‘ಮಹಿಳೆಯರನ್ನು ಮಾತ್ರ ಪ್ರಶ್ನೆ ಮಾಡುವ ನಮ್ಮ ಸಮಾಜಕ್ಕೆ ನೈತಿಕತೆ ಇಲ್ಲ’; ಸಿಟ್ಟಾದ ಸಮಂತಾ

ವಿಚ್ಛೇದನದ ನಂತರ ಸಮಂತಾ ಸಾಕಷ್ಟು ಅರ್ಥಪೂರ್ಣ ಸಾಲು​ಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ. ಪ್ರತಿ ಸಾಲುಗಳಿಗೂ ನಾನಾ ಅರ್ಥಗಳು ಬರುವ ರೀತಿಯಲ್ಲಿದೆ.

‘ಮಹಿಳೆಯರನ್ನು ಮಾತ್ರ ಪ್ರಶ್ನೆ ಮಾಡುವ ನಮ್ಮ ಸಮಾಜಕ್ಕೆ ನೈತಿಕತೆ ಇಲ್ಲ’; ಸಿಟ್ಟಾದ ಸಮಂತಾ
ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 08, 2021 | 3:59 PM

ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ವಿಚ್ಛೇದನ ಪಡೆದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ನಾಲ್ಕು ವರ್ಷ ಸಂಸಾರ ನಡೆಸಿ ಈಗ ಇಬ್ಬರೂ ಬೇರೆ ಆಗಿದ್ದಾರೆ. ಸಮಂತಾ ಅವರದ್ದೇ ತಪ್ಪು ಎಂದು ಸಾಕಷ್ಟು ಮಂದಿ ಅವರ ಮೇಳೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಸಮಂತಾ ಕಿವಿಗೂ ಈ ವಿಚಾರ ಬಿದ್ದಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅವರು ನಿತ್ಯ ಹೊಸಹೊಸ ಪೋಸ್ಟ್ ಮಾಡುತ್ತಿದ್ದು, ಎಲ್ಲರನ್ನೂ ಪರೋಕ್ಷವಾಗಿ ಕುಟುಕುತ್ತಿದ್ದಾರೆ.

ವಿಚ್ಛೇದನದ ನಂತರ ಸಮಂತಾ ಸಾಕಷ್ಟು ಅರ್ಥಪೂರ್ಣ ಸಾಲು​ಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ. ಪ್ರತಿ ಸಾಲುಗಳಿಗೂ ನಾನಾ ಅರ್ಥಗಳು ಬರುವ ರೀತಿಯಲ್ಲಿದೆ. ಈಗ ಸಮಂತಾ ಹೊಸ ಸ್ಟೇಟಸ್​ ಹಾಕಿದ್ದಾರೆ. ಈ ಸ್ಟೇಟಸ್​ ನೋಡಿ ಸಾಕಷ್ಟು ರೀತಿಯಲ್ಲಿ ಅರ್ಥೈಸಲಾಗುತ್ತಿದೆ.

‘ಮಹಿಳೆಯರು ಏನೇ ಮಾಡಿದರೂ ಅದನ್ನು ನೈತಿಕವಾಗಿ ಪ್ರಶ್ನೆ ಮಾಡಲಾಗುತ್ತದೆ. ಆದರೆ, ಪುರುಷರು ಏನಾದರೂ ಮಾಡಿದಾಗ ಅದನ್ನು ನೈತಿಕ ಪ್ರಶ್ನೆ ಮಾಡುವುದಿಲ್ಲ ಎಂದಾದರೆ, ಅಂಥ ಸಮಾಜಕ್ಕೆ ನೈತಿಕತೆ ಇಲ್ಲ’ ಎನ್ನುವ ಸಾಲುಗಳನ್ನು ಸಮಂತಾ ಹಾಕಿದ್ದಾರೆ. ಸಮಾಜದಲ್ಲಿ ಪುರುಷರು ತಪ್ಪು ಮಾಡಿದಾಗ ಒಂದು ರೀತಿಯಲ್ಲಿ ನೋಡಿದರೆ, ಮಹಿಳೆಯರು ತಪ್ಪು ಮಾಡಿದಾಗ ಮತ್ತೊಂದು ರೀತಿಯಲ್ಲಿ ನೋಡಲಾಗುತ್ತದೆ. ಇದು ತಪ್ಪು ಎನ್ನುವುದನ್ನು ಸಮಂತಾ ಹೇಳ ಹೊರಟಿದ್ದಾರೆ. ಇನ್ನೂ ಕೆಲವರು, ಈ ಸಾಲುಗಳಿಗೆ ಸಮಂತಾ ಅವರ ವಿಚ್ಛೇದನ ಪ್ರಕರಣವನ್ನು ತಾಳೆ ಮಾಡಿ ನೋಡುತ್ತಿದ್ದಾರೆ.

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಸಮಂತಾ ಅವರು ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಸಮಂತಾ ವಿಚ್ಛೇದನ ಪಡೆದ ನಂತರ ಒಂದು ಬ್ರೇಕ್​ ಪಡೆದುಕೊಂಡಿದ್ದರು. ಆದರೆ, ಈಗ ಅವರು ಮತ್ತೆ ಕೆಲಸಕ್ಕೆ ಮರಳೋಕೆ ನಿರ್ಧರಿಸಿದ್ದಾರೆ. ಈ ಕಾರಣಕ್ಕೆ ಅವರು ಇತ್ತೀಚೆಗೆ ಜಾಹೀರಾತಿನ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಇದರ ಜತೆಗೆ ಅವರು ಹೊಸ ಸಿನಿಮಾದ ಕಥೆ ಕೂಡ ಕೇಳುತ್ತಿದ್ದಾರೆ. ಈಗ ಅವರು ಕಿರುತೆರೆ ಶೋನಲ್ಲಿ ಮರಳೋಕೆ ರೆಡಿ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ವಿಚ್ಛೇದನದ ನಂತರ ಕಿರುತೆರೆಯಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆದ್ರು ಸಮಂತಾ

ಸಮಂತಾ ದೇಹದ ಮೇಲಿರುವ ಟ್ಯಾಟೂ ಗತಿಯೇನು? ಅದರಲ್ಲಿದೆ ನಾಗ ಚೈತನ್ಯ ನೆನಪು

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್