AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ನಟನೆಯ ‘ಯಶೋದ’ ಸಿನಿಮಾ ಹೇಗಿರಲಿದೆ?; ಇಲ್ಲಿದೆ ಝಲಕ್

ಗುರುವಾರ (ಏಪ್ರಿಲ್ 4) ಸಮಂತಾ ಇನ್​ಸ್ಟಾಗ್ರಾಮ್ ಖಾತೆಯಲ್ಲಿ 37 ಸೆಕೆಂಡ್​ನ ವಿಡಿಯೋ ಹಂಚಿಕೊಂಡಿದ್ದಾರೆ. ಇದು ‘ಯಶೋದ’ ಸಿನಿಮಾದ ಫಸ್ಟ್​ ಗ್ಲಿಂಪ್ಸ್ ವಿಡಿಯೋ.

ಸಮಂತಾ ನಟನೆಯ ‘ಯಶೋದ’ ಸಿನಿಮಾ ಹೇಗಿರಲಿದೆ?; ಇಲ್ಲಿದೆ ಝಲಕ್
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 05, 2022 | 1:48 PM

Share

2021ರಲ್ಲಿ ಸಮಂತಾ ಅವರ (Samantha) ಬಾಳಲ್ಲಿ ಒಂದು ಬಿರುಗಾಳಿ ಬೀಸಿತು. ಅವರು ಪತಿ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದರು. ಇದಾದ ಬಳಿಕ ಸಮಂತಾ ವೃತ್ತಿ ಜೀವನ ಸಂಪೂರ್ಣವಾಗಿ ಬದಲಾಯಿತು. ಅವರು ಭಿನ್ನ ಸಿನಿಮಾಗಳನ್ನು ಒಪ್ಪಿಕೊಳ್ಳೋಕೆ ಆರಂಭಿಸಿದರು. ಸಮಂತಾ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳಲ್ಲಿ ನಟಿಸೋಕೆ ಆದ್ಯತೆ ನೀಡುತ್ತಿದ್ದಾರೆ. ಆ ಪೈಕಿ ‘ಯಶೋದ’ ಸಿನಿಮಾ (Yashoda Movie) ಕೂಡ ಒಂದು. ಸೈಂಟಿಫಿಕ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾದ ಝಲಕ್ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಈ ವಿಡಿಯೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಿನಿಮಾ ಹೇಗಿರಬಹುದು ಎನ್ನುವ ಒಂದು ಸಣ್ಣ ಝಲಕ್ ವಿಡಿಯೋದಲ್ಲಿ ಸಿಕ್ಕಿದೆ.

ಗುರುವಾರ (ಏಪ್ರಿಲ್ 4) ಸಮಂತಾ ಇನ್​ಸ್ಟಾಗ್ರಾಮ್ ಖಾತೆಯಲ್ಲಿ 37 ಸೆಕೆಂಡ್​ನ ವಿಡಿಯೋ ಹಂಚಿಕೊಂಡಿದ್ದಾರೆ. ಇದು ‘ಯಶೋದ’ ಸಿನಿಮಾದ ಫಸ್ಟ್​ ಗ್ಲಿಂಪ್ಸ್ ವಿಡಿಯೋ. ಈ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಭಿನ್ನ ಶೈಲಿಯಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಹಾಗಾದರೆ, ಈ ಫಸ್ಟ್​ ಗ್ಲಿಂಪ್ಸ್​​ನಲ್ಲಿ ಏನೆಲ್ಲ ಹೇಳಲಾಗಿದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ.

ಇದನ್ನೂ ಓದಿ
Image
‘ಹೂ ಅಂತಿಯಾ ಮಾವ’ ಹಾಡಿಗೆ ವಿರಾಟ್ ಕೊಹ್ಲಿ ಡ್ಯಾನ್ಸ್ ನೋಡಿ ಸಮಂತಾ ಹೇಳಿದ್ದೇನು?  
Image
ಮಧ್ಯ ರಾತ್ರಿ ಸಮಂತಾಗೆ ಸರ್ಪ್ರೈಸ್​ ನೀಡಿದ ವಿಜಯ್​ ದೇವರಕೊಂಡ; ಸತ್ಯ ತಿಳಿದಾಗ ನಟಿಯ ಪ್ರತಿಕ್ರಿಯೆ ಏನು?
Image
ನಾಗಚೈತನ್ಯ 2ನೇ ಮದುವೆ ಗಾಸಿಪ್​: ಸಮಂತಾ ರೀತಿ ಹೆಣ್ಣು ಬೇಡವೇ ಬೇಡ ಅಂತಿದೆಯಾ ಅಕ್ಕಿನೇನಿ ಕುಟುಂಬ?
Image
ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?

ಚಿತ್ರದ ಮುಖ್ಯ ಪಾತ್ರಧಾರಿ (ಸಮಂತಾ) ಒಂದು ಕೊಠಡಿಯಲ್ಲಿ ಮಲಗಿದ್ದಾಳೆ. ಆಕೆ ಬೆಡ್​ನಿಂದ ಎದ್ದ ತಕ್ಷಣ ತಾನು ತೊಟ್ಟ ಬಟ್ಟೆಯನ್ನು ನೋಡಿಕೊಳ್ಳುತ್ತಾಳೆ. ಕೈಗೆ ಏನೋ ಬೆಲ್ಟ್​ ಕಟ್ಟಲಾಗಿದೆ. ಆಕೆಗೆ ಎಲ್ಲವೂ ಹೊಸ ರೀತಿಯಲ್ಲಿ ಕಾಣುತ್ತಿದೆ. ಬೆಡ್​ನಿಂದ ಇಳಿದು ಬರುವ ಅವಳು, ಕಿಟಕಿಯ ಹೊರ ಭಾಗದಲ್ಲಿರುವ ಪಾರಿವಾಳ ಮುಟ್ಟೋಕೆ ತೆರಳುತ್ತಾಳೆ. ತಕ್ಷಣ ಕ್ಯಾಮೆರಾ ಜೂಮ್​ಔಟ್ ಆಗುತ್ತದೆ. ಗಲ್ಲಿ ರೀತಿಯ ದಾರಿಯಲ್ಲಿ ಕ್ಯಾಮೆರಾ ಸಾಗುತ್ತದೆ. ನಂತರ ‘ಯಶೋದ’ ಎಂದು ಟೈಟಲ್ ಕಾರ್ಡ್ ತೋರಿಸಲಾಗುತ್ತದೆ.

‘ಯಶೋದ’ ಸಿನಿಮಾವನ್ನು ಹರಿ ಶಂಕರ್ ಹಾಗೂ ಹರೀಶ್ ನಾರಾಯಣ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀದೇವಿ ಮೂವೀಸ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಉನ್ನಿ ಮುಕುಂದನ್​ ಮತ್ತು ವರಲಕ್ಷ್ಮೀ ಶರತ್​ಕುಮಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಯಶೋದ’ ಆಗಸ್ಟ್ 12ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ಯಾವ ವಿಚಾರವನ್ನು ಹೇಳಲಾಗುತ್ತಿದೆ ಎನ್ನುವ ಕುತೂಹಲ ಸದ್ಯದ್ದು.

ಸಮಂತಾ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಾತುವಾಕುಲ ರೆಂಡು ಕಾದಲ್’ ಸಿನಿಮಾದಲ್ಲಿ. ವಿಜಯ್​ ಸೇತುಪತಿ ಹಾಗೂ ನಯನತಾರಾ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಹಲವು ಸಿನಿಮಾಗಳಲ್ಲಿ ಸಮಂತಾ ನಟಿಸುತ್ತಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ