AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ

Samantha Ruth Prabhu: ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು.

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ
Samantha Ruth Prabhu
ಮಂಜುನಾಥ ಸಿ.
|

Updated on: Jun 16, 2026 | 12:11 PM

Share

ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು.

ಸಮಂತಾ ಅವರು ‘ಸಾಖಿ’ ಹೆಸರಿನ ಉಡುಪು ಬ್ರ್ಯಾಂಡ್​​ನಲ್ಲಿ ಕೋವಿಡ್ ಪ್ರಾರಂಭಕ್ಕೆ ಕೆಲ ತಿಂಗಳುಗಳ ಹಿಂದೆಯೇ ಹೂಡಿಕೆ ಮಾಡಿದರು. ಅವರೇ ಹೇಳಿಕೊಂಡಿರುವಂತೆ ಅದು ಅವರ ಮೊದಲ ಗಂಭೀರ ಹೂಡಿಕೆ. ಸ್ವಂತ ಹಣವನ್ನು ಆ ಉದ್ಯಮದಲ್ಲಿ ಅವರು ತೊಡಗಿಸಿದರಂತೆ. ಆರಂಭದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾದರೂ ಬಳಿಕ ಅದು ಲಾಭದ ಕಡೆಗೆ ಸಾಗಿತಂತೆ. ಈಗಲೂ ಅದು ಚೆನ್ನಾಗಿ ನಡೆಯುತ್ತಿದೆ ಎಂದಿದ್ದಾರೆ ಸಮಂತಾ.

ಸಮಂತಾ ಸೆಲೆಬ್ರಿಟಿ ಆಗಿದ್ದರೂ ಅವರು ಶಿಕ್ಷಣ ಕ್ಷೇತ್ರದಲ್ಲೂ ಹೂಡಿಕೆ ಮಾಡಿದ್ದಾರೆ. ಏಕಂ ಲರ್ನಿಂಗ್ ಸೆಂಟರ್ ಹೆಸರಿನ ಟ್ರೈನಿಂಗ್ ಉದ್ಯಮದಲ್ಲಿ ಅವರು ಪಾಲುದಾರರು. ಸಮಂತಾ ಹೇಳಿರುವಂತೆ ಅವರ ತಾಯಿ ಶಿಕ್ಷಕಿ ಆಗಿದ್ದರಂತೆ ಹಾಗಾಗಿ ಶಿಕ್ಷಣದ ಮೇಲೆ ಅವರಿಗೆ ಮೊದಲಿನಿಂದಲೂ ಆಸಕ್ತಿ ಹಾಗಾಗಿ ಅವರು ಏಕಂನಲ್ಲಿ ಹೂಡಿಕೆ ಮಾಡಿದರಂತೆ.

ಇದನ್ನೂ ಓದಿ:‘ಮಾ ಇಂಟಿ ಬಂಗಾರಂ’: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಮಂತಾ

ಅರ್ಬನ್ ಕಿಸಾನ್ ಹೆಸರಿನ ಸಂಸ್ಥೆಯಲ್ಲಿ ಸಮಂತಾ ಹೂಡಿಕೆ ಮಾಡಿದ್ದಾರೆ. ಇದು ಅಪಾರ್ಟ್​​ಮೆಂಟ್​​ಗಳಲ್ಲಿ ಅಥವಾ ನಗರ ಪ್ರದೇಶದ ಕಡಿಮೆ ಸ್ಥಳದಲ್ಲಿ ತರಕಾರಿ ಇನ್ನಿತರೆ ಪದಾರ್ಥಗಳನ್ನು ಬೆಳೆಸುವ ಹಾಗೂ ಬೆಳೆಯುವುದನ್ನು ಹೇಳಿಕೊಡುವ ಸಂಸ್ಥೆಯಾಗಿದೆ. ಕೋವಿಡ್ ಸಮಯದಲ್ಲಿ ಈ ಸಂಸ್ಥೆಯಲ್ಲಿ ಸಮಂತಾ ಹೂಡಿಕೆ ಮಾಡಿದ್ದು, ಈ ಸಂಸ್ಥೆ ಇದೇ ವರ್ಷ ತನ್ನ ಐಪಿಓ ಸಹ ಬಿಡುಗಡೆ ಮಾಡಲಿದೆಯಂತೆ.

ಸೀಕ್ರೆಟ್ ಅಲ್ಕೆಮಿಸ್ಟ್ ಎಂಬ ಸಂಸ್ಥೆಯಲ್ಲಿಯೂ ಸಮಂತಾ ಹೂಡಿಕೆ ಮಾಡಿದ್ದಾರೆ. ಸಮಂತಾ ಅವರು ಆರೋಗ್ಯ ಸಮಸ್ಯೆ ಎದುರಿಸಿದ್ದಾಗ ಅವರು ವಿದೇಶಗಳಿಗೆ ಚಿಕಿತ್ಸೆಗೆ ಹೋದಾಗ ಅಲ್ಲೆಲ್ಲ ಅರೋಮಾ ಥೆರಪಿ ಬಳಸುತ್ತಿದ್ದಿದ್ದನ್ನು ಗಮನಿಸಿದರಂತೆ. ಭಾರತದಲ್ಲಿ ಇದರ ಬಗ್ಗೆ ಹೆಚ್ಚು ಮಾಹಿತಿ, ಜಾಗೃತಿ ಇಲ್ಲವೆಂದು ತಿಳಿದು ಆ ಸಂಸ್ಥೆಯ ಮೇಲೆ ನಟಿ ಸಮಂತಾ ಹೂಡಿಕೆ ಮಾಡಿದ್ದಾರೆ.

ಚೆನ್ನೈ ಸೂಪರ್ ಚಾಂಪ್ಸ್ ಹೆಸರಿನ ಪಿಕಲ್ ಬಾಲ್ ತಂಡವನ್ನು ಸಮಂತಾ ಖರೀದಿಸಿದ್ದಾರೆ. ಪಿಕಲ್ ಬಾಲ್​​ ಕ್ರೀಡೆಯ ಮೇಲೆ ಸಾಕಷ್ಟು ಹೂಡಿಕೆ ಮಾಡಿರುವ ಸಮಂತಾ. ಆಟವನ್ನು ಹೆಚ್ಚು ಪ್ರಮೋಟ್ ಮಾಡುತ್ತಿದ್ದಾರೆ. ಸ್ವಂತ ತಂಡವನ್ನೂ ಹೊಂದಿದ್ದಾರೆ. ಇದರ ಜೊತೆಗೆ ‘ಟೇಕ್ 20’ ಹೆಸರಿನ ಯೂಟ್ಯೂಬ್ ಚಾನೆಲ್ ಹೋಂದಿರುವ ಸಮಂತಾ, ಅಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ 20 ನಿಮಿಷಗಳ ಕಂಟೆಂಟ್ ಅಪ್​​ಲೋಡ್ ಮಾಡುತ್ತಿರುತ್ತಾರೆ.

ಟ್ರಾಲಾಲಾ ಪ್ರೊಡಕ್ಷನ್ ಹೌಸ್ ಅನ್ನು ಸಹ ಸಮಂತಾ ಪ್ರಾರಂಭಿಸಿದ್ದು, ಆ ಪ್ರೊಡಕ್ಷನ್ ಹೌಸ್ ಮೂಲಕ ‘ಶುಭಂ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಅದು ಅವರ ಮೊದಲ ನಿರ್ಮಾಣದ ಸಿನಿಮಾ ಆಗಿತ್ತು. ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನೂ ಸಹ ಅದೇ ನಿರ್ಮಾಣ ಸಂಸ್ಥೆಯ ಮೂಲಕ ಸಹ ನಿರ್ಮಾಣ ಮಾಡುತ್ತಿದ್ದಾರೆ. ಇವುಗಳ ಜೊತೆಗೆ ಪ್ರತ್ಯುಷಾ ಫೌಂಡೇಶನ್ ಅನ್ನು ಸಮಂತಾ ಅವರು 2012-13 ರಲ್ಲಿ ಪ್ರಾರಂಭಿಸಿದರಂತೆ. ಅನಾಥ ಮಕ್ಕಳು ಮತ್ತು ಮಹಿಳೆಯರ ಪೋಷಣೆಗಾಗಿ ಈ ಫೌಂಡೇಶನ್ ಅನ್ನು ಸಮಂತಾ ಪ್ರಾರಂಭಿಸಿದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ