AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ಪುಷ್ಪ2 ನಲ್ಲಿ ಸೊಂಟ ಬಳುಕಿಸಲಿದ್ದಾರೆಯೇ ಸಮಂತಾ? ಉತ್ತರಿಸಿದ ಚೆಲುವೆ

ಪುಷ್ಪ ಸಿನಿಮಾದಲ್ಲಿ ಊ ಅಂಟಾವ ಊಹು ಅಂಟಾವ ಹಾಡಿಗೆ ಸೊಂಟ ಕುಣಿಸಿದ್ದ ಸಮಂತಾ, ಪುಷ್ಪ 2 ಸಿನಿಮಾದಲ್ಲಿಯೂ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ?

Pushpa 2: ಪುಷ್ಪ2 ನಲ್ಲಿ  ಸೊಂಟ ಬಳುಕಿಸಲಿದ್ದಾರೆಯೇ ಸಮಂತಾ? ಉತ್ತರಿಸಿದ ಚೆಲುವೆ
ಸಮಂತಾ
ಮಂಜುನಾಥ ಸಿ.
|

Updated on: Apr 13, 2023 | 4:45 PM

Share

ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ದೂಳೆಭ್ಬಿಸಿದೆ. ಟೀಸರ್​ನಲ್ಲಿ ಅಲ್ಲು ಅರ್ಜುನ್ ಹೊರತಾಗಿ ಇತರೆ ಪಾತ್ರಗಳ ಪರಿಚಯ ಅಷ್ಟಾಗಿ ಆಗಿಲ್ಲ. ಟೀಸರ್ ಬಿಡುಗಡೆ ಬಳಿಕ ಸಿನಿಮಾದಲ್ಲಿ ಸಮಂತಾ (Samantha) ಡ್ಯಾನ್ಸ್ ಇರಲಿದೆಯೇ ಎಂಬ ಚರ್ಚೆ ಜೋರಾಗಿದೆ. ಪುಷ್ಪ ಮೊದಲ ಭಾಗದಲ್ಲಿ ಸಮಂತಾರ ಐಟಂ ಹಾಡು ಸಖತ್ ಸದ್ದು ಮಾಡಿತ್ತಲ್ಲದೆ, ಸಿನಿಮಾದ ಭರ್ಜರಿ ಯಶಸ್ಸಿಗೆ ಕಾಣ್ಕೆಯನ್ನು ನೀಡಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳು ಸಮಂತಾರ ಹಾಡು ಪುಷ್ಪ 2 ನಲ್ಲಿ ಇರಲಿದೆಯೇ ಎಂದು ಕೇಳುತ್ತಿದ್ದಾರೆ. ಇದಕ್ಕೆ ಸ್ವತಃ ಸಮಂತಾ ಉತ್ತರಿಸಿದ್ದಾರೆ.

ಶಾಕುಂತಲಂ (Shakunthalam) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ನಟಿ ಸಮಂತಾ. ಪ್ರಚಾರಾರ್ಥ ನೀಡಿರುವ ಸಂದರ್ಶನದಲ್ಲಿ ಈ ಪ್ರಶ್ನೆಗೆ ಉತ್ತರ ನೀಡಿದ್ದು, ತಾವು ಪುಷ್ಪ 2 ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ”ಅಭಿಮಾನಿಗಳಿಗೆ ತುಸು ಬೇಸರವಾಗಬಹುದು ಆದರೆ ನಾನು ಪುಷ್ಪ 2 ಸಿನಿಮಾದಲ್ಲಿ ಇರುವುದಿಲ್ಲ” ಎಂದಿದ್ದಾರೆ. ಇದು ನಿಜಕ್ಕೂ ಸಮಂತಾ ಅಭಿಮಾನಿಗಳಿಗೆ, ಪುಷ್ಪ ಸಿನಿಮಾ ಸರಣಿಯ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಪುಷ್ಪ ಸಿನಿಮಾದಲ್ಲಿ ಸಮಂತಾ ಕುಣಿದಿದ್ದ ‘ಊ ಅಂಟಾವ ಊಹು ಅಂಟಾವ’ ಹಾಡು ಭಾರಿ ವೈರಲ್ ಆಗಿತ್ತು. ಸಿನಿಮಾ ಬಿಡುಗಡೆಗೆ ಮುನ್ನ ಸಿನಿಮಾಕ್ಕೆ ಬೇಕಿದ್ದ ಪ್ರಚಾರವನ್ನು ಆ ಹಾಡೊಂದೇ ಮಾಡಿಕೊಟ್ಟಿತ್ತು. ಆದರೆ ಸಿನಿಮಾದ ಆರಂಭದ ಚಿತ್ರೀಕರಣದ ಹಂತದಲ್ಲಿ ಸಮಂತಾರ ಐಟಂ ಹಾಡು ಇರಲಿಲ್ಲ. ಆದರೆ ಸಿನಿಮಾದ ಅಂತಿಮ ಘಟ್ಟದಲ್ಲಿ ಆ ಹಾಡನ್ನು ಸೇರಿಸಲಾಗಿತ್ತು. ಅದು ಮಾತ್ರವೇ ಅಲ್ಲದೆ ಸಮಂತಾರ ಮೊದಲ ಮತ್ತು ಏಕೈಕ ಐಟಂ ಹಾಡಾಗಿತ್ತು ಅದು.

ಸಮಂತಾ ಇಲ್ಲದಿದ್ದರೆ, ಪುಷ್ಪ 2 ನಲ್ಲಿ ಯಾರು ಐಟಂ ಹಾಡಿಗೆ ಸೊಂಟ ಕುಣಿಸಲಿದ್ದಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಪುಷ್ಪ ಸಿನಿಮಾದಲ್ಲಿ ಐಟಂ ಹಾಡು ದೊಡ್ಡ ಹಿಟ್ ಆಗಿರುವ ಕಾರಣ ಪುಷ್ಪ 2 ನಲ್ಲೂ ಐಟಂ ಹಾಡು ಪಕ್ಕಾ ಇರಲಿದೆ ಎನ್ನಲಾಗುತ್ತಿದೆ. ಆದರೆ ಹಾಡಿಗೆ ಸೊಂಟ ಕುಣಿಸುವುದು ಯಾರು ಎಂಬುದು ಇನ್ನೂ ಖಾತ್ರಿಯಾಗಿಲ್ಲ. ಪುಷ್ಪ 2 ನಲ್ಲಿ ನಟಿ ಸಾಯಿ ಪಲ್ಲವಿ ಸಹ ಇರಲಿದ್ದಾರೆ ಎಂಬ ಮಾತುಗಳು ಈ ಮೊದಲು ಕೇಳಿ ಬಂದಿದ್ದವು, ಅವರೇ ಏನಾದರೂ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಅನುಮಾನುಗಳು ಇವೆಯಾದರೂ, ಸಾಯಿ ಪಲ್ಲವಿ ಅಂಥಹಾ ಪಾತ್ರ ಅಥವಾ ಹಾಡುಗಳಿಂದ ಸದಾ ದೂರ.

ಇದನ್ನೂ ಓದಿ: Samantha: ದಕ್ಷಿಣದ ನಟಿಯರಿಗೆ ಬಾಲಿವುಡ್​ನಲ್ಲಿ ಆಗುತ್ತಿದ್ದ ಅವಮಾನಗಳ ನೆನಪಿಸಿಕೊಂಡ ಸಮಂತಾ

ಪುಷ್ಪ 2 ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು ಅವರ ಪೋಸ್ಟರ್ ಅನ್ನು ಕೆಲವು ದಿನಗಳ ಹಿಂದೆ ಚಿತ್ರತಂಡ ಬಿಡುಗಡೆ ಮಾಡಿದೆ. ಅವರೊಟ್ಟಿಗೆ ಇನ್ನೊಬ್ಬ ನಾಯಕಿಯೂ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಸಿನಿಮಾದಲ್ಲಿ ಫಹಾದ್ ಫಾಸಿಲ್ ಜೊತೆಗೆ ಮತ್ತೊಬ್ಬ ಪವರ್​ಫುಲ್ ವಿಲನ್ ಸಹ ಇರಲಿದ್ದಾರೆ. ಇನ್ನುಳಿದಂತೆ ಸಿನಿಮಾದ ಮೊದಲ ಭಾಗದಲ್ಲಿದ್ದ ಸುನಿಲ್, ಅನುಸೂಯ, ಡಾಲಿ ಧನಂಜಯ್ ಅವರುಗಳ ಪಾತ್ರಗಳು ಯಥಾವತ್ತು ಮುಂದವರೆಯಲಿವೆ. ಪುಷ್ಪ 2 ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಕೆಲವು ಭಾಗಗಳ ಚಿತ್ರೀಕರಣವಷ್ಟೆ ಬಾಕಿ ಇದೆ. ಸಿನಿಮಾದ ಟೀಸರ್​ನಲ್ಲಿ ಬಿಟ್ಟುಕೊಟ್ಟಿರುವ ಸುಳಿವಿನಂತೆ ಪುಷ್ಪ ಈಗ ದೊಡ್ಡ ವ್ಯಕ್ತಿಯಾಗಿ ಬೆಳೆದು ಜನರ ಬೆಂಬಲ ಪಡೆದುಕೊಂಡಿದ್ದಾನೆ. ಆದರೆ ಅವನ ಮೇಲೆ ಪೊಲೀಸರು ಹಾಗೂ ರಾಜಕಾರಣಿಗಳ ಕಣ್ಣು ಬಿದ್ದಿದ್ದು ಅವನನ್ನು ಕೊಲ್ಲಲು ಹವಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!