AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಅವಾಚ್ಯವಾಗಿ, ಅಶ್ಲೀಲವಾಗಿ ಟ್ರೋಲ್ ಮಾಡುವವರಿಗೆ ಕಿವಿ ಮಾತು ಹೇಳಿದ ಸಮಂತಾ

ಟಾಲಿವುಡ್ ನಟಿ ಸಮಂತಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಟ್ರೋಲಿಗರಿಗೆ ಕಿವಿಮಾತು ಹೇಳಿದ್ದಾರೆ. ಅಲ್ಲದೇ ಅವರಿಗೆ ಪ್ರಸ್ತುತ ಬರುತ್ತಿರುವ ಪಾತ್ರಗಳ ಕುರಿತಂತೆಯೂ ಮಾತನಾಡಿದ್ದಾರೆ.

Samantha: ಅವಾಚ್ಯವಾಗಿ, ಅಶ್ಲೀಲವಾಗಿ ಟ್ರೋಲ್ ಮಾಡುವವರಿಗೆ ಕಿವಿ ಮಾತು ಹೇಳಿದ ಸಮಂತಾ
ಸಮಂತಾ
TV9 Web
| Edited By: |

Updated on: Nov 30, 2021 | 8:38 PM

Share

ಟಾಲಿವುಡ್ ತಾರೆ ಸಮಂತಾ ‘ಫ್ಯಾಮಿಲಿ ಮ್ಯಾನ್ 2’ ವೆಬ್ ಸೀರೀಸ್ ಮೂಲಕ ದೇಶಾದ್ಯಂತ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಅಲ್ಲದೇ ಆ ಸೀರೀಸ್​ನಲ್ಲಿ ಸಮಂತಾ ನಿರ್ವಹಿಸಿದ್ದ ಪಾತ್ರ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದರ ನಂತರದಲ್ಲಿ ಅವರ ಸ್ಕ್ರಿಪ್ಟ್ ಆಯ್ಕೆಯಲ್ಲಿ ಬದಲಾಗಿದ್ದು, ಪಾತ್ರಾಧಾರಿತ ಚಿತ್ರಗಳನ್ನು ಆಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಪತಿ ನಾಗಚೈತನ್ಯ ಅವರಿಂದ ಬೇರ್ಪಟ್ಟ ನಂತರ ಕೂಡ ಸಮಂತಾ ಸಂಬಂಧದ ಕುರಿತಾಗಿ ಸಖತ್ ಸುದ್ದಿಯಲ್ಲಿದ್ದರು. ಆದರೆ ಅವರ ಈ ವೈಯಕ್ತಿಕ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ಗೆ ಒಳಗಾಯಿತು. ಅಲ್ಲದೇ, ಬಹಳಷ್ಟು ನೆಟ್ಟಿಗರು ಈಗಲೂ ಸಮಂತಾರನ್ನು ಅವಾಚ್ಯವಾಗಿ, ಅಶ್ಲೀಲವಾಗಿ ನಿಂದಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತಂತೆ ಸಮಂತಾ ಮೌನ ಮುರಿದಿದ್ದು, ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಟೀಕೆಗಳು ಸುಸಂಸ್ಕೃತ ರೀತಿಯಲ್ಲಿರಬೇಕು ಎಂದು ಇದೇ ವೇಳೆ ಸಮಂತಾ ನೆಟ್ಟಿಗರಿಗೆ ಕಿವಿಮಾತು ಹೇಳಿದ್ದಾರೆ.

Elle Indiaಕ್ಕೆ ನೀಡಿರುವ ಸಂದರ್ಶನದಲ್ಲಿ ಸಮಂತಾ ಹಲವು ವಿಚಾರಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ತಮಗೆದುರಾಗುತ್ತಿರವ ಟ್ರೋಲ್ ಕುರಿತಂತೆ ಮಾತನಾಡಿದ ಅವರು, ‘‘ಪ್ರತಿಯೊಬ್ಬರಿಗೂ ಮತ್ತೊಬ್ಬರ ಕುರಿತು ಭಿನ್ನಾಭಿಪ್ರಾಯಗಳಿರುತ್ತವೆ. ಅದಕ್ಕೂ ಮೀರಿ ಸ್ನೇಹ- ಪ್ರೀತಿಯನ್ನು ಉಳಿಸಿಕೊಳ್ಳಲು ಸಾಧ್ಯವಿದೆ. ನಾನು ಅವರಿಗೆ (ಟ್ರೋಲ್ ಮಾಡುವವರಿಗೆ) ಕೇಳಿಕೊಳ್ಳುವುದಿಷ್ಟೇ. ನಿಮ್ಮ ಅನಿಸಿಕೆಗಳನ್ನು ಸುಸಂಸ್ಕೃತ ರೀತಿಯಲ್ಲಿ ಹಂಚಿಕೊಳ್ಳಿ’’ ಎಂದು ಹೇಳಿದ್ದಾರೆ. ಈ ಮೂಲಕ ಸಭ್ಯ ಭಾಷೆಯ ಮೂಲಕ ರಚನಾತ್ಮಕ ಟೀಕೆಗೆ ಸ್ವಾಗತವಿದೆ ಎಂದು ಸಮಂತಾ ನುಡಿದಿದ್ದಾರೆ. ಇತ್ತೀಚೆಗೆ ಕೈಗೊಂಡ ಚಾರ್ ಧಾಮ್ ಯಾತ್ರೆಯ ಕುರಿತಂತೆ ಮಾತನಾಡಿದ ಸಮಂತಾ, ಅದು ಮುಂದುವರೆಯಲು ಬಹಳಷ್ಟು ಶಕ್ತಿ ನೀಡಿದೆ ಎಂದು ಹೇಳಿದ್ದಾರೆ.

ಸಮಂತಾ ಸದ್ಯ ಬಹಳಷ್ಟು ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿದ್ದಾರೆ. ಪಾತ್ರದ ವೈಶಿಷ್ಟ್ಯವನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ. ಪ್ರಸ್ತುತ ಅವರು ವಿಘ್ನೇಶ್ ಶಿವನ್ ನಿರ್ದೇಶನದ ‘ಕಾಥುವಾಕುಲ ರೆಂಡು ಕಾದಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಯನತಾರಾ ಕೂಡ ಕಾಣಿಸಿಕೊಂಡಿದ್ದಾರೆ. ಈರ್ವರು ದಕ್ಷಿಣ ಭಾರತದ ಖ್ಯಾತ ನಾಯಕಿಯರು ಒಟ್ಟಿಗೆ ಕಾಣಿಸಿಕೊಂಡಿರುವುದರ ಕುರಿತಂತೆ ಕೇಳಿದ ಪ್ರಶ್ನೆಗೆ ಸಮಂತಾ ಉತ್ತರಿಸಿದ್ದಾರೆ. ‘‘ಬಹಳಷ್ಟು ಬಾರಿ ಜನರು ಇಬ್ಬರು ನಾಯಕಿಯರು ಒಂದೇ ಚಿತ್ರದಲ್ಲಿದ್ದಾರೆಂದರೆ ಕಿತ್ತಾಡುತ್ತಾರೆ ಎಂದು ಭಾವಿಸತ್ತಾರೆ. ಆ ರೀತಿ ಯೋಚನೆ ಮಾಡುವುದು ಬಹಳ ತಮಾಷೆಯಾಗಿದೆ. ವಿಘ್ನೇಶ್ ಶಿವನ್ ಈ ಚಿತ್ರದಲ್ಲಿ ನಯನತಾರಾ ಅವರಷ್ಟೇ ಪ್ರಮುಖ ಪಾತ್ರ ತನ್ನದಾಗಿರಲಿದೆ ಎಂದಿದ್ದರು. ಅದರಂತೆಯೇ ಚಿತ್ರವೂ ಮೂಡಿಬಂದಿದೆ. ಇದು ಬಹಳ ಸಮಾಧಾನಕರ ವಿಚಾರ’’ ಎಂದು ಸಮಂತಾ ಹೇಳಿದ್ದಾರೆ.

ಇತ್ತೀಚೆಗೆ ಹೊಸ ಮಾದರಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕುರಿತಂತೆ ಮಾತನಾಡಿದ ಸಮಂತಾ, ಈ ಮೊದಲು ನಿರ್ವಹಿಸುತ್ತಿದ್ದ ಬಬ್ಲಿ, ಅಥವಾ ಪಾಪದ ಹುಡುಗಿಯ ಪಾತ್ರಗಳಲ್ಲಿಯೇ ಕಾಣಿಸಿಕೊಳ್ಳುತ್ತಿದ್ದೆ. ಆದರೆ ಈಗ ಅತ್ಯುತ್ತಮ ಪಾತ್ರಗಳು ಹುಡುಕಿಕೊಂಡು ಬರುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ:

Rajinikanth: ನೆಟ್​​ಫ್ಲಿಕ್ಸ್​​ನಲ್ಲೂ ರಜಿನಿ ಹವಾ; ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ತಲೈವಾ!

Shine Like A Rainbow: ಸಖತ್ ‘ಶೈನ್’ ಆಗುತ್ತಿದೆ ಸಾಫ್ಟ್‌ವೇರ್ ಇಂಜಿನಿಯರ್​ನ ಈ ರ‍್ಯಾಪ್ ಸಾಂಗ್!

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್