AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ಈ ಖ್ಯಾತ ನಟಿಯರ ವಿದ್ಯಾರ್ಹತೆ ಏನು? ಇಲ್ಲಿದೆ ಮಾಹಿತಿ

ಎಲ್ಲಾ ಅಭಿಮಾನಿಗಳಿಗೂ ಹೀರೋಯಿನ್​ಗಳ ಎಜ್ಯುಕೇಷನ್ ಕ್ವಾಲಿಫಿಕೇಷನ್ ಬಗ್ಗೆ ತಿಳಿದುಕೊಳ್ಳೋ ಕುತೂಹಲ ಇದ್ದೇ ಇರುತ್ತದೆ. ಹಾಗಾದರೆ, ದಕ್ಷಿಣ ಭಾರತದ ಈ ಹೀರೋಯಿನ್​ಗಳ ಶಿಕ್ಷಣದ ಬಗ್ಗೆ ನೀವು ತಿಳಿದುಕೊಳ್ಳಿ.

ದಕ್ಷಿಣ ಭಾರತದ ಈ ಖ್ಯಾತ ನಟಿಯರ  ವಿದ್ಯಾರ್ಹತೆ ಏನು? ಇಲ್ಲಿದೆ ಮಾಹಿತಿ
ದಕ್ಷಿಣ ಭಾರತದ ಈ ಖ್ಯಾತ ನಟಿಯರ ವಿದ್ಯಾರ್ಹತೆ ಏನು?
TV9 Web
| Edited By: |

Updated on: Jul 24, 2021 | 8:26 PM

Share

ದಕ್ಷಿಣ ಭಾರತದ ಸಾಕಷ್ಟು ಹೀರೋಯಿನ್​ಗಳು ಈಗ ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ಹಿಂದಿ ಚಿತ್ರರಂಗಕ್ಕೆ ಸರಿಯಾಗಿ ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿ ಬೆಳೆದು ನಿಂತಿದೆ. ರಶ್ಮಿಕಾ ಮಂದಣ್ಣ, ಪ್ರಿಯಾಮಣಿ, ಸಮಂತಾ ಅಕ್ಕಿನೇನಿ ಸೇರಿ ಸಾಕಷ್ಟು ಹೀರೋಯಿನ್​ಗಳು ಬಾಲಿವುಡ್​ಗೆ ಕಾಲಿಟ್ಟು ಹೆಸರು ಮಾಡಿದ್ದಾರೆ. ಎಲ್ಲಾ ಅಭಿಮಾನಿಗಳಿಗೂ ಹೀರೋಯಿನ್​ಗಳ ಎಜ್ಯುಕೇಷನ್ ಕ್ವಾಲಿಫಿಕೇಷನ್ ಬಗ್ಗೆ ತಿಳಿದುಕೊಳ್ಳೋ ಕುತೂಹಲ ಇದ್ದೇ ಇರುತ್ತದೆ. ಹಾಗಾದರೆ, ದಕ್ಷಿಣ ಭಾರತದ ಈ ಹೀರೋಯಿನ್​ಗಳ ಶಿಕ್ಷಣದ ಬಗ್ಗೆ ನೀವು ತಿಳಿದುಕೊಳ್ಳಿ.

ನಯನತಾರಾ

ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ. ಸಾಕಷ್ಟು ಸ್ಟಾರ್​ ಹೀರೋಗಳ ಜತೆ ನಟಿಸಿದ ಅನುಭವ ಅವರಿಗಿದೆ. ನಯನತಾರಾ ಕೇರಳದ ತಿರುವಲ್ಲದ ಕಾಲೇಜಿನಲ್ಲಿ ಇಂಗ್ಲಿಷ್​ ಸಾಹಿತ್ಯದಲ್ಲಿ ಬಿಎ ಪದವಿ ಪಡೆದುಕೊಂಡಿದ್ದಾರೆ.

ಸಾಯಿ ಪಲ್ಲವಿ

ಸಾಯಿ ಪಲ್ಲವಿ ತಮ್ಮ ಅದ್ಭುತ ನಟನೆಯ ಮೂಲಕ ಗಮನ ಸೆಳೆದಿದ್ದಾರೆ. ವಿಶೇಷ ಎಂದರೆ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿದ್ದಾರೆ. ವೈದ್ಯೆ ಆಗಬೇಕು ಎನ್ನುವುದು ಅವರ ಕನಸಾಗಿತ್ತು. ನಂತರ ಅವರು ಬಂದಿದ್ದು ಚಿತ್ರರಂಗಕ್ಕೆ.

ಸಮಂತಾ ಅಕ್ಕಿನೇನಿ

ಸಮಂತಾ ಅಕ್ಕಿನೇನಿ ದಕ್ಷಿಣ ಭಾರತದ ಅತ್ಯದ್ಭುತ ನಟಿ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಇವರು ಚೆನ್ನೈನ ಸ್ಟಲ್ಲಾ ಮ್ಯಾರಿಸ್​ ಕಾಲೇಜ್​ನಲ್ಲಿ ಬಿಕಾಮ್​ ಪದವಿ ಪೂರ್ಣಗೊಳಿಸಿದ್ದಾರೆ.

ರಶ್ಮಿಕಾ ಮಂದಣ್ಣ

‘ಕಿರಿಕ್​ ಪಾರ್ಟಿ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ನಂತರ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇವರು ಬೆಂಗಳೂರಿನ ಎಂ.ಎಸ್​. ರಾಮಯ್ಯ ಕಾಲೇಜಿನಲ್ಲಿ ಬ್ಯಾಚುಲರ್​ ಪದವಿ ಪಡೆದಿದ್ದಾರೆ.

ತ್ರಿಶಾ ಕೃಷ್ಣ

ತ್ರಿಶಾ ಅವರು ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇಟ್ಟುಕೊಂಡಿದ್ದಾರೆ. ಇವರು ಓದಿರೋದು ಬಿಬಿಎ. ಚೆನ್ನೈನ ಎಥಿರಾಜ್​ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ.

ಅನುಷ್ಕಾ ಶೆಟ್ಟಿ

ಬಾಹುಬಲಿಯಂಥ ಅದ್ಭುತ ಸಿನಿಮಾಗಳಲ್ಲಿ ನಟಿಸಿ ಅನುಷ್ಕಾ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರು ಬೆಂಗಳೂರಿನ ಮೌಂಟ್​ ಕಾರ್ಮೆಲ್​ ಕಾಲೇಜಿನಲ್ಲಿ ಬಿಸಿಎ ಪದವಿ ಪಡೆದಿದ್ದಾರೆ.

ಕಾಜಲ್​ ಅಗರ್​ವಾಲ್​

ಕಾಜಲ್​ ಅಗರ್​ವಾಲ್​ ಕೆಲ ತಿಂಗಳ ಹಿಂದೆ ಮದುವೆ ಆಗಿದ್ದರು. ಸದ್ಯ, ಕುಟುಂಬ ಹಾಗೂ ಸಿನಿಮಾ ಕೆಲಸಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ ಅವರು. ಮುಂಬೈನ ಕಾಲೇಜೊಂದರಲ್ಲಿ ಮಾಸ್​ ಮೀಡಿಯಾದಲ್ಲಿ ಡಿಗ್ರೀ ಪಡೆದುಕೊಂಡಿದ್ದಾರೆ ಕಾಜಲ್​.

ತಮನ್ನಾ ಭಾಟಿಯಾ

ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದುಕೊಂಡವರು ತಮನ್ನಾ. ಇವರು ಮುಂಬೈನ ನ್ಯಾಷನಲ್​ ಕಾಲೇಜಿನಲ್ಲಿ ಬಿಎ ಪದವಿ ಹೊಂದಿದ್ದಾರೆ.

ಶ್ರುತಿ ಹಾಸನ್

ಸಿನಿಮಾ ಹಿನ್ನೆಲೆಯಿಂದ ಬಂದವರು ಶ್ರುತಿ ಹಾಸನ್​. ಇವರು ಓದಿದ್ದು ಮುಂಬೈನ ಸೇಂಟ್​ ಆ್ಯಂಡ್ರೀವ್​ ಕಾಲೇಜಿನಲ್ಲಿ. ಮನಃಶಾಸ್ತ್ರದಲ್ಲಿ ಶ್ರುತಿ ಪದವೀಧರರಾಗಿದ್ದಾರೆ.

ಪ್ರಿಯಾಮಣಿ

ಪ್ರಿಯಾಮಣಿ ಬೆಂಗಳೂರಿನ ಬಿಶಪ್​ ಕಾಟನ್​ ವುಮನ್​ ಕಾಲೇಜಿನಲ್ಲಿ ಮನಃಶಾಸ್ತ್ರದ ಮೇಲೆ ಬಿಎ ಪದವಿ ಪಡೆದುಕೊಂಡಿದ್ದಾರೆ.

ನಿತ್ಯಾ ಮೆನನ್​

ದಕ್ಷಿಣ ಭಾರತದಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಿತ್ಯಾ ಮೆನ್​ ನಟಿಸಿದ್ದಾರೆ. ಇವರು ಮಣಿಪಾಲ್​ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದ​ ಮೇಲೆ ಪದವಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ರಶ್ಮಿಕಾ ಸಿನಿಮಾದಲ್ಲಿ ಸನ್ನಿ ಲಿಯೋನ್​ಗೆ 50 ಲಕ್ಷ ಸಂಬಳ; ಮಾಜಿ ನೀಲಿ ತಾರೆಗೆ ಏನು ಕೆಲಸ?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್