‘ಎರಡನೇ ಮದುವೆ ಆಗೋದು ವ್ಯರ್ಥ, ಮತ್ತೆ ಡಿವೋರ್ಸ್​ ಆಗಬಹುದು’; ಅಭಿಪ್ರಾಯ ತಿಳಿಸಿದ ಸಮಂತಾ

ಸಮಂತಾ ಯಾಕೋ ಎರಡನೇ ಮದುವೆ ಕುರಿತು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಅವರು ಈ ಬಗ್ಗೆ ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ವಿವರಿಸಿದ್ದಾರೆ.  

‘ಎರಡನೇ ಮದುವೆ ಆಗೋದು ವ್ಯರ್ಥ, ಮತ್ತೆ ಡಿವೋರ್ಸ್​ ಆಗಬಹುದು’; ಅಭಿಪ್ರಾಯ ತಿಳಿಸಿದ ಸಮಂತಾ
ಸಮಂತಾ
Follow us
|

Updated on: Dec 18, 2023 | 7:01 AM

ನಟಿ ಸಮಂತಾ (Samantha Ruth Prabhu) ಹಾಗೂ ನಾಗ ಚೈತನ್ಯ ವಿಚ್ಛೇದನ ಘೋಷಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ತಂದಿತ್ತು. ಎಲ್ಲರೂ ಈ ನಿರ್ಧಾರದಿಂದ ಅಚ್ಚರಿಗೊಂಡರು. ಸಮಂತಾ ಈ ರೀತಿಯ ಗಟ್ಟಿ ನಿರ್ಧಾರ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಮಂತಾ ಅವರು ವಿಚ್ಛೇದನ ಪಡೆಯಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಸಮಂತಾ ಎರಡನೇ ಮದುವೆ ಆಗುತ್ತಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಉತ್ತರ ನೀಡಿದ್ದಾರೆ. ಎರಡನೇ ಮದುವೆ ಆಗೋದು ವ್ಯರ್ಥ ಎಂದಿದ್ದಾರೆ.

ನಟ ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ಸಮಂತಾ ಹಲವು ಕಡೆ ತೆರಳಿದರು. ಅನೇಕ ಮಂದಿರಗಳಿಗೆ ಅವರು ಭೇಟಿ ನೀಡಿದರು. ಸಮಂತಾ ಮನಸ್ಸಿನಲ್ಲಿ ಇರುವ ನೋವು ಕಡಿಮೆ ಆಗುವಂಥದ್ದಲ್ಲ. ಈ ಮಧ್ಯೆ ಅನೇಕರು ಸಮಂತಾಗೆ ಎರಡನೇ ಮದುವೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಸಮಂತಾ ಯಾಕೋ ಎರಡನೇ ಮದುವೆ ಕುರಿತು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಅವರು ಈ ಬಗ್ಗೆ ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ವಿವರಿಸಿದ್ದಾರೆ.

ಇತ್ತೀಚೆಗೆ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೋತ್ತರ ನಡೆಸಿದ್ದರು. ‘ನೀವು ಎರಡನೇ ಮದುವೆ ಆಗುವುದಿಲ್ಲವೇ’ ಎನ್ನುವ ಪ್ರಶ್ನೆ ಎದುರಾಯಿತು. ಇದಕ್ಕೆ ಅವರು ಲಾಜಿಕ್​ ಆಗಿ ಉತ್ತರ ನೀಡಿದ್ದಾರೆ. ‘ಅಂಕಿ ಅಂಶಗಳ ಪ್ರಕಾರ ಇದೊಂದು ಕೆಟ್ಟ ಹೂಡಿಕೆ’ ಎಂದಿದ್ದಾರೆ ಸಮಂತಾ. ಹೀಗೆ ಹೇಳಲು ಅವರು ಕಾರಣವನ್ನೂ ನೀಡಿದ್ದಾರೆ. ‘ಮೊದಲ ಮದುವೆಯಲ್ಲಿ ವಿಚ್ಛೇದನದ ಸಾಧ್ಯತೆ ಶೇ.50 ಇರುತ್ತದೆ. ಎರಡು ಹಾಗೂ ಮೂರನೇ ಮದುವೆಯಲ್ಲಿ ಈ ಪ್ರಮಾಣ ಅನುಕ್ರಮವಾಗಿ ಶೇ. 67 ಹಾಗೂ ಶೇ.73 ಇರುತ್ತದೆ’ ಎಂದಿದ್ದಾರೆ ಅವರು. ಈ ಮೂಲಕ ಮತ್ತೆ ಮದುವೆ ಆಗುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಿರ್ಮಾಣ ಸಂಸ್ಥೆ ಆರಂಭಿಸಿದ ಸಮಂತಾ, ನಿರ್ಮಿಸುತ್ತಿರುವುದು ಸಿನಿಮಾ ಅಲ್ಲ, ಮತ್ತೇನು?

ಸಮಂತಾ ಅವರು ಇತ್ತೀಚೆಗೆ ಸಾಕಷ್ಟು ಏಳುಬೀಳು ಕಂಡಿದ್ದಾರೆ. ಎಲ್ಲವನ್ನೂ ಎದುರಿಸಿ ಅವರು ಮುನ್ನುಗ್ಗುತ್ತಿದ್ದಾರೆ. ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ವಿಳಂಬ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ