ದಾರೆ. ಚಿತ್ರರಂಗದಿಂದ ಅವರು ಹಲವು ತಿಂಗಳ ಕಾಲ ಬ್ರೇಕ್​ ಪಡೆಯಲಿದ್ದಾರೆ ಎಂಬುದು ಇತ್ತೀಚೆಗೆ ಖಚಿತವಾಯಿತು. ಸಮಂತಾ ಅವರು ಸದ್ಯಕ್ಕೆ ಯಾವುದೇ ಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು

ವಿಜಯ್​ ದೇವರಕೊಂಡ ಜೊತೆ ‘ಖುಷಿ’ ಸಿನಿಮಾದಲ್ಲಿ ಸಮಂತಾ ಅವರು ನಟಿಸಿದ್ದಾರೆ. ಅಲ್ಲದೇ, ‘ಸಿಟಾಡೆಲ್​’ ವೆಬ್​ ಸಿರೀಸ್​ನ ಇಂಡಿಯನ್​ ವರ್ಷನ್​ನಲ್ಲೂ ಅವರು ಅಭಿನಯಿಸಿದ್ದಾರೆ. ಈ ಚಿತ್ರಗಳ ಕೆಲಸಗಳ ಜೊತೆ ಕೆಲವು ಜಾಹೀರಾತುಗಳ ಚಿತ್ರೀಕರಣವನ್ನೂ ಅವರು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಲು ಸಜ್ಜಾಗಿದ್ದಾರೆ. ಸಿನಿಮಾ ಮತ್ತು ವೆಬ್​ ಸಿರೀಸ್​ನ ಪ್ರಚಾರ ಕಾರ್ಯದಲ್ಲಿ ಸಮಂತಾ ಭಾಗಿ ಆಗುವುದು ಬಹುತೇಕ ಅನುಮಾನ ಎನ್ನಲಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ