AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ಮದುವೆ ಆಗೋದು ವ್ಯರ್ಥ, ಮತ್ತೆ ಡಿವೋರ್ಸ್​ ಆಗಬಹುದು’; ಅಭಿಪ್ರಾಯ ತಿಳಿಸಿದ ಸಮಂತಾ

ಸಮಂತಾ ಯಾಕೋ ಎರಡನೇ ಮದುವೆ ಕುರಿತು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಅವರು ಈ ಬಗ್ಗೆ ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ವಿವರಿಸಿದ್ದಾರೆ.  

‘ಎರಡನೇ ಮದುವೆ ಆಗೋದು ವ್ಯರ್ಥ, ಮತ್ತೆ ಡಿವೋರ್ಸ್​ ಆಗಬಹುದು’; ಅಭಿಪ್ರಾಯ ತಿಳಿಸಿದ ಸಮಂತಾ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Dec 18, 2023 | 7:01 AM

Share

ನಟಿ ಸಮಂತಾ (Samantha Ruth Prabhu) ಹಾಗೂ ನಾಗ ಚೈತನ್ಯ ವಿಚ್ಛೇದನ ಘೋಷಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ತಂದಿತ್ತು. ಎಲ್ಲರೂ ಈ ನಿರ್ಧಾರದಿಂದ ಅಚ್ಚರಿಗೊಂಡರು. ಸಮಂತಾ ಈ ರೀತಿಯ ಗಟ್ಟಿ ನಿರ್ಧಾರ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಮಂತಾ ಅವರು ವಿಚ್ಛೇದನ ಪಡೆಯಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಸಮಂತಾ ಎರಡನೇ ಮದುವೆ ಆಗುತ್ತಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಉತ್ತರ ನೀಡಿದ್ದಾರೆ. ಎರಡನೇ ಮದುವೆ ಆಗೋದು ವ್ಯರ್ಥ ಎಂದಿದ್ದಾರೆ.

ನಟ ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ಸಮಂತಾ ಹಲವು ಕಡೆ ತೆರಳಿದರು. ಅನೇಕ ಮಂದಿರಗಳಿಗೆ ಅವರು ಭೇಟಿ ನೀಡಿದರು. ಸಮಂತಾ ಮನಸ್ಸಿನಲ್ಲಿ ಇರುವ ನೋವು ಕಡಿಮೆ ಆಗುವಂಥದ್ದಲ್ಲ. ಈ ಮಧ್ಯೆ ಅನೇಕರು ಸಮಂತಾಗೆ ಎರಡನೇ ಮದುವೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಸಮಂತಾ ಯಾಕೋ ಎರಡನೇ ಮದುವೆ ಕುರಿತು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಅವರು ಈ ಬಗ್ಗೆ ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ವಿವರಿಸಿದ್ದಾರೆ.

ಇತ್ತೀಚೆಗೆ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೋತ್ತರ ನಡೆಸಿದ್ದರು. ‘ನೀವು ಎರಡನೇ ಮದುವೆ ಆಗುವುದಿಲ್ಲವೇ’ ಎನ್ನುವ ಪ್ರಶ್ನೆ ಎದುರಾಯಿತು. ಇದಕ್ಕೆ ಅವರು ಲಾಜಿಕ್​ ಆಗಿ ಉತ್ತರ ನೀಡಿದ್ದಾರೆ. ‘ಅಂಕಿ ಅಂಶಗಳ ಪ್ರಕಾರ ಇದೊಂದು ಕೆಟ್ಟ ಹೂಡಿಕೆ’ ಎಂದಿದ್ದಾರೆ ಸಮಂತಾ. ಹೀಗೆ ಹೇಳಲು ಅವರು ಕಾರಣವನ್ನೂ ನೀಡಿದ್ದಾರೆ. ‘ಮೊದಲ ಮದುವೆಯಲ್ಲಿ ವಿಚ್ಛೇದನದ ಸಾಧ್ಯತೆ ಶೇ.50 ಇರುತ್ತದೆ. ಎರಡು ಹಾಗೂ ಮೂರನೇ ಮದುವೆಯಲ್ಲಿ ಈ ಪ್ರಮಾಣ ಅನುಕ್ರಮವಾಗಿ ಶೇ. 67 ಹಾಗೂ ಶೇ.73 ಇರುತ್ತದೆ’ ಎಂದಿದ್ದಾರೆ ಅವರು. ಈ ಮೂಲಕ ಮತ್ತೆ ಮದುವೆ ಆಗುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಿರ್ಮಾಣ ಸಂಸ್ಥೆ ಆರಂಭಿಸಿದ ಸಮಂತಾ, ನಿರ್ಮಿಸುತ್ತಿರುವುದು ಸಿನಿಮಾ ಅಲ್ಲ, ಮತ್ತೇನು?

ಸಮಂತಾ ಅವರು ಇತ್ತೀಚೆಗೆ ಸಾಕಷ್ಟು ಏಳುಬೀಳು ಕಂಡಿದ್ದಾರೆ. ಎಲ್ಲವನ್ನೂ ಎದುರಿಸಿ ಅವರು ಮುನ್ನುಗ್ಗುತ್ತಿದ್ದಾರೆ. ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ವಿಳಂಬ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ