AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ; ಕಾರಣ ಏನು?

ಸಮಂತಾ ಅವರ ಖಾತೆಯಲ್ಲಿ ತೆಲಂಗಾಣ ಸಚಿವ ಕೆ.ಟಿ ರಾಮ್​ರಾವ್ ಅವರ ಫೋಟೋ ಪೋಸ್ಟ್ ಮಾಡಲಾಗಿತ್ತು. ಪೋಸ್ಟ್ ಆದ ಕೆಲವೇ ನಿಮಿಷಗಳಲ್ಲಿ ಈ ಫೋಟೋವನ್ನು ಸಮಂತಾ ಖಾತೆಯಿಂದ ಡಿಲೀಟ್ ಮಾಡಲಾಗಿದೆ.

ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ; ಕಾರಣ ಏನು?
ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 07, 2022 | 2:39 PM

Share

ಸೆಲೆಬ್ರಿಟಿಗಳ ಸೋಶಿಯಲ್ ಮೀಡಿಯಾ (Social Media) ಖಾತೆ ಮೇಲೆ ಹ್ಯಾಕರ್​ಗಳ ಕಣ್ಣು ಆಗಾಗ ಬೀಳುತ್ತಲೇ ಇರುತ್ತದೆ. ಸ್ಟಾರ್​​ಗಳ ಖಾತೆಗೆ ಕನ್ನ ಹಾಕಿ ಸಂಬಂಧವೇ ಇಲ್ಲದ ಫೋಟೋಗಳನ್ನು ಪೋಸ್ಟ್​ ಮಾಡಲಾಗುತ್ತದೆ. ಸಮಂತಾ (Samantha) ಅವರ ಖಾತೆಯಲ್ಲಿ ತೆಲಂಗಾಣ (Telangana) ಸಚಿವರೊಬ್ಬರ ಫೋಟೋ ಪೋಸ್ಟ್ ಆಗಿದೆ. ತಕ್ಷಣಕ್ಕೆ ಅದನ್ನು ಡಿಲೀಟ್ ಮಾಡಲಾಗಿದೆ. ಆದರೆ, ಕೆಲವರು ಇದರ ಸ್ಕ್ರೀನ್​ಶಾಟ್​ಗಳನ್ನು ತೆಗೆದುಕೊಂಡು ವೈರಲ್ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಈ ರೀತಿ ಆಗಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಆದರೆ ಫ್ಯಾನ್ಸ್ ವಲಯದಲ್ಲಿ ಬೇರೆಯದೇ ವಿಚಾರ ಓಡಾಡುತ್ತಿದೆ.

ಸಮಂತಾ ಅವರ ಖಾತೆಯಲ್ಲಿ ತೆಲಂಗಾಣ ಸಚಿವ ಕೆ.ಟಿ ರಾಮ್​ರಾವ್ ಅವರ ಫೋಟೋ ಪೋಸ್ಟ್ ಮಾಡಲಾಗಿತ್ತು. ಪೋಸ್ಟ್ ಆದ ಕೆಲವೇ ನಿಮಿಷಗಳಲ್ಲಿ ಈ ಫೋಟೋವನ್ನು ಸಮಂತಾ ಖಾತೆಯಿಂದ ಡಿಲೀಟ್ ಮಾಡಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸಮಂತಾ ಅವರ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣವನ್ನು ಫ್ಯಾನ್ಸ್ ಹುಡುಕಿ ತೆಗೆದಿದ್ದಾರೆ.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಸಮಂತಾ ಹಾಗೂ ಕೆ.ಟಿ ರಾಮ್​ರಾವ್​ ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ಒಂದೇ ಪಿಆರ್​ ಏಜೆನ್ಸಿ ಹ್ಯಾಂಡಲ್​ ಮಾಡುತ್ತಿದೆ. ಕೆ.ಟಿ. ರಾಮ್​ರಾವ್ ಖಾತೆಗೆ ಪೋಸ್ಟ್​ ಆಗಬೇಕಿದ್ದ ಫೋಟೋ ತಪ್ಪಾಗಿ ಸಮಂತಾ ಅವರ ಖಾತೆಯಲ್ಲಿ ಅಪ್​ಲೋಡ್​ ಆಗಿದೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ಬಗ್ಗೆ ಹಲವಾರು ಟ್ವೀಟ್​ಗಳನ್ನು ಮಾಡುತ್ತಿದ್ದಾರೆ.

ಸಮಂತಾ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. 10 ವರ್ಷಗಳ ಕಾಲ ಪ್ರೀತಿಯಲ್ಲಿದ್ದ ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆದರು. ನಾಲ್ಕು ವರ್ಷಗಳ ಕಾಲ ಸಂಸಾರ ನಡೆಸಿದ ಈ ಜೋಡಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ವಿಚ್ಛೇದನ ಪಡೆದರು. ‘ಕಾಫಿ ವಿತ್ ಕರಣ್​ 7’ ಶೋನಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಇದರ ಪ್ರೋಮೋಗಳು ವೈರಲ್ ಆಗಿವೆ. ವಿಚ್ಛೇದನದ ಬಳಿಕ ಅವರು ಮೊದಲ ಬಾರಿಗೆ ಶೋ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇದಿಕೆ ಮೇಲೆ ಅವರು ವಿಚ್ಛೇದನಕ್ಕೆ ಕಾರಣ ವಿವರಿಸಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಮಂತಾ, ಆಲಿಯಾ Etc..: ‘ಕಾಫಿ ವಿತ್​ ಕರಣ್​’ ಶೋಗೆ ಬರುವ ಸೆಲೆಬ್ರಿಟಿಗಳು ಇವರೇ

Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!