AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ನಟನೆಯ‘ಯಶೋದಾ’ ಚಿತ್ರಕ್ಕೆ ಕೋರ್ಟ್​​ನಿಂದ ತಡೆ; ಒಟಿಟಿ ರಿಲೀಸ್​​ಗೆ ಸಂಕಷ್ಟ

‘ಯಶೋದಾ’ ಚಿತ್ರದಲ್ಲಿ ಸಮಂತಾ ಅವರು ಎರಡು ಶೇಡ್​ನಲ್ಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಡಿಗೆ ತಾಯ್ತನದ ವಿಚರವೂ ಸಿನಿಮಾದಲ್ಲಿ ಇದೆ. ಈ ಚಿತ್ರ ಈಗ ವಿವಾದದ ಕೇಂದ್ರ ಬಿಂದು ಆಗಿದೆ. ‘

ಸಮಂತಾ ನಟನೆಯ‘ಯಶೋದಾ’ ಚಿತ್ರಕ್ಕೆ  ಕೋರ್ಟ್​​ನಿಂದ ತಡೆ; ಒಟಿಟಿ ರಿಲೀಸ್​​ಗೆ ಸಂಕಷ್ಟ
ಸಮಂತಾ
TV9 Web
| Edited By: |

Updated on: Nov 25, 2022 | 8:02 AM

Share

ನಟಿ ಸಮಂತಾ (Samantha) ನಟನೆಯ ‘ಯಶೋದಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 30 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ಸಮಂತಾ ದೊಡ್ಡ ಗೆಲುವು ಕಂಡಿದ್ದಾರೆ. ಅನಾರೋಗ್ಯದ ನಡುವೆಯೂ ಸಮಂತಾ ಈ ಚಿತ್ರಕ್ಕೆ ಡಬ್ಬಿಂಗ್ ಮಾಡಿದ್ದರು. ಅದು ಫಲ ಕೊಟ್ಟಿದೆ. ಈ ಮಧ್ಯೆ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

‘ಯಶೋದಾ’ ಚಿತ್ರದಲ್ಲಿ ಸಮಂತಾ ಅವರು ಎರಡು ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಡಿಗೆ ತಾಯ್ತನದ ವಿಚಾರವೂ ಸಿನಿಮಾದಲ್ಲಿ ಇದೆ. ಈ ಚಿತ್ರ ಈಗ ವಿವಾದದ ಕೇಂದ್ರ ಬಿಂದು ಆಗಿದೆ. ‘ಯಶೋದಾ’ ಸಿನಿಮಾದಲ್ಲಿ ‘ಇವಾ​’ ಆಸ್ಪತ್ರೆಯನ್ನು ಕೆಟ್ಟ ರೀತಿಯಲ್ಲಿ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕ ಆಸ್ಪತ್ರೆಯ ಮ್ಯಾನೇಜ್​ಮೆಂಟ್ ಈ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು. ಸದ್ಯ, ಈ ಪ್ರಕರಣದಲ್ಲಿ ಆಸ್ಪತ್ರೆಯ ಪರವಾಗಿ ಕೋರ್ಟ್ ಆದೇಶ ನೀಡಿದೆ. ಒಟಿಟಿ ರಿಲೀಸ್​ ಅನ್ನು ಸದ್ಯಕ್ಕೆ ತಡೆದು ಕೋರ್ಟ್ ಆದೇಶ ಹೊರಡಿಸಿದೆ.

‘ಯಶೋದಾ’ ಚಿತ್ರದಲ್ಲಿ ನಮ್ಮ ಆಸ್ಪತ್ರೆಯ ಹೆಸರು ಬಳಕೆ ಆಗಿದೆ. ಆಸ್ಪತ್ರೆಯನ್ನು ಕೆಟ್ಟ ರೀತಿಯಲ್ಲಿ ತೋರಿಸಲಾಗಿದೆ. ಇದು ನಮ್ಮ ಆಸ್ಪತ್ರೆಯ ಘನತೆಗೆ ಧಕ್ಕೆ ತಂದಿದೆ’ ಎಂದು ಇವಾ ಆಸ್ಪತ್ರೆಯವರು ಆರೋಪಿಸಿದ್ದಾರೆ. ಸದ್ಯ ಒಟಿಟಿ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: ‘ಯಶೋದಾ ಚಿತ್ರಕ್ಕೆ ತೋರಿದ ಪ್ರೀತಿ, ಅಭಿಮಾನ ನನಗೆ ಸಿಕ್ಕ ಉತ್ತಮ ಉಡುಗೊರೆ’; ಸಮಂತಾ ಭಾವುಕ ಪತ್ರ

ಸದ್ಯ ಸಮಂತಾ ಕೈಯಲ್ಲಿ ಹಲವು ಆಫರ್​ಗಳಿವೆ. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಅವರು ಮತ್ತೆ ಸಿನಿಮಾ ಕೆಲಸಗಳತ್ತ ಮುಖ ಮಾಡಲಿದ್ದಾರೆ. ‘ಶಾಕುಂತಲಂ’, ‘ಖುಷಿ’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ.

ಸಮಂತಾ ಭಾವುಕ ಪತ್ರ

‘ಪ್ರೀತಿಯ ಅಭಮಾನಿಗಳೇ, ನೀವು ‘ಯಶೋದಾ’ ಚಿತ್ರಕ್ಕೆ ತೋರಿಸಿದ ಪ್ರೀತಿ, ಅಭಿಮಾನ ನನಗೆ ಸಿಕ್ಕ ಉತ್ತಮ ಉಡುಗೊರೆ. ನಿಮ್ಮ ಈ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ. ಇದು ಇಡೀ ‘ಯಶೋದಾ’ ಚಿತ್ರ ತಂಡದ ಶ್ರಮಕ್ಕೆ ಸಿಕ್ಕ ಪ್ರತಿಫಲ. ನೀವು ಥಿಯೇಟರ್​ಗಳಲ್ಲಿ ಸಂಭ್ರಮಿಸಿದ ಪರಿಯನ್ನು ನಾನು ಕಂಡಿದ್ದೇನೆ. ನಿಮ್ಮೆಲ್ಲಾ ಶುಭಾಶಯಗಳು ನನಗೆ ತಲುಪಿವೆ. ಪ್ರತಿಯೊಬ್ಬರಿಗೂ ನಾನು ಧನ್ಯವಾದ ತಿಳಿಸುತ್ತೇನೆ’ ಎಂದು ಪತ್ರ ಆರಂಭಿಸಿದ್ದರು ಸಮಂತಾ.

‘ಯಶೋದಾ ಚಿತ್ರದ ತಂಡಕ್ಕೂ ನಾನು ಧನ್ಯವಾದ ಅರ್ಪಿಸುತ್ತೇನೆ. ಅದರಲ್ಲಿಯೂ ನನ್ನ ಮೇಲೆ ನಂಬಿಕೆ ಇಟ್ಟು ಈ ಚಿತ್ರವನ್ನು ನಿರ್ಮಾಣ ಮಾಡಿದ ಕೃಷ್ಣ ಪ್ರಸಾದ್ ಅವರಿಗೆ ಮತ್ತು ನಿರ್ದೇಶಕರಾದ ಹರಿ-ಹರೀಶ್​ ಅವರಿಗೂ ತುಂಬು ಹೃದಯದ ಧನ್ಯವಾದ ತಿಳಿಸುತ್ತೇನೆ’ ಎಂದಿದ್ದರು ಅವರು. ಅದೇ ರೀತಿಯಾಗಿ ಚಿತ್ರದಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ ಇತರೆ ಸಹ ಕಲಾವಿದರಿಗೂ ಸಮಂತಾ ಧನ್ಯವಾದ ಹೇಳಿದ್ದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ