AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ; ಕಾರಣ ಏನು?

ಸಮಂತಾ ಅವರ ಖಾತೆಯಲ್ಲಿ ತೆಲಂಗಾಣ ಸಚಿವ ಕೆ.ಟಿ ರಾಮ್​ರಾವ್ ಅವರ ಫೋಟೋ ಪೋಸ್ಟ್ ಮಾಡಲಾಗಿತ್ತು. ಪೋಸ್ಟ್ ಆದ ಕೆಲವೇ ನಿಮಿಷಗಳಲ್ಲಿ ಈ ಫೋಟೋವನ್ನು ಸಮಂತಾ ಖಾತೆಯಿಂದ ಡಿಲೀಟ್ ಮಾಡಲಾಗಿದೆ.

ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ; ಕಾರಣ ಏನು?
ತೆಲಂಗಾಣ ಸಚಿವನ ಫೋಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಸಮಂತಾ
TV9 Web
| Edited By: |

Updated on: Jul 07, 2022 | 2:39 PM

Share

ಸೆಲೆಬ್ರಿಟಿಗಳ ಸೋಶಿಯಲ್ ಮೀಡಿಯಾ (Social Media) ಖಾತೆ ಮೇಲೆ ಹ್ಯಾಕರ್​ಗಳ ಕಣ್ಣು ಆಗಾಗ ಬೀಳುತ್ತಲೇ ಇರುತ್ತದೆ. ಸ್ಟಾರ್​​ಗಳ ಖಾತೆಗೆ ಕನ್ನ ಹಾಕಿ ಸಂಬಂಧವೇ ಇಲ್ಲದ ಫೋಟೋಗಳನ್ನು ಪೋಸ್ಟ್​ ಮಾಡಲಾಗುತ್ತದೆ. ಸಮಂತಾ (Samantha) ಅವರ ಖಾತೆಯಲ್ಲಿ ತೆಲಂಗಾಣ (Telangana) ಸಚಿವರೊಬ್ಬರ ಫೋಟೋ ಪೋಸ್ಟ್ ಆಗಿದೆ. ತಕ್ಷಣಕ್ಕೆ ಅದನ್ನು ಡಿಲೀಟ್ ಮಾಡಲಾಗಿದೆ. ಆದರೆ, ಕೆಲವರು ಇದರ ಸ್ಕ್ರೀನ್​ಶಾಟ್​ಗಳನ್ನು ತೆಗೆದುಕೊಂಡು ವೈರಲ್ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಈ ರೀತಿ ಆಗಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಆದರೆ ಫ್ಯಾನ್ಸ್ ವಲಯದಲ್ಲಿ ಬೇರೆಯದೇ ವಿಚಾರ ಓಡಾಡುತ್ತಿದೆ.

ಸಮಂತಾ ಅವರ ಖಾತೆಯಲ್ಲಿ ತೆಲಂಗಾಣ ಸಚಿವ ಕೆ.ಟಿ ರಾಮ್​ರಾವ್ ಅವರ ಫೋಟೋ ಪೋಸ್ಟ್ ಮಾಡಲಾಗಿತ್ತು. ಪೋಸ್ಟ್ ಆದ ಕೆಲವೇ ನಿಮಿಷಗಳಲ್ಲಿ ಈ ಫೋಟೋವನ್ನು ಸಮಂತಾ ಖಾತೆಯಿಂದ ಡಿಲೀಟ್ ಮಾಡಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸಮಂತಾ ಅವರ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣವನ್ನು ಫ್ಯಾನ್ಸ್ ಹುಡುಕಿ ತೆಗೆದಿದ್ದಾರೆ.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಸಮಂತಾ ಹಾಗೂ ಕೆ.ಟಿ ರಾಮ್​ರಾವ್​ ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ಒಂದೇ ಪಿಆರ್​ ಏಜೆನ್ಸಿ ಹ್ಯಾಂಡಲ್​ ಮಾಡುತ್ತಿದೆ. ಕೆ.ಟಿ. ರಾಮ್​ರಾವ್ ಖಾತೆಗೆ ಪೋಸ್ಟ್​ ಆಗಬೇಕಿದ್ದ ಫೋಟೋ ತಪ್ಪಾಗಿ ಸಮಂತಾ ಅವರ ಖಾತೆಯಲ್ಲಿ ಅಪ್​ಲೋಡ್​ ಆಗಿದೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ಬಗ್ಗೆ ಹಲವಾರು ಟ್ವೀಟ್​ಗಳನ್ನು ಮಾಡುತ್ತಿದ್ದಾರೆ.

ಸಮಂತಾ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. 10 ವರ್ಷಗಳ ಕಾಲ ಪ್ರೀತಿಯಲ್ಲಿದ್ದ ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆದರು. ನಾಲ್ಕು ವರ್ಷಗಳ ಕಾಲ ಸಂಸಾರ ನಡೆಸಿದ ಈ ಜೋಡಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ವಿಚ್ಛೇದನ ಪಡೆದರು. ‘ಕಾಫಿ ವಿತ್ ಕರಣ್​ 7’ ಶೋನಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಇದರ ಪ್ರೋಮೋಗಳು ವೈರಲ್ ಆಗಿವೆ. ವಿಚ್ಛೇದನದ ಬಳಿಕ ಅವರು ಮೊದಲ ಬಾರಿಗೆ ಶೋ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇದಿಕೆ ಮೇಲೆ ಅವರು ವಿಚ್ಛೇದನಕ್ಕೆ ಕಾರಣ ವಿವರಿಸಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಮಂತಾ, ಆಲಿಯಾ Etc..: ‘ಕಾಫಿ ವಿತ್​ ಕರಣ್​’ ಶೋಗೆ ಬರುವ ಸೆಲೆಬ್ರಿಟಿಗಳು ಇವರೇ

Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ