AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಆರೋಗ್ಯ ಹದಗೆಟ್ಟ ಬಳಿಕ ಮತ್ತೆ ದೇವರ ಮೊರೆಹೋದ ನಟಿ ಸಮಂತಾ ರುತ್​ ಪ್ರಭು

Samantha Ruth Prabhu: Myositis ಕಾಯಿಲೆಯಿಂದ ಸಮಂತಾ ಅವರು ಅನುಭವಿಸಿದ ಸಮಸ್ಯೆಗಳು ಒಂದೆರಡಲ್ಲ. ಮತ್ತೆ ಅವರಿಗೆ ಆ ಸಮಸ್ಯೆ ಮರುಕಳಿಸಿದೆ.

Samantha: ಆರೋಗ್ಯ ಹದಗೆಟ್ಟ ಬಳಿಕ ಮತ್ತೆ ದೇವರ ಮೊರೆಹೋದ ನಟಿ ಸಮಂತಾ ರುತ್​ ಪ್ರಭು
ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Jul 16, 2023 | 7:48 AM

Share

ಖ್ಯಾತ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಅನಾರೋಗ್ಯ ಕಾಡುತ್ತಲೇ ಇದೆ. ಕೆಲವು ತಿಂಗಳ ಕಾಲ ಕೊಂಚ ಚೇತರಿಸಿಕೊಂಡು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದ ಅವರು ಈಗ ಮತ್ತೆ ಸಮಸ್ಯೆ ಎದುರಿಸುತ್ತಿದ್ದಾರೆ. Myositis ಕಾಯಿಲೆಗೆ ಸಮಂತಾ (Samantha) ಅವರು ಹೆಚ್ಚಿನ ಚಿಕಿತ್ಸೆ ಪಡೆಯುವುದು ಅನಿವಾರ್ಯ ಆಗಿದೆ. ಹಾಗಾಗಿ ಅವರು ಶೀಘ್ರದಲೇ ಅಮೆರಿಕಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಹಿಂದೆ ಕೂಡ ಅವರು Myositis ಕಾಯಿಲೆ ಗುಣವಾಗದೇ ಇದ್ದಾಗ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈಗ ಅವರು ವೆಲ್ಲೂರಿನ ಶ್ರೀ ಲಕ್ಷ್ಮೀ ನಾರಾಯಣಿ ಗೋಲ್ಡನ್​ ಟೆಂಪಲ್​ಗೆ (Sri Lakshmi Narayani Golden Temple) ತೆರಳಿದ್ದಾರೆ. ಅದರ ಬಗ್ಗೆ ಸ್ವತಃ ಸಮಂತಾ ಅಪ್​ಡೇಟ್​ ನೀಡಿದ್ದಾರೆ.

ಸ್ನೇಹಿತರ ಜೊತೆಗೂಡಿ ಸಮಂತಾ ಅವರು ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಅವರು ತಮ್ಮ ಇಷ್ಟದ ಹಾಡುಗಳನ್ನು ಕೇಳುತ್ತಾ ಎಂಜಾಯ್​ ಮಾಡಿದ್ದಾರೆ. ಪ್ರಯಾಣದ ಒಂದಷ್ಟು ವಿವರಗಳ ಬಗ್ಗೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಮಂತಾ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ಶೂಟಿಂಗ್ ಮುಗಿಸಿ ಮರಳಿದ ಸಮಂತಾ: ಕೈಯಲ್ಲಿರುವ ಬ್ಯಾಗ್ ಬೆಲೆ ಎಷ್ಟು ಗೊತ್ತೆ?

Myositis ಕಾಯಿಲೆಯಿಂದ ಸಮಂತಾ ಅವರು ಅನುಭವಿಸಿದ ಸಮಸ್ಯೆಗಳು ಒಂದೆರಡಲ್ಲ. ಅದರಿಂದ ಚೇತರಿಸಿಕೊಳ್ಳಲು ಅವರಿಗೆ ಹಲವು ತಿಂಗಳುಗಳು ಬೇಕಾದವು. ಆದರೆ ಮತ್ತೆ ಅವರಿಗೆ ಆ ಸಮಸ್ಯೆ ಮರುಕಳಿಸಿದೆ. ಹಾಗಾಗಿ ಪುನಃ ಬ್ರೇಕ್​ ತೆಗೆದುಕೊಂಡು ಹೆಚ್ಚಿನ ಚಿಕಿತ್ಸೆ ಪಡೆಯಲು ಅವರು ನಿರ್ಧರಿಸಿದ್ದಾರೆ. ಚಿತ್ರರಂಗದಿಂದ ಅವರು ಹಲವು ತಿಂಗಳ ಕಾಲ ಬ್ರೇಕ್​ ಪಡೆಯಲಿದ್ದಾರೆ ಎಂಬುದು ಇತ್ತೀಚೆಗೆ ಖಚಿತವಾಯಿತು. ಸಮಂತಾ ಅವರು ಸದ್ಯಕ್ಕೆ ಯಾವುದೇ ಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು

ವಿಜಯ್​ ದೇವರಕೊಂಡ ಜೊತೆ ‘ಖುಷಿ’ ಸಿನಿಮಾದಲ್ಲಿ ಸಮಂತಾ ಅವರು ನಟಿಸಿದ್ದಾರೆ. ಅಲ್ಲದೇ, ‘ಸಿಟಾಡೆಲ್​’ ವೆಬ್​ ಸಿರೀಸ್​ನ ಇಂಡಿಯನ್​ ವರ್ಷನ್​ನಲ್ಲೂ ಅವರು ಅಭಿನಯಿಸಿದ್ದಾರೆ. ಈ ಚಿತ್ರಗಳ ಕೆಲಸಗಳ ಜೊತೆ ಕೆಲವು ಜಾಹೀರಾತುಗಳ ಚಿತ್ರೀಕರಣವನ್ನೂ ಅವರು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಲು ಸಜ್ಜಾಗಿದ್ದಾರೆ. ಸಿನಿಮಾ ಮತ್ತು ವೆಬ್​ ಸಿರೀಸ್​ನ ಪ್ರಚಾರ ಕಾರ್ಯದಲ್ಲಿ ಸಮಂತಾ ಭಾಗಿ ಆಗುವುದು ಬಹುತೇಕ ಅನುಮಾನ ಎನ್ನಲಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ